Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...