Homeಕರೋನಾ ತಲ್ಲಣಕೊರೊನಾ ಲಾಕ್‌ಡೌನ್‌ಗೆ ನಲುಗಿದ ಕೋಲಾರ ಜಿಲ್ಲೆ: ಹುಲುಸಾದ ಬೆಳೆ ಹೊಲದಲ್ಲೇ ನೆಲಸಮ

ಕೊರೊನಾ ಲಾಕ್‌ಡೌನ್‌ಗೆ ನಲುಗಿದ ಕೋಲಾರ ಜಿಲ್ಲೆ: ಹುಲುಸಾದ ಬೆಳೆ ಹೊಲದಲ್ಲೇ ನೆಲಸಮ

ಕೋಲಾರ ಜಿಲ್ಲೆ ಹಾಲು, ರೇಷ್ಮೆ ಮತ್ತು ಮಾವಿನ ಮಡಿಲು ಎಂದೇ ಹೆಸರು ಪಡೆದಿರುವ ಜಿಲ್ಲೆ. ಇಲ್ಲಿ ಟಮೋಟ, ತರಕಾರಿಗಳು ದೆಹಲಿ, ಪುಣೆ, ಮುಂಬೈ, ಬಾಂಗ್ಲಾದೇಶ, ನೇಪಾಳ ಹಾಗೂ ಇತರೆ ರಾಜ್ಯ, ದೇಶಗಳಿಗೂ ರಫ್ತಾಗುತ್ತದೆ.

- Advertisement -
- Advertisement -

ಕೊರೊನಾದಿಂದ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲಾ ಕ್ಷೇತ್ರಗಳಿಗೂ ತೊಂದರೆಯಾಗಿದೆ. ಅದರಂತೆ ಕೃಷಿ ಕ್ಷೇತ್ರದ ಮೇಲೂ ತುಂಬಾ ದೊಡ್ಡ ಹೊಡೆತ ಬಿದ್ದಿದೆ. ಆದರೆ ಬೇರೆ ಕ್ಷೇತ್ರಗಳ ಬಗ್ಗೆ ಮಾಧ್ಯಮಗಳಾಗಲಿ, ವ್ಯವಸ್ಥೆ, ಪ್ರಭುತ್ವ ಕೊಟ್ಟ ಗಮನವನ್ನು ಕೃಷಿ ಕ್ಷೇತ್ರಕ್ಕೆ ನೀಡದಿರುವುದು ದುರಂತ. ಕೃಷಿ ಸಂಕಷ್ಟಗಳನ್ನು ಮುನ್ನಲೆಗೆ ತಂದಿದ್ದು ಬಹಳ ಕಡಿಮೆ.

ತೀರಾ ಅನೀರಿಕ್ಷಿತವಾಗಿ ಕೊರೊನಾ ಒಂದನೇ ಅಲೆ ಬಂತು. ನಮ್ಮ ರೈತರಿಗೆ ಇಂತಹ ಪರಿಸ್ಥಿತಿ ಬರುತ್ತೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಆಗಾಗಲೇ ಹೂ, ಹಣ್ಣು, ತರಕಾರಿಗಳನ್ನು, ಎಲ್ಲಾ ರೀತಿಯ ಬೆಳೆಗಳನ್ನು ನಾಟಿ ಮಾಡಲಾಗಿತ್ತು ಮತ್ತು ಒಂದಷ್ಟು ಬೆಳೆಗಳು ಕಟಾವಿಗೂ ಬಂದಿತು. ಬೆಳೆದ ಬೆಳೆಗಳು ಮಾರಾವಾಗದೆ ತೋಟದಲ್ಲಿ, ರಸ್ತೆಗಳಿಗೆ ಸುರಿಯುವ ಪರಿಸ್ಥಿತಿ ನಿರ್ಮಾಣವಾಯಿತು, ಈ ಎಲ್ಲದರ ಹೊಡೆತಗಳನ್ನು ರೈತರು ತಡೆದುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಬಂತು. ಈ ಸಮಯದಲ್ಲಿ ಸರ್ಕಾರ ರೈತರ ರಕ್ಷಣೆಗೆ ನಿಲ್ಲುತ್ತೇವೆ ಎಂಬ ಭರವಸೆ ಕೊಟ್ಟರೆ ಹೊರತು ವಾಸ್ತವದಲ್ಲಿ ರೈತರ ರಕ್ಷಣೆಗೆ ನಿಲ್ಲಲಿಲ್ಲ. ಇನ್ನು ಈ ಸಮಸ್ಯೆಗಳಿಂದ ರೈತರು ಚೇತರಿಸಿಕೊಳ್ಳುವ ಮೊದಲೇ ಕೊರೊನಾ ಎರಡನೇ ಅಲೆ ಬಂತು. ಈ ಅಲೆಗೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿರಲಿಲ್ಲ. ಆಸ್ಪತ್ರೆ, ಬೆಡ್, ಆಕ್ಸಿಜನ್ ಯಾವುದು ಸಿದ್ದತೆ ಮಾಡಿಕೊಂಡಿರಲಿಲ್ಲ. ಇಂತಹ ಸಮಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ ಮಾಡಿದರು.

ನಾವು ಈಗಾಗಲೇ ಹಸಿರುಕ್ರಾಂತಿ ಎಂಬ ಹೆಸರಿನಲ್ಲಿ ಬಿತ್ತನೆಬೀಜ, ರಸಗೊಬ್ಬರ, ಔಷಧಿಗಳು ಎಲ್ಲದಕ್ಕೂ ನಾವು ಸರ್ಕಾರ ಮತ್ತು ಕಾರ್ಪೊರೇಟ್ ಕಂಪನಿಗಳ ಮೇಲೆ ಅವಲಂಬಿತರಾಗಿದ್ದೇವೆ. ಉತ್ತಮ ಬೆಳೆ ಪಸಲು ಬರಬೇಕಾದರೆ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಸಿಂಪಣೆ ಮಾಡದೇ ಇದ್ದರೆ ಇಳುವರಿ ಮತ್ತು ಉತ್ತಮ ಬೆಳೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂದರೆ ಖರ್ಚು ದುಬಾರಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಬೆಳೆದ ತರಕಾರಿ, ಹಣ್ಣು, ಹೂ ಮತ್ತು ತೋಟಗಾರಿಕಾ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ ಸಂಕಷ್ಟಕ್ಕೆ ಗುರಿಯಾದರು. ಈ ಲಾಕ್‌ಡೌನ್‌ನಿಂದಾಗಿ ಬೆಳೆದಿರುವ ಬೆಳೆಗಳನ್ನು ರಸ್ತೆಗೆ ತಂದು ಸುರಿಯುವ ಘಟನೆಗಳನ್ನು ನೋಡಬೇಕಾಯಿತು. ಕೋಲಾರದಲ್ಲಿ ಇತ್ತೀಚೆಗೆ ನೂರಾರು ರೈತರು ಬಹುಕಷ್ಟಪಟ್ಟು ಬೆಳೆದ ಟಮೋಟವನ್ನು ರಸ್ತೆಗೆ ಸುರಿದಿದ್ದನ್ನು ನೋಡಬಹುದು.

ಕೋಲಾರ ಜಿಲ್ಲೆ ಹಾಲು, ರೇಷ್ಮೆ ಮತ್ತು ಮಾವಿನ ಮಡಿಲು ಎಂದೇ ಹೆಸರು ಪಡೆದಿರುವ ಜಿಲ್ಲೆ. ಇಲ್ಲಿ ಬೆಳೆದಂತಹ ಮಾವು, ಟಮೋಟ, ತರಕಾರಿಗಳು ದೆಹಲಿ, ಪುಣೆ, ಮುಂಬೈ, ಬಾಂಗ್ಲಾದೇಶ, ನೇಪಾಳ ಹಾಗೂ ಇತರೆ ರಾಜ್ಯ, ದೇಶಗಳಿಗೂ ರಫ್ತಾಗುತ್ತದೆ. ಸರ್ಕಾರದ ಅವೈಜ್ಞಾನಿಕ ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ರೂ ಬಂಡವಾಳ ಹಾಕಿ ಬೆಳೆದಿದ್ದ ತರಕಾರಿ, ದ್ರಾಕ್ಷಿ, ಟಮೋಟ, ಪಪ್ಪಾಯಗಳಿಗೆ ಬೆಲೆಯಿಲ್ಲದೆ, ಮತ್ತೊಂದು ಕಡೆ ಮಾರುಕಟ್ಟೆಗೆ ಸಾಗಿಸಲು ವಾಹನಗಳ ವ್ಯವಸ್ಥೆಯಿಲ್ಲದೆ ರೈತರು ರಸ್ತೆಗೆ ಸುರಿದರು.

ನಾವು ಕೋಲಾರ ತಾಲ್ಲೂಕು ಹೊಸಮಟ್ಟ ಹಳ್ಳಿ ಗ್ರಾಮದಲ್ಲಿ 10 ಎಕರೆಯಲ್ಲಿ ಟಮೋಟ, 7 ಎಕರೆಯಲ್ಲಿ ಎಲೆಕೋಸು ಬೆಳೆದಿದ್ದೆವು. 1 ಎಕರೆ ಟಮೋಟ ಬೆಳೆಯಲು ಕನಿಷ್ಠ 1.5 ರಿಂದ 2 ಲಕ್ಷದವರೆಗೆ ಬಂಡವಾಳ ಹಾಕಬೇಕು. ಇನ್ನೂ 10 ಎಕರೆಯಲ್ಲಿ ಟಮೋಟ ಬೆಳೆಯಲು ಬಂಡವಾಳ ಎಷ್ಟಾಗಬಹುದು? ಲಾಕ್‌ಡೌನ್ ಸಮಯದಲ್ಲಿ ಕಟಾವಿಗೆ ಬಂದಿದ್ದ ನಮ್ಮದೇ ತೋಟದ 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಟಮೋಟಾಗೆ ಮಾರುಕಟ್ಟೆಯಲ್ಲಿ ಬರುವ ಬೆಲೆ ಕನಿಷ್ಠ ಟಮೋಟ ಬಿಡಿಸಿದ ಕೃಷಿ ಕಾರ್ಮಿಕರಿಗೂ ಕೂಲಿ ಕೊಡಲು ಸಾಲದ ಪರಿಸ್ಥಿತಿ ಉಂಟಾಯಿತು. ಆದ ಕಾರಣ ತೋಟದಲ್ಲಿಯೇ ಅದನ್ನು ನೆಲಸಮ ಮಾಡಲಾಯಿತು. ನಮ್ಮಂತಹ ಆದೆಷ್ಟೊ ರೈತರು ಬೆಳೆಗಳನ್ನು ತೋಟಗಳಲ್ಲಿ, ರಸ್ತೆಗಳಲ್ಲಿ ಕೊಳೆಸಿದರು.

ಇನ್ನು 1 ಎಕರೆ ಕೋಸು ಬೆಳೆಯಲು ಕನಿಷ್ಠ 1 ಲಕ್ಷ ಬಂಡವಾಳ ಬೇಕು. ಆದರೆ ಕೊನೆಗೆ 1Kgಗೆ 2-3 ರೂ ಕೊಟ್ಟರೆ ಏನು ಮಾಡುವುದು?

ನಮ್ಮ ಊರು ಕೇವಲ 40-50 ಮನೆಗಳನ್ನು ಹೊಂದಿರುವ ಚಿಕ್ಕ ಗ್ರಾಮ. ಇಲ್ಲಿ ಕೊರೊನಾ ಬರುವ ಮುನ್ನ 5-6 ರೈತ ಕುಟುಂಬಗಳು ಮಾತ್ರ ಬೆಳೆ ಮಾಡುತ್ತಿದ್ದರು. ಕೆ.ಸಿ ವ್ಯಾಲಿ ನೀರು ಮತ್ತು ಕೊರೊನಾ ಬಂದ ಮೇಲೆ ನಗರಗಳಲ್ಲಿದ್ದ ಎಲ್ಲಾ ಯುವಕರು ಹಳ್ಳಿಗಳತ್ತ ಮುಖ ಮಾಡಿ ಮೂಲ ಕಸುಬಾದ ಕೃಷಿ ಮಾಡಲು ಶುರು ಮಾಡಿದರು. ಈಗ ನಮ್ಮೂರಲ್ಲಿ 30-35 ಕುಟುಂಬಗಳು ಕೃಷಿಯನ್ನೆ ನಂಬಿ ಜೀವನ ಮಾಡುತ್ತಿದ್ದಾರೆ. ಯುವ ಜನತೆ ವ್ಯವಸಾಯ ಮಾಡಿದರೆ ಏನೋ ಲಾಭ ಬರುತ್ತದೆಯೆಂದು ಸಾಲ ಮಾಡಿ ಬಂಡವಾಳ ಹಾಕಿದವರ ಗತಿಯೇನು? ಇವರ ನೆರವಿಗೆ ನಿಲ್ಲುವವರು ಯಾರು? ಇನ್ನೂ ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಎಷ್ಟು ಪರಿಹಾರ ಕೊಟ್ಟಿದೆ? ರೈತರಿಗೆ ಸೇರಿದ್ದು ಕೇವಲ ಬಿಡಿಗಾಸು ಮಾತ್ರ. ಕೆಲವು ರೈತರಿಗೆ ಅದೂ ಇಲ್ಲ..

ಉದಾಹರಣೆಗೆ ನಾವು ಕೊರೊನಾದಿಂದ ಬೆಲೆಯಿಲ್ಲದೆ ಹೊಲದಲ್ಲಿಯೇ ಬೆಳೆ ನೆಲಸಮ ಮಾಡಿದಾಗ ಪರಿಹಾರದ ಹಣ ನಮಗೆ ಸಿಗಲಿಲ್ಲ. ಅಧಿಕಾರಿಗಳು ಮಾಡಿದ ಸಣ್ಣ ತಪ್ಪಿಗೆ ನಾವು ಪರಿಹಾರ ವಂಚಿತರಾದೆವು.
ಇನ್ನೂ ಮಾವು, ಹೂಗಳು, ರೇಷ್ಮೆ ಬೆಳೆಯುವ ರೈತರ ಪರಿಸ್ಥಿತಿ ಹೇಳತೀರದು. ಯಾವುದೇ ಶುಭ ಸಮಾರಂಭಗಳಿಲ್ಲದೆ ದೇವಸ್ಥಾನಗಳಿಲ್ಲದೆ ಹೂಗಳು ಮಾರಟವಾಗಲೇ ಇಲ್ಲ. ಮಾವು ಬೆಳೆದ ರೈತರು ಪ್ರತಿ ಕೆಜಿಗೆ 2-3ರೂಗಳಂತೆಯೂ ಬೆಲೆ ಸಿಗದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ರಾಜ್ಯದಲ್ಲಿ ಸುಮಾರು 1.20 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಾರೆ. ಇಷ್ಟು ಬೆಳೆದರು ಇದರಿಂದ ರೈತರಿಗೂ ಲಾಭ ಸಿಗಲಿಲ್ಲ. ಅತ್ತ ಕಡೆ ಗ್ರಾಹಕನಿಗೂ ಕಡಿಮೆ ಬೆಲೆಗೆ ಹಣ್ಣು-ತರಕಾರಿ ಸಿಗಲಿಲ್ಲ.

ಮತ್ತೊಂದು ಕಡೆ ಮುಂಗಾರು ಶುರುವಾಯಿತು ಬಿತ್ತನೆಗಳು ಪ್ರಾರಂಭವಾದವು ಉಳುಮೆ ಮಾಡಲು ನೇಗಿಲು ಕಟ್ಟಬೇಕು. ನೇಗಿಲಿಗೆ ಹುಳಿ ಕಟ್ಟಬೇಕು. ವೆಲ್ಡಿಂಗ್ ಅಂಗಡಿಗಳು ತೆರೆಯಲೇ ಇಲ್ಲ. ಉಳುಮೆ ಮಾಡಲು ಟ್ರಾಕ್ಟರ್ ತೆಗೆದುಕೊಂಡು ಹೋದರೆ ಒಂದು ನಟ್ಟು ಬೋಲ್ಟ್ ಇಲ್ಲದೇ ಇದ್ದರೂ ಟ್ರಾಕ್ಟರ್ ಮುಂದೆ ಹೋಗುವುದಿಲ್ಲ. ತೋಟಕ್ಕೆ ನೀರು ಹಾಯಿಸಲು ಹನಿ ನೀರಾವರಿ ಬಳಸುತ್ತೇವೆ. ಪೈಪ್ ಹೊಡೆದು ಹೋಗಿದ್ದು ಅದನ್ನು ಅಂಟಿಸಲು ಗಮ್ ಇಲ್ಲ. ನೀರು ಹೊರ ತೆಗೆಯಲು ಮೋಟರ್ Spare Parts ಇಲ್ಲದೇ ಇದ್ರೆ ಕೆಲಸ ಆಗಲ್ಲ. ಇವುಗಳು ಸದ್ಯಕ್ಕೆ ಲಾಕ್‌ಡೌನ್ ಇರುವುದರಿಂದ ಸಿಗುವುದಿಲ್ಲ. ಹೀಗೆ ಸಣ್ಣ ಸಣ್ಣ ವಸ್ತುಗಳಿಂದ ರೈತರಿಗೆ ಒಡೆತ ಬಿತ್ತು. ಆದರೆ ಆಡಳಿತ ನಡೆಸುವ ಸರ್ಕಾರ ಮತ್ತು IAS  ಅಧಿಕಾರಿಗಳು ಕೇವಲ ಗೊಬ್ಬರದ ಅಂಗಡಿ, ಔಷಧಿ ಅಂಗಡಿಗಳು ತೆರೆದರೆ ಕೃಷಿ ಮಾಡಿ ಬಿಡಬಹುದೆಂಬ ಭ್ರಮೆಯಲ್ಲಿದ್ದಾರೆ.

ಇದರ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ರಸಗೊಬ್ಬರಗಳು, ಡ್ರಿಪ್ ಪೈಪ್‌ಗಳ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದರು.

ಇದನ್ನೂ ಓದಿ: ನಳಿನಿ ವಿರುದ್ಧ ಬಿಜೆಪಿ ಐಟಿ ಸೆಲ್: ಒಂದು ಕ್ಲಾಸಿಕ್ ಕೇಸು

ಸರ್ಕಾರವಂತೂ ರೈತರ ನೆರವಿಗೆ ಬರುತ್ತಿಲ್ಲ. ಹಾಗಾಗಿ ರೈತರೇ ಪರ್ಯಾಯ ಆಲೋಚನೆಗಳತ್ತ ಮುಖ ಮಾಡಬೇಕಾಗಿದೆ. ಬೆಳೆದ ತರಕಾರಿಗಳನ್ನು ಮೌಲ್ಯವರ್ಧನೆ ಮಾಡಿ ಬೆಲೆ ಬಂದಾಗ ಮಾರಾಟ ಮಾಡಬೇಕು. ಜೊತೆಗೆ ಸಣ್ಣ ಕೆಲಸಗಳಾದ ಟಮೋಟ ಬೆಳೆಯುವ ರೈತರು ಸಾಸ್, ಉಪ್ಪಿನಕಾಯಿ ಇತರೆ ಉಪಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಪರ್ಯಾಯಗಳತ್ತ ಯೋಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಕೋಲಾರ ಜಿಲ್ಲೆ ವಿಭಿನ್ನ ಎಂದು ಹೇಳಬಹುದು. ಏಕೆಂದರೆ ಇಲ್ಲಿ ಇತರೆ ಜಿಲ್ಲೆಗಳಂತೆ ಕೋಲಾರದಲ್ಲಿ ವಾರ್ಷಿಕ ಬೆಳೆಗಳನ್ನು ಬೆಳೆಯುವುದು ತುಂಬಾ ಕಡಿಮೆ. ಇಲ್ಲಿ ಟಮೋಟೊ ಹಣ್ಣುಗಳು, ಎಲ್ಲಾ ರೀತಿಯ ತರಕಾರಿಗಳು, ಮಾವು, ದ್ರಾಕ್ಷಿ ಇತರೆ ಎಲ್ಲಾ ಬೆಳೆಗಳನ್ನು ಬೆಳೆಯುವುದರಲ್ಲಿ ರೈತರು ಎತ್ತಿದ ಕೈ. ಹಾಗಾಗಿ 2 ತಿಂಗಳು ಲಾಕ್‌ಡೌನ್ ಆದ ಕಾರಣ ಈ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಸುಮಾರು ಸಾವಿರಾರು ಹೆಕ್ಟೇರ್ ಪ್ರದೇಶದ ಹೊಲಗಳಲ್ಲಿ ಪಸಲನ್ನು ಕಟಾವು ಮಾಡದೆ ಹಾಗೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರಗಳು ರೈತರ ಹಿತ ಕಾಯ್ದು, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಕೊಡುವ ಬದಲು ರೈತ ವಿರೋಧಿ, ಜನವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವಲ್ಲಿ ನಿರತರಾಗಿರುವುದು ದುರಂತ.

  • ನಳಿನಿ
ನಳಿನಿ
ನಳಿನಿ

(ಕರ್ನಾಟಕ ರಾಜ್ಯ ರೈತ ಸಂಘದ ಯುವ ವಿಭಾಗದ ಸಕ್ರಿಯ ಕಾರ್ಯಕರ್ತೆಯಾಗಿರುವ ನಳಿನಿ ಸ್ವತಃ ಕೃಷಿಯಲ್ಲಿ ತೊಡಗಿಸಿಕೊಂಡಿರುವವರು. ರೈತಪರವಾದ ಎಲ್ಲಾ ಹೋರಾಟದಲ್ಲಿ ಅವರು ಮುಂದಿರುತ್ತಾರೆ)


ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...