Homeಮುಖಪುಟಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ಮಳೆಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಗೊಂದಲಗಳ ಗೂಡಾಗಿತ್ತು. ಸ್ಪೀಕರ್ ಕಚೇರಿಯಲ್ಲಿ ಪ್ರಿಸಿಡಿಂಗ್ ಆಫೀಸರ್ ಭಾಸ್ಕರ್ ಜಾದವ್ ಅವರನ್ನು ನಿಂದಿಸಿದ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದವರೆಗೆ ಸ್ಪೀಕರ್‌ ಅಮಾನತುಗೊಳಿಸಿದ್ದಾರೆ.

ಸದನದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಇವು ಸುಳ್ಳು ಆರೋಪಗಳು. ಶಾಸಕರ ವಿರುದ್ಧ ಒಂದು ಕಥೆ ಕಟ್ಟಲಾಗುತ್ತಿದೆ. ಬಿಜೆಪಿಯಿಂದ ಯಾರೂ ನಿಂದನೆ ಮಾಡಿಲ್ಲ” ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೊತೆಗೆ “ಒಬಿಸಿ (Other Backward Castes) ಮೀಸಲಾತಿಗಾಗಿ, ನಾವು ನಮ್ಮ 12 ಕ್ಕೂ ಹೆಚ್ಚು ಶಾಸಕರನ್ನು ತ್ಯಾಗಮಾಡಲು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ. ಈ ಅಧಿವೇಶನದಲ್ಲಿ ತಮ್ಮ ಪಕ್ಷವು ಒಬಿಸಿ ಮೀಸಲಾತಿ ಕೂಡ ತಾವು ಹೈಲೈಟ್ ಮಾಡಲು ನಿರ್ಧರಿಸಿರುವ ಪ್ರಮುಖ ವಿಷಯಗಳಲ್ಲಿ ಒಂದು” ಎಂದು ಫಡ್ನವೀಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

“ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್‌ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ” ಎಂದು ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.

12 ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಾಬ್ ಮಂಡಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.

ಶರದ್ ಪವಾರ್ ಅವರ ಎನ್‌ಸಿಪಿ ಮುಖಂಡ ನವಾಬ್ ಮಲಿಕ್ ಟ್ವಿಟ್ಟರ್‌ನಲ್ಲಿ ಗಲಾಟೆಯ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸದಸ್ಯರು, ಪ್ರತಿಪಕ್ಷಗಳು ಸದನದ ಕಲಾಪವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಈ ಠಾಕ್ರೆ ಸರ್ಕಾರ ತಾಲಿಬಾನ್‌ನಂತೆ ವರ್ತಿಸುತ್ತಿದೆ. ನಾನು ಈ ಕ್ರಮವನ್ನು ಖಂಡಿಸುತ್ತೇನೆ. ನಾನು ಮತ್ತು ಇತರ ಯಾವುದೇ ಶಾಸಕರು ಭಾಸ್ಕರ್ ಜಾಧವ್ ಅವರನ್ನು ನಿಂದಿಸಲಿಲ್ಲ. ನಾನು ಅವರ ಬಳಿ ಕ್ಷಮೆಯಾಚಿಸಿದ್ದೇನೆ ಆದರೂ ಕುಡ ಅವರು ಅಮಾನತುಗೊಳಿಸಿದ್ದಾರೆ” ಎಂದು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಹೇಳಿದ್ದಾರೆ.


ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...