Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...