Homeಫ್ಯಾಕ್ಟ್‌ಚೆಕ್ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

- Advertisement -
- Advertisement -

ಭೀಮಾ ಕೊರೇಂಗಾವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧನದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಸ್ಟಾನ್ ಸ್ವಾಮಿ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೆ ಅವರಿಗೆ ಜಾಮೀನು ನೀಡಬೇಕೆಂದು ಹಲವು ಬಾರಿ ಮನವಿ ಮಾಡಿದರೂ ಜಾಮೀನು ನೀಡದ ನ್ಯಾಯಾಂಗ ವ್ಯವಸ್ಥೆ ಮತ್ತು ಅವರ ಮೇಲೆ ಪ್ರಕರಣದ ದಾಖಲಿಸಿದ ಪ್ರಭುತ್ವದ ವಿರುದ್ದ ಆಕ್ರೋಶ ಭುಗಿಲೆದ್ದಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ಹಾಸಿಗೆಯಲ್ಲಿ ಸರಪಳಿಗಳಿಂದ ಬಂಧಿಸಲ್ಪಟ್ಟ ಹಿರಿಯ ವ್ಯಕ್ತಿಯೊಬ್ಬರ ಫೋಟೋ ಒಂದನ್ನು ಫಾದರ್ ಸ್ಟಾನ್ ಸ್ವಾಮಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆದರೆ ವಾಸ್ತವದಲ್ಲಿ ಅದು ಅವರ ಫೋಟೊವಲ್ಲ.

ಈ ಫೋಟೋದಲ್ಲಿರುವ ವ್ಯಕ್ತಿ 92 ವರ್ಷದ ಬಾಬುರಾಮ್ ಸಿಂಗ್ ಎಂಬುವವರದ್ದು. ಅವರು ಕೊಲೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದು, 2021 ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದ ಎತಾಹ್ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ತೆಗೆದ ಫೋಟೊ ಅದಾಗಿದೆ.

ಉತ್ತರ ಪ್ರದೇಶದ 92 ವರ್ಷದ ಕೊಲೆ ಅಪರಾಧಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲ, ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ದಿವಂಗತ ಸ್ಟಾನ್ ಸ್ವಾಮಿ ಅವರದ್ದು ಎಂದು ವೈರಲ್  ಆಗಿದೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಜುಲೈ 3, 2021 ರಂದು ಮುಂಜಾನೆ ಸ್ಟಾನ್ ಸ್ವಾಮಿ ಅವರು ಹೃದಯ ಸ್ತಂಭನದಿಂದ ಬಳಲುತ್ತಿದ್ದಾರೆ ಎಂದು ಹೋಲಿ ಫ್ಯಾಮಿಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಇಯಾನ್ ಡಿಸೋಜಾ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಮಧ್ಯಾಹ್ನ 1:24 ಕ್ಕೆ ಸ್ಟಾನ್ ಸ್ವಾಮಿ ನಿಧನರಾಗಿದ್ದಾರೆ.

 

ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕುರಿತು ವಕೀಲರು ತುರ್ತು ಮನವಿಯನ್ನು ಸಲ್ಲಿಸಿದ ನಂತರ ಹೈಕೋರ್ಟ್ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು. ಆದರೆ, ವಿಚಾರಣೆ ಪ್ರಾರಂಭಿಸುವ ಒಂದು ಗಂಟೆ ಮೊದಲೇ ಹೋರಾಟಗಾರ ಸ್ಟಾನ್ ಸ್ವಾಮಿ ನಿಧನರಾದರು.

ಅದಾದ ಬಳಿಕ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾನ್ ಸ್ವಾಮಿ ಅವರ ಫೋಟೋ ಎಂದು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಆಗಿರುವ ಫೋಟೋದಲ್ಲಿ, ವೃದ್ಧ ವ್ಯಕ್ತಿಯೊಬ್ಬರು ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತಿದ್ದಾರೆ, ಆಕ್ಸಿಜನ್ ಮಾಸ್ಕ್‌ ಧರಿಸಿದ್ದಾರೆ. ಒಂದು ಕಾಲಿಗೆ ಕೊಳ ಹಾಕಿರುವ ಸರಪಳಿಯನ್ನು ಹಾಕಿದ್ದು, ಹಾಸಿಗೆಗೆ ಬಂಧಿಸಿದ್ದಾರೆ. ಈ ಫೋಟೋ ಹಂಚಿಕೊಂಡು ಅವರು ಸ್ಟಾನ್ ಸ್ವಾಮಿ ಎಂದು ಹೇಳಿಕೊಳ್ಳಲಾಗುತ್ತಿದೆ.

ಈ ಚಿತ್ರವನ್ನು ಗೂಗಲ್ ಇಮೇಜ್ ಹುಡುಕಾಟ ನಡೆಸಿದಾಗ, ಮೇ 2021 ರಲ್ಲಿ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಕೊಲೆ ಅಪರಾಧಿ ಬಾಬುರಾಮ್ ಸಿಂಗ್ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ತೆಗೆದಿರುವ ಚಿತ್ರ ಎಂದು ತೋರಿಸಿದೆ. ಈ ಬಗ್ಗೆ ವರದಿಗಳು, ಸುದ್ದಿಗಳನ್ನು ಗೂಗಲ್ ತೋರಿಸಿದೆ.

ಈ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಉತ್ತರಪ್ರದೇಶದ ಹೆಚ್ಚುವರಿ ಮಹಾನಿರ್ದೇಶಕರು (ಜೈಲು) ಆನಂದ್ ಕುಮಾರ್, ಜೈಲು ಅಧಿಕಾರಿ ಅಶೋಕ್ ಯಾದವ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದರು ಮತ್ತು ಅವರ ಮೇಲ್ವಿಚಾರಣಾ ಅಧಿಕಾರಿಯಿಂದ ಸ್ಪಷ್ಟನೆ ಕೋರಿದ್ದಾರೆ ಎಂದು ಎನ್‌ಡಿಟಿವಿ 2021 ರ ಮೇ 13 ರಂದು ವರದಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ 2021 ರ ಫೆಬ್ರವರಿ 6 ರಂದು ಇಟಾ ಜೈಲಿಗೆ ಹಾಕಲ್ಪಟ್ಟ ಬಾಬುರಾಮ್ ಸಿಂಗ್, ಇಟಾ ಜಿಲ್ಲೆಯ ಕುಲ್ಲಾ ಹಬೀಪುರ ಗ್ರಾಮದ ನಿವಾಸಿ ಎಂದು ಟೈಮ್ಸ್ ಆಫ್ ಇಂಡಿಯಾ 2021 ರ ಮೇ 14 ರಂದು ವರದಿ ಮಾಡಿದೆ.

ಈ ಫೋಟೋವನ್ನು ಹಂಚಿಕೊಂಡಿರುವ ಪೋಸ್ಟ್‌ಗಳು ವೈರಲ್ ಆಗುತ್ತಿರುವ ಹಿನ್ನೆಲೆ ಫೇಸ್‌ಬುಕ್ ಈಗ ಅಂತಹ ಪೋಸ್ಟ್‌ಗಳನ್ನು ತಪ್ಪು ಮಾಹಿತಿ ಎಂದು ತೋರಿಸುತ್ತಿದೆ.

ಬದಲಿಗೆ ಈ ಕೆಳಗಿರಗಿರುವುದು ಸ್ಟಾನ್ ಸ್ವಾಮಿಯವರ ಚಿತ್ರವಾಗಿದೆ.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...