Homeಕರ್ನಾಟಕಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

- Advertisement -
- Advertisement -

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಡೆಯುತ್ತಿದ್ದ ಆಂತರಿಕ ಕಚ್ಚಾಟಗಳು ಇದೀಗ ತಣ್ಣಗಾಗುತ್ತಿದೆ ಎನ್ನುವಾಗಲೆ, ಪಕ್ಷದೊಳಗೆ ಮತ್ತೊಂದು ಸುತ್ತಿನ ಕಚ್ಚಾಟ ಭುಗಿಲೇಳುತ್ತಿದೆ. ಈ ಹಿಂದೆ ‘ಮುಂದಿನ ಮುಖ್ಯಮಂತ್ರಿ’ ಎಂಬ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಬೆಂಬಲಿಗ ಶಾಸಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿತ್ತು. ಆದರೆ ಇದೀಗ ಈ ಇಬ್ಬರು ನಾಯಕರೆ ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬುವುದನ್ನು ಬಟಾ ಬಯಲು ಮಾಡಿದ್ದಾರೆ.

ಈ ಹಿಂದಿನ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸೇರಿದ್ದ ಶಾಸಕರನ್ನು ವಾಪಾಸು ಪಕ್ಷಕ್ಕೆ ಸೇರಿಸುವುದರ ಬಗ್ಗೆ ಇಬ್ಬರು ನಾಯಕರು ಶನಿವಾರ ನೀಡಿರುವ ಹೇಳಿಕೆಯು ದ್ವಂದ್ವಗಳಿಂದ ಕೂಡಿದ್ದು, ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದೆ.

ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್‌‌, “ಕಾಂಗ್ರೆಸ್‌ ಪಕ್ಷದ ಸಿದ್ಮಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಚಿಸುವ ಯಾರೆ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಆದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರು, “ಪ್ರಳಯವಾದರೂ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎ೦ದು ನಾನು ವಿಧಾನಸಭೆಯಲ್ಲಿ ಹೇಳಿದ್ದೇನೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಪಕ್ಷ ತೊರೆದ ಶಾಸಕರನ್ನು ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಒಂದೇ ಪಕ್ಷಗಳ ನಾಯಕರ ನಡುವೆ ಸಮನ್ವಯತೆಯಿಲ್ಲದ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿದೆ.

“ರಾಜಕೀಯದಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ನಿತ್ಯ ನಡೆಯುತ್ತಿರುತ್ತದೆ. ಇದು ಕೇವಲ ಡಿ.ಕೆ.ಶಿವಕುಮಾರ್‌ ಅಥವಾ ಕಾಂಗ್ರೆಸ್‌ ಪಕ್ಷ ಅ೦ತ ಅಲ್ಲ, ಎಲ್ಲ ಪಕ್ಷದಲ್ಲೂ ಇ೦ತಹ ಉದಾಹರಣೆಗಳನ್ನು ನೋಡಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಅವರು ಯಾರೂನ್ನೂ ಸೂಚಿಸದೆ ಹೇಳಿದ್ದಾರೆ. ಪ್ರತಾಪಗೌಡ ಪಾಟೀಲ್‌ ಅವರನ್ನು ನಾವು ಬಿಜೆಪಿಯಿಂದಲೇ ಕರೆ ತಂದಿದ್ದವು. ಹೀಗೆ ಒ೦ದು ಪಕ್ಷದಿ೦ದ ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024ರಲ್ಲಿ ಮೋದಿ ಸೋಲಿಸಲು AAP, TMC ಜೊತೆ ಮೈತ್ರಿ: ಸಂದರ್ಶನದಲ್ಲಿ ಅಖಿಲ್‌ ಗೊಗೊಯ್

ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ ಬಿಜೆಪಿಗೆ ತೆರಳಿದ ಶಾಸಕರನ್ನು ವಾಪಾಸು ಕಾಂಗ್ರೆಸ್‌ಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಗೆ ತೆರಳಿದ ಶಾಸಕರು ಸಿದ್ದರಾಮಯ್ಯ ಅವರ ಆಪ್ತ ಶಾಸಕರೇ ಆಗಿರುವುದರಿಂದ ಅವರು ಕಾಂಗ್ರೆಸ್‌ಗೆ ಮರಳಿದರೂ ಡಿಕೆ ಶಿವಕುಮಾರ್‌ ಅವರಿಗೆ ಲಾಭವಿಲ್ಲ ಎಂದು ಹೇಳಲಾಗುತ್ತಿದೆ.

ಇದಕ್ಕಿಂತಲೂ ಮುಂಚೆ “ಮುಂದಿನ ಮುಖ್ಯಮಂತ್ರಿ” ಚರ್ಚೆಯನ್ನು ಸಿದ್ದರಾಮಯ್ಯ ಅವರ ಆಪ್ತ ಶಾಸಕರೆ ಮುನ್ನಲೆಗೆ ತಂದಿದ್ದರು. ಈ ಬಿಕ್ಕಟ್ಟು ಈಗ ಶಮನವಾದರೂ ಈ ಎಲ್ಲಾ ಬೆಳವಣಿಗೆಗಳೂ ಸಿದ್ದರಾಮಯ್ಯ ಅವರ ಕೃಪಕಟಾಕ್ಷದಲ್ಲೇ ಆಗಿದ್ದು ಎನ್ನಲಾಗುತ್ತಿದೆ.

ಕೊರೊನಾ ಬಿಕ್ಕಟ್ಟನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎಂದು ಗ್ರಹಿಸಲಾಗಿದೆ. ಈ ಲಾಭವನ್ನು ಕಾಂಗ್ರೆಸ್ ಪಡೆಯಲಿದ್ದು, ಇದಕ್ಕಾಗಿಯೆ ಪಕ್ಷದೊಳಗೆ ವೇದಿಕೆ ಸಜ್ಜು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾಯಿ ಹೊಲಿಸಲು ಕಾಂಗ್ರೆಸ್ ಹೊರಟಂತಿದೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...