HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...