Homeಅನುವಾದಿತ ಲೇಖನರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

'ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ' ಎಂಬ ಸಾಲುಗಳು ಜಾಹೀರಾತಿನಲ್ಲಿವೆ.

- Advertisement -
- Advertisement -

ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ಜೀವನಚರಿತ್ರೆ ‘ನಿಮಿತ್ತ ಮಾತ್ರ ಹೂಂ ಮೇ’ ಪುಸ್ತಕವು ಜುಲೈ 1 ರಂದು ಅವರ 80 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಶಿಯವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮವೇನೋ ಚೆನ್ನಾಗಿ ನಡೆಯಿತು. ಅತಿಥಿಗಳು ಕಲ್ರಾಜ್ ಮಿಶ್ರಾ ಜೀವನದ ಪುಟಗಳನ್ನೊಮ್ಮೆ ತಿರುವಿಹಾಕಿದರು. ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಬರಹಕ್ಕೆ ಇಳಿದ ಮಿಶ್ರಾ ಸಾಹೇಬರ ಬದುಕನ್ನು ಕೊಂಡಾಡಿದರು. ಕಾರ್ಯಕ್ರಮ ಇಷ್ಟಕ್ಕೆ ಮುಗಿಯಲಿಲ್ಲ.

ಕಾರ್ಯಕ್ರಮದಲ್ಲಿ ನೆರೆದಿದ್ದ ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದಿಂದ ಹೊರಡುವ ಹೊತ್ತಿಗೆ ಅವರಿಗೆಲ್ಲ ಆಶ್ಚರ್ಯ ಕಾದಿತ್ತು. ಸುಮಾರು 27 ವಿಶ್ವವಿದ್ಯಾಲಯಗಳ ಕುಲಪತಿಗಳು ಒಮ್ಮೆಲೆ ಚಕಿತರಾದರು. ಕಾರಣವಿಷ್ಟೆ ರಾಜಭವನದ ಸಿಬ್ಬಂದಿಯೊಬ್ಬರು ಕುಲಪತಿಗಳ ಕಾರಿಗೆ ರಾಜ್ಯಪಾಲರ ಜೀವನಚರಿತ್ರೆ ಪುಸ್ತಕಗಳ 2 ದೊಡ್ಡ ಬಾಕ್ಸ್‌ಗಳನ್ನು ತಂದಿಟ್ಟರು. ಜೊತೆಗೆ 68,383 ರೂಪಾಯಿ ಮೊತ್ತದ ಬಿಲ್‌ಗಳನ್ನು ಕೂಡ. ಹೀಗೆ ಆ ಪುಸ್ತಕಗಳನ್ನು ಖರೀದಿಸುವಂತೆ ತಾಕೀತು ಮಾಡಲಾಗಿದೆ.

ಇದನ್ನೂ ಓದಿ: 3 ನೇ ಬಾರಿ ಸದನ ನಡೆಸುವ ಪ್ರಸ್ತಾಪ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ!

ರಾಜ್ಯಪಾಲರ ಜೀವನ ಚರಿತ್ರೆಯನ್ನು ಗೋವಿಂದ ರಾಮ್ ಜೈಸ್ವಾಲ್ ಮತ್ತು IIME ಜೈಪುರದ ಸಂಶೋದಕ ಡಾ.ಡಿ.ಕೆ. ಟಕ್ನೆಟ್ ರಚಿಸಿದ್ದಾರೆ.

ರಾಜ್ಯಪಾಲರ ಸಿಬ್ಬಂದಿ ನೀಡಿದ ಬಿಲ್‌ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಲಭ್ಯವಾಗಿದ್ದು 5 ವಿವಿಧ ಶೀರ್ಷಿಕೆಗಳ ಪುಸ್ತಕದ ಹೆಸರನ್ನು ಬಿಲ್‌ನಲ್ಲಿ ನಮೂದಿಸಲಾಗಿತ್ತು. 10% ರಿಯಾಯತಿ ಜೊತೆಗೆ ಹೆಚ್ಚುವರಿ ಉಚಿತ ಪ್ರತಿಗಳನ್ನು ನೀಡಿರುವ ಮಾಹಿತಿ ರಶೀದಿಯಲ್ಲಿದೆ. ಕುಲಪತಿಗಳೆಲ್ಲ ತಮ್ಮ ನಿವಾಸವನ್ನು ಸೇರಿದ ಮೇಲೆ ಇನ್ನೂ ಒಂದು ಆಶ್ಚರ್ಯ ಅವರಿಗೆ ಕಾದಿತ್ತು. ಅದೇನೆಂದರೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಹೊರತುಪಡಿಸಿ ಬಿಲ್‌ನಲ್ಲಿ ನಮೂದಿಸಲಾದ ಯಾವ ಪುಸ್ತಕವೂ ಬಾಕ್ಸ್‌ನಲ್ಲಿ ಇರಲಿಲ್ಲ. 3999/- ಬೆಲೆಯ ಕಲರಾಜ್‌ ಮಿಶ್ರಾ ಜೀವನ ಚರಿತ್ರೆಯ ಪ್ರತಿಗಳು ಮಾತ್ರ ಕಾರ್ಟ್‌ನಲ್ಲಿ ಇದ್ದವು.

ಇದನ್ನೂ ಓದಿ: ಸಂಪಾದಕರ ಸಂಪಾದಕ ವಿನೋದ್ ಮೆಹ್ತಾರ ಆತ್ಮ ಚರಿತ್ರೆ ಲಖನೌ ಹುಡುಗ…

ರಾಜಸ್ಥಾನ ಪಬ್ಲಿಕ್‌ ಪ್ರೊಕ್ಯುರ್‌ಮೆಂಟ್‌ (RTPP) ಆಕ್ಟ್‌, 2012 ಪುಸ್ತಕ ಖರೀದಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ವಿಧಿಸಿದೆ. ಹಾಗಿದ್ದರೆ ಏಕಪಕ್ಷೀಯವಾಗಿ ಹೇಗೆ ವಿಶ್ವವಿದ್ಯಾಲಯಗಳು ರಾಜ್ಯಪಾಲರ ಪುಸ್ತಕವನ್ನು ನೇರವಾಗಿ ಖರೀದಿಸಲು ಸಾಧ್ಯ? ತಂತ್ರಜ್ಞಾನ, ವೈದ್ಯಕೀಯ, ಸಂಗೀತ, ಕೃಷಿ ಸೇರಿದಂತೆ ಭಿನ್ನ ಭಿನ್ನ ವಿಷಯಗಳಿಗೆ ಸ್ಥಾಪಿತವಾದ ಈ ವಿಶ್ವವಿದ್ಯಾಲಯಗಳು ದೊಡ್ಡ ಪ್ರಮಾಣದಲ್ಲಿ ರಾಜ್ಯಪಾಲರ ಜೀವನಚರಿತ್ರೆಯನ್ನು ಏಕೆ ಖರೀದಿಸಬೇಕು ಎಂಬ ಚರ್ಚೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಆರಂಭವಾಗಿದೆ.

ರಾಜಭವನ ಅಧಿಕಾರಿಗಳು ಮತ್ತು ಕಲರಾಜ್ ಮಿಶ್ರಾ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಸಂಶೋಧನೆಗೆ ವಿನಿಯೋಗಿಸಲಾಗುತ್ತದೆಯೇ ಹೊರತು ವಯಕ್ತಿಕ ಬಳಕೆಗಾಗಿ ಅಲ್ಲ ಎಂದು ರಾಜ್ಯಪಾಲರು ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲರಾಜ್‌ ಮಿಶ್ರಾ ಅವರ ಜೀವನ ಚರಿತ್ರೆಯ ಪುಸ್ತಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗಿನ ಸುದೀರ್ಘ ಜೀವನ ಪ್ರಯಾಣವನ್ನು ಕಲರಾಜ್‌ ಮಿಶ್ರಾ ಅವರು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದು, ಬಿಜೆಪಿ ಮತ್ತು ಭಾರತೀಯ ಜನಸಂಘದ ಅಧ್ಯಾಯಗಳು ಅಲ್ಲಲ್ಲಿ ಬಂದು ಹೋಗುತ್ತವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಸ್ತಕದ ಕುರಿತಾಗಿ ಮೆಚ್ಚುಗೆಯ ವಿಮರ್ಶೆಯನ್ನು ಬರೆದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶಾಂದಾರ್‌ ಕೃತಿ (wonderful book) ಎನ್ನುವ ಮೂಲಕ ಪುಸ್ತಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರಾಜ್ಯಪಾಲರ ಜೀವನ  ಕೃತಿ ರಾಜಕೀಯದಿಂದ ಹೊರತಾಗಿಲ್ಲ. ಅವರ ಜೀವನದ ಅನುಭವಗಳಿಗೆ ಮಾತ್ರ ಸೀಮಿತಿವಾಗಿಲ್ಲ. ಪುಸ್ತಕದ 116 ನೇ ಪುಟದಲ್ಲಿ ಬಿಜೆಪಿಯ ಜಾಹೀರಾತನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಗಿ ನಿಂತು ನವ ಭಾರತ ಕಟ್ಟಲು ಕೈಜೋಡಿಸಿ ಎಂದು ಮನವಿ ಮಾಡುವ ಚಿತ್ರದಲ್ಲಿ ಬಿಜೆಪಿಯ ಕಮಲದ ಗುರುತು ದೊಡ್ಡದಾಗಿ ಅಚ್ಚಾಗಿದೆ.

‘ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ನಮ್ಮ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ’ ಎಂಬ ಸಾಲುಗಳು ಜಾಹೀರಾತಿನಲ್ಲಿ ಕಂಡು ಬರುತ್ತದೆ.

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯ ಪುಟ ಸಂಖ್ಯೆ 116 ರಲ್ಲಿ ನೀಡಲಾದ ಬಿಜೆಪಿ ಜಾಹೀರಾತು

ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವ ವ್ಯಕ್ತಿ ರಾಜ್ಯಪಾಲರ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಆರೋಪ ವಿಶ್ವವಿದ್ಯಾಲಯಗಳಿಂದ ಕೇಳಿಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ರಾಜ್ಯಪಾಲರಿಗೆ ಹಿಂದೆ ಬಿಜೆಪಿ, RSS ಜೊತೆ ದೀರ್ಘ ಒಡನಾಟವಿರಬಹದು. ರಾಜ್ಯಪಾಲರ ಸ್ಥಾನಕ್ಕೇರಿದ ಮೇಲೆ ತಮ್ಮ ರಾಜಕೀಯ ನಂಟನ್ನು ಮುಂದುವರೆಸುವುದು ಒಂದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಮತ್ತು ಕರ್ತವ್ಯಲೋಪ. ರಾಜ್ಯಪಾಲರಾದವರು ವಿಶ್ವವಿದ್ಯಾಲಯಗಳ ಗೌರವ ಕುಲಪತಿಗಳಾಗಿರುತ್ತಾರೆ. ತಮ್ಮ ಈ ಪುಸ್ತಕದ ಮೂಲಕ ವಿದ್ಯಾರ್ಥಿ ಸಮುದಾಯಕ್ಕೆ ಗೌರವ ಕುಲಪತಿಗಳು ಯಾವ ಸಂದೇಶವನ್ನು ನೀಡ ಬಯಸುತ್ತಾರೆ? ಎಂಬ ಪ್ರಶ್ನೆಯನ್ನು ಮತ್ತೊಬ್ಬ ಕುಲಪತಿಗಳು ಕೇಳಿದ್ದಾರೆ.

ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಎಂಟರ್‌ಪ್ರೇನರ್‌ಶಿಪ್ (IIME) ಜೈಪುರದ ಖಾತೆಗೆ ಪುಸ್ತಕದ ಹಣ ಸಂದಾಯ ಮಾಡುವಂತೆ ರಾಜಭವನದ ಅಧಿಕಾರಿಗಳು ಕುಲಪತಿಗಳಿಗೆ ಸೂಚಿಸಿದ್ದಾರೆ. IIME ಜೈಪುರ ವಿಜ್ಞಾನ ತಂತ್ರಜ್ಞಾನ ಇಲಾಖೆಯಡಿಯ ಸ್ವಾಯತ್ತ ಶಿಕ್ಷಣ ಸಂಸ್ಥೆ. ಜೀವನ ಚರಿತ್ರೆಯ ಸಹ ಬರಹಗಾರ ಡಾ. ಡಿ.ಕೆ. ಟಕ್ನೆಟ್ ಹಿಂದೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.ಕೆ. ಟಕ್ನೆಟ್‌ ಪತ್ನಿ ಸುಜಾತಾ ಟಕ್ನೆಟ್‌ IIME ಯಲ್ಲಿಯೇ ಮುಖ್ಯ ಸಂಶೋಧಕರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೇಗೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಪ್ರಕಟಿಸಲು ಸಾಧ್ಯ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ವಾರಸ್ಯವೆಂದರೆ ರಾಜಭವನದ ಸಿಬ್ಬಂದಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೀಡಿದ ಪುಸ್ತಕದ ರಶೀದಿಯಲ್ಲಿ ಇನ್ನೂ ಎರಡು ಪುಸ್ತಕಗಳು ಸೇರಿವೆ. ಅವು IIME ಜೈಪುರ ಸಂಸ್ಥೆ 2020 ರಲ್ಲಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಿದ್ದ ಪುಸ್ತಕಗಳು. ಒಂದು ಜೈಪುರ್ ಜೆಮ್‌ ಆಫ್ ಇಂಡಿಯಾ ಮತ್ತು ಮಾರ್ವಾಡಿ ಹೆರಿಟೇಜ್ ಪುಸ್ತಕಗಳು ಅವು. ಈ ಪುಸ್ತಕಗಳು 4,950 ರೂಪಾಯಿ ಮತ್ತು 3,200 ರೂಪಾಯಿ ಬೆಲೆಯನ್ನು ನಿಗದಿಪಡಿಸಲಾಗಿದ್ದು ರಾಜ್ಯಪಾಲರ ಜೀವನಚರಿತ್ರೆಯ ಜೊತೆಗೆ ಉಳಿದ ಪುಸ್ತಕಗಳ ಹಣವನ್ನೂ ಪಾವತಿಸುವಂತೆ ವಿಶ್ವವಿದ್ಯಾಲಯಗಳಿಗೆ ಹೇಳಲಾಗಿದೆ.

ಮೂಲ: ದಿ ವೈರ್‌

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...