Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...