Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...