Homeಮುಖಪುಟಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

- Advertisement -
- Advertisement -

ದೇಶದಲ್ಲಿ ಸುದ್ದಿಯಾಗುವ ಪ್ರಮುಖ ವಿಷಯಗಳು ಹೆಚ್ಚಿದ್ದರು ಕೂಡ ಹೆಚ್ಚಿಗೆ ಸುದ್ದಿಯಾಗುತ್ತಿರುವುದು ಮಾತ್ರ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ವಿಚ್ಛೇದನದ ಸುದ್ದಿ. ಇದು ಈಗ ರಾಜಕೀಯ ಸಂಬಂಧಗಳನ್ನು ತಿಳಿಸಲು ಸಹ ಬಳಕೆಯಾಗುತ್ತಿದೆ. ಬಿಜೆಪಿ ಮತ್ತು ಶಿವಸೇನೆಯ ಸಂಬಂಧವನ್ನು ವಿವರಿಸುವಾಗ ನಮ್ಮ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ಸಂಬಂಧದಂತೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಶಿವಸೇನೆ ಮತ್ತೆ ಒಂದಾಗಲಿದೆ ಎಂಬ ಮಾತುಕತೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದ್ದು, ರಾಜಕೀಯವಾಗಿ  ಎರಡು ಪಕ್ಷಗಳು ಭಿನ್ನವಾಗಿದ್ದರೂ, ಕ್ಷಗಳ ನಡುವಿನ ಬಾಂಧವ್ಯ ಉಳಿದಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಹೇಳಿದ್ದಾರೆ.

ಇತ್ತ ಮಾಜಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರಲಿದ್ದಾರೆಯೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್, “ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

 

“ನಾವು ಭಾರತ-ಪಾಕಿಸ್ತಾನವಲ್ಲ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರನ್ನು ನೋಡಿ, ಅವರ ಸಂಬಂಧದಂತೆ ನಮ್ಮ ಬಂಧ ಕೂಡ ಇದೆ. ಶಿವಸೇನೆ ಮತ್ತು ಬಿಜೆಪಿಯ ರಾಜಕೀಯ ಮಾರ್ಗಗಳು ವಿಭಿನ್ನವಾಗಿವೆ ಆದರೆ ಸ್ನೇಹ ಮಾತ್ರ ಹಾಗೇ ಉಳಿದಿರುತ್ತದೆ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

‌ಇದರೊಂದಿಗೆ ಮಹಾರಾಷ್ಟ್ರದ ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರದ ಮೈತ್ರಿ ಒಡೆಯುವ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ. ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರ ತನ್ನ ಸಂಪೂರ್ಣ ಅಧಿಕಾರವಧಿಯನ್ನು ಉಳಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರು 15 ವರ್ಷಗಳ ದಾಂಪತ್ಯದ ನಂತರ ಕಳೆದ ವಾರಾಂತ್ಯದಲ್ಲಿ ವಿಚ್ಛೇದನ ಘೋಷಿಸಿದರು. ನಂತರ ಭಾನುವಾರ ಇಬ್ಬರು ಒಟ್ಟಿಗೆ ಕುಳಿತು, ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ. ನಮ್ಮ ಸಂಬಂಧ ಬದಲಾಗಿದೆ ಆದರೆ ನಾವು ಇನ್ನೂ ಒಟ್ಟಿಗೆ ಇದ್ದೇವೆ” ಎಂದು ಹೇಳಿದ್ದರು.

ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರು ದೇವೇಂದ್ರ ಫಡ್ನವಿಸ್ ’ನಾವು ಮತ್ತು ಶಿವಸೇನೆ ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು’ ಎಂದಿದ್ದಾರೆ.

ಒಟ್ಟಾರೆ, ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಒತ್ತಡ ಉಂಟಾಗಿದೆ ಎಂಬ ವದಂತಿಗಳ ನಡುವೆಯೇ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಕೆಲವು ಸಮಯದಿಂದ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....