Homeಕರ್ನಾಟಕಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

ಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದಲ್ಲಿನ ಕೆರೆ ಒತ್ತುವರಿಯ ತೆರವಿಗೆ ಮುಂದಾಗಿದ್ದು, ಇಂದು ತೆರವು ಕಾರ್ಯಾಚರಣೆಯನ್ನು ಆರಂಭಿಸಿದೆ. ಪೂರ್ವ ಮತ್ತು ದಕ್ಷಿಣ ಬೆಂಗಳೂರಿನ ಜುನ್ನಸಂದ್ರ ಕೆರೆ ಒತ್ತುವರಿ ಮಾಡಿ ಕಟ್ಟಲಾಗಿದ್ದ ಮನೆಗಳನ್ನು ಬಿಬಿಎಂಪಿ ಅಧಿಕಾರಿಗಳು ಇಂದು ನೆಲಸಮಗೊಳಿಸಿದ್ದಾರೆ.

ದಕ್ಷಿಣ ಬೆಂಗಳೂರಿನ ಜುನ್ನಸಂದ್ರ ಕೆರೆಯ ಒತ್ತುವರಿ ಈಗಷ್ಟೆ ಪ್ರಾರಂಭವಾಗಿದ್ದು ಅರಂಭಿಕ ಹಂತದಲ್ಲಿಯೇ ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ. ಪೊಲೀಸರು ಮತ್ತು ಸಿಬ್ಬಂದಿಗಳ ನೆರವಿನಿಂದ ಅಕ್ರಮವಾಗಿ ನಿರ್ಮಿಸಲಾಗಿದ್ದ 12 ಮನೆಗಳನ್ನು ಸುಲಭವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಜುನ್ನಸಂದ್ರ ಕೆರೆ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದವರ ವಿರುದ್ಧ ಪೋಲಿಸ್ ಕಂಪ್ಲೇಟ್‌ ದಾಖಲಿಸಿತ್ತು. ಇಡೀ ಕೆರೆಯ ಪ್ರದೇಶವನ್ನು ಕೆಲವರು ತಮ್ಮದೆಂದು ಹೇಳಿಕೊಂಡು ಮನೆ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಿದ್ದರು. ನಿರ್ಮಾಣ ಕಾರ್ಯಕ್ಕೆ ಶೆಡ್‌ಗಳನ್ನು ಹಾಕಲಾಗಿತ್ತು ಎಂದು ಬಿಬಿಎಂಪಿಯ ಸಹಾಯಕ ಇಂಜಿನೀಯರ್ ಕೆ.ವಿ.ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಸ್ಥಳೀಯರು ಕೆರೆ ಒತ್ತುವರಿ ಸಂಬಂಧ ಬಿಬಿಎಂಪಿಗೆ ದುರು ನೀಡಿದ್ದರು. ಸ್ಥಳೀಯರ ಮಾಹಿತಿ ಆಧರಿಸಿ ತನಿಖೆಯನ್ನು ನಡೆಸಿ ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ವಾರಣಾಸಿ ಕೆರೆಯ 1 ಎಕರೆ 6 ಗುಂಟೆಗಳಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. 8 ಎಕರೆ 24 ಗುಂಟೆ ವಿಸ್ತೀರ್ಣದ ಕೆರೆಯ 5 ಭಾಗಗಳಲ್ಲಿ ಒತ್ತುವರಿ ನಡೆದಿರುವುದು ಬೆಳಕಿಗೆ ಬಂದಿತ್ತು. 12 ಮನೆಗಳನ್ನು ಕೆರೆಯ ಜಾಗದಲ್ಲಿ ಅಕ್ರಮವಾಗಿ ಕಟ್ಟಲಾಗಿದೆ. ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು ನ್ಯಾಯಾಲಾಯದ ಆದೇಶದ ಮೇರೆಗೆ ಕ್ರಮ ಜರುಗಿಸಲಾಗಿದೆ ಬಿಬಿಎಂಪಿ ವಿಶೇಷ ಆಯುಕ್ತ ಬಿ ರೆಡ್ಡಿ ಶಂಕರ್‌ ಬಾಬು ತಿಳಿಸಿದ್ದಾರೆ.

ವಾರಣಾಸಿ ಕೆರೆಯ ಅಭಿವೃದ್ಧಿಗೆ ಬಿಬಿಎಂಪಿ 3 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಿದ್ದು ಅಂತರ್ಜಲ ಹೆಚ್ಚಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಬಿಬಿಎಂಪಿಯ ವಿಳಂಬದ ಕ್ರಮ

ಬಿಬಿಎಂಪಿ ಕ್ರಮಕ್ಕೆ ಹಲವು ಪರಿಸರ ಸಂಘಟನೆಗಳು ಮತ್ತು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿಯ ವಿಳಂಬ ಧೋರಣೆಯಿಂದ ಇನ್ನು ಸಾಕಷ್ಟು ಕೆರೆಗಳು ಭೂಗಳ್ಳರ ಪಾಲಾಗುತ್ತಿದೆ. ಒತ್ತುವರಿ ಕಂಡುಬಂದ ತಕ್ಷಣ ಬಿಬಿಎಂಪಿ ಕ್ರಮಕ್ಕೆ ಮುಂದಾಗಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಒಂದೋ ಎರಡೋ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿದರೆ ಸಾಲುವುದಿಲ್ಲ. 100ಕ್ಕೂ ಹೆಚ್ಚು ಕೆರೆಗಳು ಒತ್ತುವರಿಯಾಗಿವೆ. ಬಿಬಿಎಂಪಿ ಆ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಲು ಮುಂದಾಗಬೇಕೆಂದು ಫ್ರೆಂಡ್ಸ್‌ ಅಫ್‌ ಲೇಕ್ಸ್‌ (ಕೆರೆಯ ಗೆಳೆಯರು) ಸಂಘಟನೆಯ ಸಂಸ್ಥಾಪಕ ವಿ ರಾಮಪ್ರಸಾದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಕೆರೆ ಒತ್ತುವರಿಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ಮಾರ್ಚ್‌ 2020ರಲ್ಲಿ ಬಿಬಿಎಂಪಿಗೆ ಆದೇಶಿಸಿತ್ತು.

ಕಾನೂನು ಪ್ರಕ್ರಿಯೆಗಳನ್ನು ಪೂರೈಸಲು ಸಾಕಷ್ಟು ಸಮಯ ಹಿಡಿಯುತ್ತದೆ. ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ. ಕೆಲವು ಒತ್ತುವರಿದಾರರು ತೆರವಿಗೆ ತಡೆಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೊರೊನಾ ಮತ್ತು ಲಾಕ್‌ಡೌನ್ ನಿರ್ಭಂದಗಳು ತೆರವು ಕಾರ್ಯಕ್ಕೆ ಸಾಕಷ್ಟು ಅಡಚಣೆಯನ್ನುಂಟುಮಾಡಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಬಿ. ರೆಡ್ಡಿ ಶಂಕರ್ ಬಾಬು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...