Homeಮುಖಪುಟನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

- Advertisement -
- Advertisement -

ಬಾಲಿವುಡ್‌ ನಟ ಅಮೀರ್‌ ಖಾನ್‌ ಮತ್ತು ನಿರ್ಮಾಪಕಿ ಕಿರಣ್ ರಾವ್‌‌ ತಾವಿಬ್ಬರು ವಿಚ್ಛೇದಿತರಾಗಿದ್ದೇವೆ ಎಂದು ಘೋಷಿಸಿದ್ದಾರೆ. ವಿಚ್ಛೇದನೆಗೊಂಡರೂ ಮಗ ಆಜಾದ್ ರಾವ್ ಖಾನ್‌ಗೆ ಇಬ್ಬರೂ ಪೋಷಕರಾಗಿ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ. ಅವರಿಬ್ಬರೂ ಮದುವೆಯಾಗಿ 15 ವರ್ಷಗಳಾಗಿದೆ. ಶನಿವಾರ ಜಂಟಿ ಹೇಳಿಕೆ ನೀಡಿದ ಅವರು, “ತಮ್ಮ ಮಗ ಆಜಾದ್‌ಗೆ ಪೋಷಕರಾಗಿ ಮುಂದುವರೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಮೀರ್ ಮತ್ತು ಕಿರಣ್ ನೀಡಿದ ಜಂಟಿ ಹೇಳಿಕೆಯಲ್ಲಿ, “ಈ 15 ಸುಂದರ ವರ್ಷಗಳಲ್ಲಿ ನಾವು ಒಟ್ಟಿಗೆ ಜೀವಮಾನದ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ. ನಮ್ಮ ಜೀವನ ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರಾಗಿ ಮತ್ತು ಕುಟುಂಬವಾಗಿ ಇರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

“ನಾವು ಸ್ವಲ್ಪ ಸಮಯದ ಹಿಂದೆಯೆ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೆವು. ನಾವು ಮಾಡಿಕೊಂಡಿರುವ ವ್ಯವಸ್ಥೆ ಪ್ರಕಾರ ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸಿದರೂ, ವಿಸ್ತೃತ ಕುಟುಂಬದ ರೀತಿಯಲ್ಲಿ ನಮ್ಮ ಜೀವನ ಹಂಚಿಕೊಳ್ಳಲಿದ್ದೇವೆ. ನಮ್ಮ ಮಗ ಆಜಾದ್​ಗೆ ನಾವಿಬ್ಬರೂ ಪೋಷಕರಾಗಿ ಉಳಿಯುತ್ತೇವೆ. ಅವನನ್ನು ನಾವು ಒಟ್ಟಿಗೆ ಪೋಷಿಸುತ್ತೇವೆ ಮತ್ತು ಬೆಳೆಸುತ್ತೇವೆ. ಚಲನಚಿತ್ರಗಳು, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳ ಸಹಯೋಗಿಗಳಾಗಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರ ಜಂಟಿ ಹೇಳಿಕೆ ನೀಡಿದೆ.

“ನಮ್ಮ ಸಂಬಂಧದಲ್ಲಿ ಆಗಿರುವ ಈ ಪರಿವರ್ತನೆಯನ್ನು ಅರಿತು ನಮಗೆ ನಿರಂತರವಾಗಿ ಬೆಂಬಲ ನೀಡಿದ ನಮ್ಮ ಕುಟುಂಬವರ್ಗ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಇವರ ಬೆಂಬಲ ಇಲ್ಲದಿದ್ದರೆ ನಮ್ಮ ಈ ನಿರ್ಧಾರ ಬಹಳ ಕಷ್ಟಕರವಾಗುತ್ತಿತ್ತು. ನಮ್ಮ ಹಿತೈಷಿಗಳಿಂದ ನಾವು ಶುಭ ಹಾರೈಕೆ ಮತ್ತು ಆಶೀರ್ವಾದಗಳನ್ನ ನಿರೀಕ್ಷಿಸುತ್ತೇವೆ. ಈ ವಿಚ್ಛೇದನವನ್ನು ನೀವು ಅಂತ್ಯವಾಗಿ ನೋಡದೆ, ಹೊಸ ಪ್ರಯಾಣದ ಆರಂಭವಾಗಿ ನೋಡುತ್ತೀರಿ ಎಂದು ಭಾವಿಸುತ್ತೇವೆ” ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಕಿರಣ್ ರಾವ್‌‌ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ‘ಲಗಾನ್’ ಚಿತ್ರದ ಸೆಟ್‌ನಲ್ಲಿ ಭೇಟಿಯಾದ ಅವರಿಬ್ಬರು, ಡಿಸೆಂಬರ್ 28, 2005 ರಂದು ವಿವಾಹಿತರಾದರು. ಬಾಡಿಗೆ ತಾಯಿಯ ಮೂಲಕ ಅಜಾದ್‌ ಅವರನ್ನು ಪಡೆದಿದ್ದರು.

ಅಮೀರ್ ಖಾನ್‌ ಈ ಹಿಂದೆ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಆದರೆ 2002 ರಲ್ಲಿ, ಮದುವೆಯಾಗಿ 16 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ರೀನಾ ಅವರಿಂದ ಅಮೀರ್‌ಗೆ ಐರಾ ಮತ್ತು ಜುನೈದ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಅಮೀರ್‌ ಖಾನ್‌ ತಮ್ಮ ‘ಲಾಲ್ ಸಿಂಗ್ ಚಾಧಾ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದು ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ಹಿಂದಿ ರಿಮೇಕ್ ಆಗಿದೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಮುಖ್ಯ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಇದನ್ನೂ ಓದಿ: ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...