HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...