Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...