Homeಮುಖಪುಟತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

ತಾರತಮ್ಯ ಪ್ರಶ್ನಿಸಿದ ವಿದ್ಯಾರ್ಥಿನಿಯ ಮೇಲೆ ಅಂಬೇಡ್ಕರ್‌ ವಿವಿಯಿಂದ ಶಿಸ್ತುಕ್ರಮ

- Advertisement -
- Advertisement -

ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಶಿಕ್ಷೆಗೊಳಪಡಿಸುವ ಪರಂಪರೆ ನಮ್ಮ ದೇಶದಲ್ಲಿ  ದಿನನಿತ್ಯದ ಘಟನೆಯಾಗಿ ಮಾರ್ಪಟ್ಟಿದೆ. ಜಾಮಿಯಾ, ಜೆಎನ್‌ಯು, ದೆಹಲಿ ವಿಶ್ವವಿದ್ಯಾನಿಲಯ, ಹೈದರಾಬಾದ್ ಯುನಿವರ್ಸಿಟಿ, ಐಐಟಿ ಮದ್ರಾಸ್ ಹೀಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿಯೇ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಕ್ರಿಯೆ ದೀರ್ಘ ಕಾಲದಿಂದ ಚಾಲ್ತಿಯಲ್ಲಿದೆ. ಕಳೆದ ಕೆಲವು ವರ್ಷಗಳಿಂದ  ಮಾಧ್ಯಮಗಳಲ್ಲಿ ಒಂದಾದರೂ ವಿದ್ಯಾರ್ಥಿ ಪ್ರತಿಭಟನೆಗಳು ವರದಿಯಾಗುತ್ತವೆ ಮತ್ತು ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆದ ಘಟನೆ ದೇಶದಲ್ಲಿ ಸಾಕಷ್ಟು ನಡೆದಿದೆ. ವಿದ್ಯಾರ್ಥಿ ಚಳುವಳಿಗಳ ತೊಟ್ಟಿಲು ಎಂದು ಪರಿಗಣಿಸಲ್ಪಡುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟ ದಿನ ನಿತ್ಯದ ಸರ್ವೇ ಸಾಮಾನ್ಯ ಸಂಗತಿ. ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ವಿದ್ಯಾರ್ಥಿ ವೃಂದದ ಹೋರಾಟಕ್ಕೆ ದೆಹಲಿಯಲ್ಲಿ ದೀರ್ಘ ಪರಂಪರೆ ಮತ್ತು ಇತಿಹಾಸವಿದೆ. ಕೋವಿಡ್ ಕಾರಣಗಳಿಂದ ಇಂದು ವಿದ್ಯಾರ್ಥಿ ಪ್ರತಿಭಟನೆಗಳು ಹೆಚ್ಚು ಬಹಿರಂಗವಾಗಿ ನಡೆಯುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಶುಲ್ಕ ಏರಿಕೆ, ದುರಾಡಳಿತ, ತಾರತಮ್ಯ ಖಂಡಿಸಿ ಅಭಿಯಾನಗಳು ಸತತವಾಗಿ ನಡೆಯುತ್ತಲೇ ಇವೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತೊಮ್ಮೆ ಅಂತದ್ದೊಂದು ಪ್ರತಿಭಟನೆಗೆ ಸುದ್ದಿಯಾಗಿದ್ದು, ವಿಶ್ವವಿದ್ಯಾಲಯದ ಆಡಳಿತವನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಆನ್‌ಲೈನ್ ಅಭಿಯಾನದಲ್ಲಿ ಭಾಗವಹಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರಿಗೆ ದಂಡ ವಿಧಿಸಿ ಯುನಿವರ್ಸಿಟಿ ಅಡ್ಮಿನಿಸ್ಟ್ರೇಶನ್ ಜೂನ್‌ 30 ರಂದು  ಆದೇಶ ಹೊರಡಿಸಿದೆ. ಡಿಸೆಂಬರ್ 20 ರಂದು ನಡೆದ  ಆನ್‌ಲೈನ್ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಡ ಕೂಗಿದ ಕಾರಣ ನೀಡಿ ಅಂತಿಮ ವರ್ಷದ ಎಂಎ ಪ್ರದರ್ಶನ ಕಲೆ ವಿಭಾಗದ ವಿದ್ಯಾರ್ಥಿನಿ ನೇಹಾ ಅವರಿಗೆ ಅಂಬೇಡ್ಕರ್ ವಿಶ್ವ ವಿದ್ಯಾಲಯ 5000 ರೂ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಅನರ್ಹಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. ನೇಹಾ ಆಲ್‌ ಇಂಡಿಯಾ ಸ್ಟುಡೆಂಟ್ ಅಸೋಸಿಯೇಷನ್‌ (AISA) ಉಪಾಧ್ಯಕ್ಷೆ ಕೂಡ ಆಗಿದ್ದಾರೆ.

ಇದನ್ನೂ ಓದಿ: ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ.

ಡಿಸೆಂಬರ್ 23 ರಂದು ಯೂಟ್ಯೂಬ್ ಮೂಲಕ ನಡೆದ ಘಟಿಕೋತ್ಸವದಲ್ಲಿ ನೇಹಾ ಅವರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಶುಲ್ಕ ಹೆಚ್ಚಳದ ಮೂಲಕ ಯುನಿವರ್ಸಿಟಿ ಆಡಳಿತ ಬಡವರನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ಪ್ರತಿಭಟನೆಗೆ ಕರೆ ನೀಡಿದ್ದರು ಎಂದು ಹೇಳಲಾಗಿದೆ. ಸಂವಿಧಾನ ನೀಡಿದ ಮೀಸಲಾತಿಯ ಹಕ್ಕಿನಲ್ಲಿ ಬದಲಾವಣೆಗಳನ್ನು ತಂದು ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವಂತೆ ನೆಹಾ ಕರೆ ನೀಡಿದ್ದರು. ಹಾಗೇ ಘಟಿಕೋತ್ಸವದಲ್ಲಿ ಅತಿಥಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರಿಗೆ ವಿದ್ಯಾರ್ಥಿಗಳ ಮೇಲೆ ಕನಿಷ್ಠ ಕಾಳಜಿಯಿಲ್ಲ ಎಂಬ ಆರೋಪ ಸಹ ಅವರು ಮಾಡಿದ್ದರು ಎನ್ನಲಾಗಿದೆ. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ ಕೂಡ ಕೇಳಿಬಂದಿತ್ತು.

ಡಿಸೆಂಬರ್‌ 23 ರಂದು ನಡೆದ ಆನ್‌ಲೈನ್ ಘಟಿಕೋತ್ಸವದಲ್ಲಿ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಗೌರವಯುತ ಹೇಳಿಕೆಯನ್ನು ನೇಹಾ ನೀಡಿದ್ದಾರೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಈ ಸಂಬಂಧ ನೇಹಾ ಅವರಿಗೆ ನೋಟಿಸ್‌ ಕೂಡ ನೀಡಲಾಗಿದೆ. ವಿಶ್ವವಿದ್ಯಾಲಯದ ಶಿಸ್ತು ಸಂಹಿತೆಯನ್ನು ವಿದ್ಯಾರ್ಥಿನಿ ಉಲ್ಲಂಘನೆ ಮಾಡಿರುವುದು ತನಿಖಾ ಸಮಿತಿಯ ವರದಿಯಿಂದ ಸ್ಪಷ್ಟವಾಗಿದೆ. ತನಿಖಾ ಸಮಿತಿ ಮತ್ತು ನೇಹಾ ಅವರ ನಡುವೆ ಏಪ್ರಿಲ್ 6 ರಂದು ನಡೆದ ಸಮಾಲೋಚನೆಯಲ್ಲಿ ಈ ಹೇಳಿಕೆ ತಮ್ಮದೆಂದು ಒಪ್ಪಿಕೊಂಡಿದ್ದಾರೆ ಮತ್ತು  ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯು ವಿಶ್ವವಿದ್ಯಾಲಯ, ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಮತ್ತು ಯುನಿವರ್ಸಿಟಿ ಸಮುದಾಯಕ್ಕೆ ಕಳಂಕವನ್ನು ತರುವ ಪ್ರಯತ್ನವಾಗಿ ಕಂಡು ಬಂದಿದೆ ಎಂದು ಅಂಬೇಡ್ಕರ್ ವಿಶ್ವವಿದ್ಯಾಲಯ ಹೇಳುತ್ತಿದೆ.

ಇದನ್ನೂ ಓದಿ: ದಿಢೀರ್‌ ಶುಲ್ಕ ಡಬಲ್: ಪುಣೆ FTTI ನಲ್ಲಿ ವಿದ್ಯಾರ್ಥಿಗಳಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭ

ತಮ್ಮ ಮೇಲಿನ ದಂಡ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಿರುವ ನೇಹಾ ಆ ದಿನ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ನನ್ನ ಮೇಲೆ ವಿಶ್ವವಿದ್ಯಾಲಯದ ಯಾವ ನಿರ್ದಿಷ್ಟ ನಿಯಮಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದೇ ಪದೇ ಕೇಳುತ್ತಿದ್ದೇನೆ. ಈ ಸಂಬಂಧ ವಿಶ್ವವಿದ್ಯಾಲಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದಕ್ಕೆ ಹೆದರುವುದಿಲ್ಲ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್‌ ವೀಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ವ್ಯವಸ್ಥಿತವಾಗಿ ತಾರತಮ್ಯ ನಡೆಯುತ್ತಿದ್ದು ವಿಶ್ವ ವಿದ್ಯಾಲಯವು ಪ್ರಜಾಪ್ರಭುತ್ವ ದತ್ತ ಹಕ್ಕುಗಳಡಿ ನ್ಯಾಯವನ್ನು ಕೇಳಿದಾಗ ಕ್ರಮ ಕೈಗೊಳ್ಳಲು ಮುಂದಾಗಿದೆ. ನೇಹಾ ಅವರ ಮೇಲಿನ ಎಲ್ಲಾ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಪ್ರಜಾಪ್ರಭುತ್ವ ವಿಧಾನದಲ್ಲಿನ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ AISA ಎಚ್ಚರಿಸಿದೆ.

ಡಿಸೆಂಬರ್‌ 23 ರ ಘಟಿಕೋತ್ಸವದಲ್ಲಿ ನೀಡಿದ ತಮ್ಮ ಹೇಳಿಕೆಯಿಂದ ನೇಹಾ ಅವರು ವಿದ್ಯಾರ್ಥಿಯ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...