Homeಮುಖಪುಟಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

- Advertisement -
- Advertisement -

ಹಿಂದುತ್ವ ವಿರುದ್ಧದ ವಿಚಾರವಾಗಿ ಭಾನುವಾರ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.

ಭಾನುವಾರ ಮುಸ್ಲಿಂ ರಾಷ್ಟ್ರೀಯ ಮಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಗುಂಪು ಹತ್ಯೆಗಳನ್ನು ಮಾಡುವ ತಪ್ಪಿತಸ್ಥರು ಹಿಂದುತ್ವ ವಿರೋಧಿಗಳು ಎಂದಿದ್ದರು.

ಸೋಮವಾರ ಸರಣಿ ಟ್ವೀಟ್‌ಗಳನನ್ನು ಮಾಡಿರುವ ಓವೈಸಿ, ಹಸುಗಳು ಮತ್ತು ಎಮ್ಮೆಗಳ ನಡುವಿನ ವ್ಯತ್ಯಾಸವನ್ನು ತಿಳಿದಿಲ್ಲದ ಈ ಅಪರಾಧಿಗಳಿಗೆ, ನಿರ್ದಿಷ್ಟ ಸಮುದಾಯದ ಹೆಸರುಗಳ ಆಧಾರದ ಮೇಲೆ ಜನರನ್ನು ಕೊಲ್ಲವ ಬಗೆ ಸಾಕಷ್ಟು ತಿಳಿದಿದೆ. ಈ ಅಪರಾಧಿಗಳಿಗೆ ಬೆನ್ನೆಲುಬಾಗಿ ಹಿಂದುತ್ವ ಸರ್ಕಾರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಓವೈಸಿ ಸವಾಲು ಸ್ವೀಕರಿಸಿದ್ದೇವೆ, ಯುಪಿಯಲ್ಲಿ 300ಕ್ಕೂ ಅಧಿಕ ಸ್ಥಾನ ಪಡೆಯುತ್ತೇವೆ- ಯೋಗಿ ಆದಿತ್ಯನಾಥ್

 

“ಆರ್‌ಎಸ್‌ಎಸ್‌ನ ಭಾಗವತ್ ಅವರು ಗುಂಪುಹತ್ಯೆ ಮಾಡಿದವರು ‘ಹಿಂದುತ್ವ ವಿರೋಧಿ’ ಎಂದು ಹೇಳಿದ್ದಾರೆ. ಈ ಅಪರಾಧಿಗಳಿಗೆ ಹಸು ಮತ್ತು ಎಮ್ಮೆಯ ನಡುವಿನ ವ್ಯತ್ಯಾಸ ತಿಳಿದಿಲ್ಲ ಆದರೆ ಜುನೈದ್, ಅಖ್ಲಾಕ್, ಪೆಹ್ಲೂ, ರಕ್ಬರ್, ಅಲಿಮುದ್ದೀನ್ ಎಂಬ ಹೆಸರುಗಳ ಆಧಾರದ ಮೇಲೆ ಜನರನ್ನು ಕೊಲ್ಲವ ಬಗೆಯನ್ನು ಸಾಕಷ್ಟು ತಿಳಿದಿದ್ದಾರೆ. ಈ ಅಪರಾಧಿಗಳಿಗೆ ಹಿಂದುತ್ವ ಸರ್ಕಾರದ ಬೆಂಬಲವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ಕಳೆದ ಕೆಲವು ವರ್ಷಗಳಿಂದ ಮುಸ್ಲಿಮರ ಮೇಲೆ ಆಗುತ್ತಿರುವ ದಾಳಿಗಳನ್ನು ಉಲ್ಲೇಖಿಸಿದ್ದಾರೆ, 2015 ರಲ್ಲಿ ಮೊಹಮ್ಮದ್ ಅಖ್ಲಾಕ್ ಅವರ ಕ್ರೂರ ಹತ್ಯೆ, 2017 ರಲ್ಲಿ ಪೆಹ್ಲೂ ಖಾನ್ ಮೇಲೆ ನಡೆದ ದಾಳಿ ಮತ್ತು 2018 ರಲ್ಲಿ ಅಲಿಮುದ್ದೀನ್ ಸಾವುಗಳನ್ನು ಉಲ್ಲೇಖಿಸಿದ್ದಾರೆ.

“ಅಲಿಮುದ್ದೀನ್ ಕೊಲೆಗಾರರಿಗೆ ಕೇಂದ್ರ ಸಚಿವರ ಕೈಯಲ್ಲಿ ಹಾರ ಹಾಕಿಸಲಾಗುತ್ತದೆ. ಅಖ್ಲಾಕ್ ಕೊಲೆಗಾರನ ದೇಹದ ಮೇಲೆ ತ್ರಿವರ್ಣ ಧ್ವಜವನ್ನು ಹಾಕಲಾಗಿದೆ. ಆಸಿಫ್ ಕೊಲೆಗಾರರಿಗೆ ಬೆಂಬಲವಾಗಿ ಮಹಾಪಂಚಾಯತ್ ಅನ್ನು ಕರೆಯಲಾಗುತ್ತದೆ” ಎಂದು ಒತ್ತಿ ಹೇಳಿದ್ದಾರೆ.

“ಹೇಡಿತನ, ಹಿಂಸೆ ಮತ್ತು ಕೊಲೆ ಗಾಡ್ಸೆಯ ಹಿಂದುತ್ವ ಚಿಂತನೆಯ ಅವಿಭಾಜ್ಯ ಅಂಗವಾಗಿದೆ. ಮುಸ್ಲಿಮರನ್ನು ಹತ್ಯೆ ಮಾಡುವುದು ಈ ಚಿಂತನೆಯ ಪರಿಣಾಮವಾಗಿದೆ” ಎಂದು ಓವೈಸಿ ಟ್ವೀಟ್ ಮಾಡಿದ್ದಾರೆ.

ಮೋಹನ್ ಭಾಗವತ್ ಅವರು “ಗುಂಪು ಹತ್ಯೆ” ಯ ಅಪರಾಧಿಗಳನ್ನು ಶಿಕ್ಷಿಸಬೇಕು. ಆದರೂ “ಕೆಲವೊಮ್ಮೆ, ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಭಾನುವಾರ ಕಾರ್ಯಕ್ರಮದಲ್ಲಿ ಹೇಳಿದ್ದರು.

“ಹಸು ಪವಿತ್ರ ಪ್ರಾಣಿ. ಆದರೆ ಹಲ್ಲೆ ಮಾಡುವವರು ಕೂಡ ಹಿಂದುತ್ವದ ವಿರುದ್ಧ ಹೋಗುತ್ತಿದ್ದಾರೆ. ಕಾನೂನು ಯಾವುದೇ ಪಕ್ಷಪಾತವಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೋಹನ್ ಭಾಗವತ್ ಹೇಳಿದ್ದರು.

ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.


ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧೆ: ಓವೈಸಿ ಜೊತೆ ಮೈತ್ರಿ ತಳ್ಳಿ ಹಾಕಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...