Homeಮುಖಪುಟನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

- Advertisement -
- Advertisement -

ಬಾಲಿವುಡ್‌ ನಟ ಅಮೀರ್‌ ಖಾನ್‌ ಮತ್ತು ನಿರ್ಮಾಪಕಿ ಕಿರಣ್ ರಾವ್‌‌ ತಾವಿಬ್ಬರು ವಿಚ್ಛೇದಿತರಾಗಿದ್ದೇವೆ ಎಂದು ಘೋಷಿಸಿದ್ದಾರೆ. ವಿಚ್ಛೇದನೆಗೊಂಡರೂ ಮಗ ಆಜಾದ್ ರಾವ್ ಖಾನ್‌ಗೆ ಇಬ್ಬರೂ ಪೋಷಕರಾಗಿ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ. ಅವರಿಬ್ಬರೂ ಮದುವೆಯಾಗಿ 15 ವರ್ಷಗಳಾಗಿದೆ. ಶನಿವಾರ ಜಂಟಿ ಹೇಳಿಕೆ ನೀಡಿದ ಅವರು, “ತಮ್ಮ ಮಗ ಆಜಾದ್‌ಗೆ ಪೋಷಕರಾಗಿ ಮುಂದುವರೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಮೀರ್ ಮತ್ತು ಕಿರಣ್ ನೀಡಿದ ಜಂಟಿ ಹೇಳಿಕೆಯಲ್ಲಿ, “ಈ 15 ಸುಂದರ ವರ್ಷಗಳಲ್ಲಿ ನಾವು ಒಟ್ಟಿಗೆ ಜೀವಮಾನದ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ. ನಮ್ಮ ಜೀವನ ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರಾಗಿ ಮತ್ತು ಕುಟುಂಬವಾಗಿ ಇರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

“ನಾವು ಸ್ವಲ್ಪ ಸಮಯದ ಹಿಂದೆಯೆ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೆವು. ನಾವು ಮಾಡಿಕೊಂಡಿರುವ ವ್ಯವಸ್ಥೆ ಪ್ರಕಾರ ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸಿದರೂ, ವಿಸ್ತೃತ ಕುಟುಂಬದ ರೀತಿಯಲ್ಲಿ ನಮ್ಮ ಜೀವನ ಹಂಚಿಕೊಳ್ಳಲಿದ್ದೇವೆ. ನಮ್ಮ ಮಗ ಆಜಾದ್​ಗೆ ನಾವಿಬ್ಬರೂ ಪೋಷಕರಾಗಿ ಉಳಿಯುತ್ತೇವೆ. ಅವನನ್ನು ನಾವು ಒಟ್ಟಿಗೆ ಪೋಷಿಸುತ್ತೇವೆ ಮತ್ತು ಬೆಳೆಸುತ್ತೇವೆ. ಚಲನಚಿತ್ರಗಳು, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳ ಸಹಯೋಗಿಗಳಾಗಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರ ಜಂಟಿ ಹೇಳಿಕೆ ನೀಡಿದೆ.

“ನಮ್ಮ ಸಂಬಂಧದಲ್ಲಿ ಆಗಿರುವ ಈ ಪರಿವರ್ತನೆಯನ್ನು ಅರಿತು ನಮಗೆ ನಿರಂತರವಾಗಿ ಬೆಂಬಲ ನೀಡಿದ ನಮ್ಮ ಕುಟುಂಬವರ್ಗ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಇವರ ಬೆಂಬಲ ಇಲ್ಲದಿದ್ದರೆ ನಮ್ಮ ಈ ನಿರ್ಧಾರ ಬಹಳ ಕಷ್ಟಕರವಾಗುತ್ತಿತ್ತು. ನಮ್ಮ ಹಿತೈಷಿಗಳಿಂದ ನಾವು ಶುಭ ಹಾರೈಕೆ ಮತ್ತು ಆಶೀರ್ವಾದಗಳನ್ನ ನಿರೀಕ್ಷಿಸುತ್ತೇವೆ. ಈ ವಿಚ್ಛೇದನವನ್ನು ನೀವು ಅಂತ್ಯವಾಗಿ ನೋಡದೆ, ಹೊಸ ಪ್ರಯಾಣದ ಆರಂಭವಾಗಿ ನೋಡುತ್ತೀರಿ ಎಂದು ಭಾವಿಸುತ್ತೇವೆ” ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಕಿರಣ್ ರಾವ್‌‌ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ‘ಲಗಾನ್’ ಚಿತ್ರದ ಸೆಟ್‌ನಲ್ಲಿ ಭೇಟಿಯಾದ ಅವರಿಬ್ಬರು, ಡಿಸೆಂಬರ್ 28, 2005 ರಂದು ವಿವಾಹಿತರಾದರು. ಬಾಡಿಗೆ ತಾಯಿಯ ಮೂಲಕ ಅಜಾದ್‌ ಅವರನ್ನು ಪಡೆದಿದ್ದರು.

ಅಮೀರ್ ಖಾನ್‌ ಈ ಹಿಂದೆ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಆದರೆ 2002 ರಲ್ಲಿ, ಮದುವೆಯಾಗಿ 16 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ರೀನಾ ಅವರಿಂದ ಅಮೀರ್‌ಗೆ ಐರಾ ಮತ್ತು ಜುನೈದ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಅಮೀರ್‌ ಖಾನ್‌ ತಮ್ಮ ‘ಲಾಲ್ ಸಿಂಗ್ ಚಾಧಾ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದು ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ಹಿಂದಿ ರಿಮೇಕ್ ಆಗಿದೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಮುಖ್ಯ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಇದನ್ನೂ ಓದಿ: ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...