Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...