Homeಮುಖಪುಟಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ಮಳೆಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಗೊಂದಲಗಳ ಗೂಡಾಗಿತ್ತು. ಸ್ಪೀಕರ್ ಕಚೇರಿಯಲ್ಲಿ ಪ್ರಿಸಿಡಿಂಗ್ ಆಫೀಸರ್ ಭಾಸ್ಕರ್ ಜಾದವ್ ಅವರನ್ನು ನಿಂದಿಸಿದ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದವರೆಗೆ ಸ್ಪೀಕರ್‌ ಅಮಾನತುಗೊಳಿಸಿದ್ದಾರೆ.

ಸದನದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಇವು ಸುಳ್ಳು ಆರೋಪಗಳು. ಶಾಸಕರ ವಿರುದ್ಧ ಒಂದು ಕಥೆ ಕಟ್ಟಲಾಗುತ್ತಿದೆ. ಬಿಜೆಪಿಯಿಂದ ಯಾರೂ ನಿಂದನೆ ಮಾಡಿಲ್ಲ” ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೊತೆಗೆ “ಒಬಿಸಿ (Other Backward Castes) ಮೀಸಲಾತಿಗಾಗಿ, ನಾವು ನಮ್ಮ 12 ಕ್ಕೂ ಹೆಚ್ಚು ಶಾಸಕರನ್ನು ತ್ಯಾಗಮಾಡಲು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ. ಈ ಅಧಿವೇಶನದಲ್ಲಿ ತಮ್ಮ ಪಕ್ಷವು ಒಬಿಸಿ ಮೀಸಲಾತಿ ಕೂಡ ತಾವು ಹೈಲೈಟ್ ಮಾಡಲು ನಿರ್ಧರಿಸಿರುವ ಪ್ರಮುಖ ವಿಷಯಗಳಲ್ಲಿ ಒಂದು” ಎಂದು ಫಡ್ನವೀಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

“ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್‌ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ” ಎಂದು ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.

12 ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಾಬ್ ಮಂಡಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.

ಶರದ್ ಪವಾರ್ ಅವರ ಎನ್‌ಸಿಪಿ ಮುಖಂಡ ನವಾಬ್ ಮಲಿಕ್ ಟ್ವಿಟ್ಟರ್‌ನಲ್ಲಿ ಗಲಾಟೆಯ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸದಸ್ಯರು, ಪ್ರತಿಪಕ್ಷಗಳು ಸದನದ ಕಲಾಪವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಈ ಠಾಕ್ರೆ ಸರ್ಕಾರ ತಾಲಿಬಾನ್‌ನಂತೆ ವರ್ತಿಸುತ್ತಿದೆ. ನಾನು ಈ ಕ್ರಮವನ್ನು ಖಂಡಿಸುತ್ತೇನೆ. ನಾನು ಮತ್ತು ಇತರ ಯಾವುದೇ ಶಾಸಕರು ಭಾಸ್ಕರ್ ಜಾಧವ್ ಅವರನ್ನು ನಿಂದಿಸಲಿಲ್ಲ. ನಾನು ಅವರ ಬಳಿ ಕ್ಷಮೆಯಾಚಿಸಿದ್ದೇನೆ ಆದರೂ ಕುಡ ಅವರು ಅಮಾನತುಗೊಳಿಸಿದ್ದಾರೆ” ಎಂದು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಹೇಳಿದ್ದಾರೆ.


ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...