Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...