Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...