Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...