Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...