Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...