Homeಚಳವಳಿ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ - ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಭೀಮಾಕೊರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿದ್ದ 84 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯವರು ಮೃಪಟ್ಟಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದ್ದು, “ಇದು ಒಕ್ಕೂಟ ಸರ್ಕಾರ ಪ್ರಾಯೋಜಿತ ಕೊಲೆ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್‌ ಸೇರಿದಂತೆ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದರು.

ಅವರ ಸಾವಿಗೆ ದೇಶದ ಹಲವಾರು ಚಿಂತಕರು, ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದು, ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “ಸ್ಟಾನ್ಸ್‌ಸ್ವಾಮಿಯವರ ನಿಧನ ಮೋದಿ ಮತ್ತು ಷಾ ಸರ್ಕಾರದ ಸರ್ಕಾರಿ ಪ್ರಾಯೋಜಿತ ರಾಜಕೀಯ ಕೊಲೆಯಾಗಿದೆ. ಅದನ್ನು ಬೇರೇನೂ ಕರೆಯಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ ತುರ್ತು ವಿಚಾರಣೆ ನಡೆಸಿ, ‘ವ್ಯಕ್ತಿ ಸ್ವಾತಂತ್ಯ್ರ’ ಎಂದು ಹೇಳಿ ಅರ್ನಾಬ್ ಗೋಸ್ವಾಮಿಗೆ 7 ದಿನಗಳಲ್ಲಿ ಜಾಮೀನು ನೀಡಿತು. 84 ಸ್ಟಾನ್ ಸ್ವಾಮಿ ಬಂಧನವಾಗಿ 7 ತಿಂಗಳಾದರೂ ಜಾಮೀನು ನಿರಾಕರಿಸಲಾಯಿತು. ಪಾರ್ಕಿನ್ಸನ್ ಕಾಯಿಲೆಯಿಂದ  ಅವರು ಬಳಲುತ್ತಿದ್ದ ಅವರು ವ್ಯಕ್ತಿ ಸ್ವಾತಂತ್ಯ್ರ ಇಲ್ಲದ ರಾಜಕೀಯ ಕೈದಿಯಾಗಿ ಕೊರೊನಾ ಪಡೆದರು! ಒಂದು ರಾಷ್ಟ್ರ, ಒಂದು ಕಾನೂನು ಆದರೆ ನ್ಯಾಯವಿಲ್ಲ” ಎಂದು ಶ್ರೀವತ್ಸ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, “ಫಾದರ್‌‌ ಸ್ಟಾನ್ ಸ್ವಾಮಿ ಅವರ ನಿಧನದ ಸುದ್ದಿಯನ್ನು ತಿಳಿದು ದುಃಖವಾಯಿತು. ನಮ್ಮ ಸರ್ಕಾರವು ಮಾನವೀಯತೆಯೊಂದಿಗೆ ನಡೆಸಿಕೊಳ್ಳಲು ಸಾಧ್ಯವಾಗದ ಮಾನವೀಯ ಮತ್ತು ದೇವತಾ ಮನುಷ್ಯ” ಎಂದು ಹೇಳಿದ್ದಾರೆ.

ಡಿಎಂಕೆ ನಾಯಕಿ ಕನಿಮೋಳಿ ಅವರು, “ಪಾರ್ಕಿನ್ಸನ್‌ನಿಂದ ಬಳಲುತ್ತಿದ್ದ ಸ್ಟಾನ್ ಸ್ವಾಮಿ (84) ಅವರನ್ನು ಬಿಜೆಪಿ ಸರ್ಕಾರ ದೇಶ ವಿರೋಧಿ ಎಂದು ಬಂಧಿಸಿದೆ. ಅವರ ಆರೋಗ್ಯ ಪರಿಸ್ಥಿತಿಗಳನ್ನು ಎಂದಿಗೂ ಪರಿಗಣಿಸಲಾಗಲಿಲ್ಲ. ಅವರು ಕೋಮಾಕ್ಕೆ ಜಾರಿ ನಿಧನರಾದರು.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ರೈತ ಹೋರಾಟಗಾರ ಯೋಗೇಂದ್ರ ಯಾದವ್ ಅವರು, “ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಎನ್ಐಎ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗದಿಂದ ಆದ ತಣ್ಣನೆಯ ಕ್ರೌರ್ಯ‌ ಇದು. ಈ ದೇಶದ ಅತ್ಯಂತ ತುಳಿತಕ್ಕೊಳಗಾದ ಜನರ ಪರವಾಗಿ ಹೋರಾಡಿದ ಮಾನವೀಯ ವ್ಯಕ್ತಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ್ತಿ ಮೀನಾ ಕಂದಸಾಮಿ ಅವರು, “ನ್ಯಾಯಾಂಗದ ಕೈಯಲ್ಲಿ ರಕ್ತ. ಆರ್‌ಎಸ್‌ಎಸ್-ಬಿಜೆಪಿಯ ಕೈಯಲ್ಲಿ ರಕ್ತ. ಎನ್ಐಎ ಕೈಯಲ್ಲಿ ರಕ್ತ. ರಾಜ್ಯದ ಪರವಾಗಿ ಪ್ರೊಪಗಾಂಡ ನಡೆಸಿದ ಮಾಧ್ಯಮಗಳ ಕೈಯಲ್ಲಿ ರಕ್ತ. ಇದರಿಂದ ಪಾರಾಗಲು ಮೋದಿ-ಷಾಗೆ ಅವಕಾಶ ನೀಡುವ ಪ್ರತಿಪಕ್ಷದ ಕೈಯಲ್ಲಿ ರಕ್ತ. ನಮ್ಮೆಲ್ಲರ ಕೈಯಲ್ಲಿ ರಕ್ತ.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಗುಜರಾತ್‌ ಶಾಸಕ, ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು, ‘‘ಫಾದರ್‌ ಸ್ಟಾನ್ ಸ್ವಾಮಿ ಎಂದಿಗೂ ಸಾಯುವುದಿಲ್ಲ. ಅವರು ವೀರರಾಗಿ ನಮ್ಮ ಹೃದಯದಲ್ಲಿ ಜೀವಿಸುವರು. ಫ್ಯಾಸಿಸ್ಟ್ ಮೋದಿ ಸರ್ಕಾರದ ವಿರುದ್ಧ ನಿಂತು ಜೀವನವನ್ನೇ ವ್ಯಯಿಸಿದ ಧೈರ್ಯಶಾಲಿ ಅವರು. ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಜನತಾಕಾ ರಿಪೋರ್ಟ್‌ ಸಂಸ್ಥಾಪಕ ರಿಫಾತ್‌‌ ಜಾವೇದ್, “ಫಾದರ್ ಸ್ಟಾನ್ ಸ್ವಾಮಿಯ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ‘ನಮಗೆ ವ್ಯಕ್ತಪಡಿಸಲು ಪದಗಳಿಲ್ಲ’ ಎಂದು ಹೇಳಿದೆ. ಭಾರತೀಯ ನ್ಯಾಯಾಂಗದ ಬಗ್ಗೆ ಇತಿಹಾಸದಲ್ಲಿ ಹೇಳಲು ಈ ಮಾತುಗಳು ಸಾಕಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಜೆಎನ್‌ಯು ನಾಯಕಿ ಐಶೆ ಘೋಷ್, “ಇದು ಕಸ್ಟೋಡಿಯಲ್ ಕೊಲೆ. ಪಾದರ್‌ ಸ್ವಾಮಿ ಹಿಂದುಳಿದ ಸಮುದಾಯಗಳಿಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದ್ದರು. ಅವರಿಗೆ ಮೂಲಭೂತ ಅವಶ್ಯಕತೆಗಳು ಮತ್ತು ಆರೋಗ್ಯ ರಕ್ಷಣೆ ನಿರಾಕರಿಸಲಾಯಿತು. ಯುಎಪಿಎ ಹಿಂತೆಗೆದುಕೊಳ್ಳಿ, ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...