Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....