Homeಕವನಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

- Advertisement -
- Advertisement -

ಮೊಳಗುತ್ತಿದೆ ಸೈರನ್!

ನಾನು
ಅಂದೇ ಹೇಳಿದ್ದೆ!
ಕಿರೀಟ ತೊಟ್ಟವರ ನಂಬದಿರಿ ಎಂದು!
ಜೀವ ಹಿಂಡುವ ರಕ್ತ ಹೀರುವ ಮಂದಿ
ನಮ್ಮ ನಿಮ್ಮಂತೆ ಬರುವುದಿಲ್ಲ!
ಕಿರೀಟ ತೊಟ್ಟಿಯೇ ಬರುತ್ತಾರೆ!
ಥೇಟ್ ಈಗ ಬಂದಿರುವ
ಅರೆಜೀವಿಯಂತೆ!
ಪೀಠವಿಲ್ಲದ ಅರಮನೆಯಲ್ಲಿ
ಕಿರೀಟಿ ರಾಜನದ್ದೆ ಆರ್ಭಟ
ನಿರ್ಗತಿಕ ವಲಸೆಗಾರರ ಬಡವರ
ಕೂಳಿಗೂ ಗತಿ ಇಲ್ಲ!
ಮಂದಗತಿಯ ಮೂರ್ಖ ರಾಜನಿಗೆ
ಕೇಳುವವರು ಯಾರು?
ಅಯ್ಯೋ ಹೇಳುವವರು ಯಾರು?
ಎಂದು ಗೊರವಂಕ ಕೂಗುತ್ತಿರುವಾಗ
ಗಲ್ಲಿಗಲ್ಲಿಗಳ ರಸ್ತೆಗಳಲ್ಲಿ
ಒಣಗಿ ಉದುರಿದ ಎಲೆಗಳ ತಳಗಳಲ್ಲಿ
ಹುಳದಂತೆ ಜನರು ಸಾಯುತ್ತಿರುವ ದೃಶ್ಯವನ್ನು
ತದೇಕ ಚಿತ್ತದಿಂದ ಕಂಬಳಿ ಹುಳುವೊಂದು
ಬರೆದು ದಾಖಲು ಮಾಡುತ್ತಿತ್ತು
“ಯಕಶ್ಚಿತ್ ಕಣ್ಣಿಗೆ ಕಾಣದ
ಅರೆಜೀವಿಯೊಂದರಿಂದ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ ಅಯ್ಯೋ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ”

ಮರದ ಮೇಲೆ ಕೂತ ಹಕ್ಕಿ
ಅಯ್ಯೋ ಅಯ್ಯೋ ಈ ಮನುಷ್ಯರಿಗೆ ಏನಾಗಿದೆ?
ಯಾಕ್ಹೀಗೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದಾರೆ!
ಕಲ್ಲು ಹೊಡೆಯುತ್ತಿದ್ದ ಕೈಗಳೇ ಕಾಣುತ್ತಿಲ್ಲವಲ್ಲ!
ಎಂದು ವ್ಯಂಗ್ಯವಾಗಿ ಚರಮಗೀತೆಯ ಹಾಡುತ್ತಿತ್ತು!
ಬೆಕ್ಕು, ನಾಯಿ, ಇರುವೆ ಮತ್ತು ಕೋಳಿ ಮಾತನಾಡಿಕೊಳ್ಳುತ್ತಿದ್ದವು!
ನೋಡಿದೆಯ ಬೆಕ್ಕಣ್ಣ
‘ನಮ್ಮ ಕುತ್ತಿಗೆಗೆ ಹಗ್ಗ ಜಡಿದು ಮೂಲೆಗೆ ಕಟ್ಟುತ್ತಿದ್ದ
ಈ ಮನುಷ್ಯರ ಪಾಡು ಇಂದು ಈಗ ಏನಾಗಿದೆಯೆಂದು?
ಕಾಲಕ್ಕೆ ಬೆಲೆ ಕಟ್ಟುವರುಂಟೆ?
ಕೆಲಸವಿಲ್ಲದ ಯುವಕರ ಗೋಣು
ನೇಣು ಕುಣಿಕೆಗೆ ಅಯ್ಯೋ ನೋಡಲಾಗುತ್ತಿಲ್ಲ!
ಕೆಲಸವೇ ಸಿಗುತ್ತಿಲ್ಲ!
ಗುಳೆ ಬಂದವರ ಪಾಡು
ಅವರ ಹಸಿವು ಯಾರಿಗೂ ಬೇಡ!’
ಎಂದು ಬೊಗಳಿತು ನಾಯಿ!
ಹೌದಣ್ಣ ಹೌದು
‘ತೋಳಕ್ಕೆ ಸಿಂಹದ ಬಣ್ಣ
ನಾಯಕನ ಬಣ್ಣ ಬಳಿದರೆ
ಎಷ್ಟು ದಿನ ತಾನೇ ಉಳಿದೀತು?
ಮಳೆ ಬಂದಾಗ ಕರಗಿ
ಬಿಸಿಲು ಹೆಚ್ಚಾದಾಗ ಒಣಗಿ
ಹೋಗಲೇಬೇಕಲ್ಲ!
ರಾಜನ ಸತ್ಯದ ಮಿಥ್ಯವು ಜನರಿಗೆ ತಿಳಿಯಲೆ ಬೇಕಲ್ಲ!
ಕ್ಕೊ ಕ್ಕೊ ಕ್ಕೊ ಎಂದು ಕೂಗಿತು ಕೋಳಿ!

ನಂಟು ಗಂಟಿನ ಹಂಗಿನೊಳಗೆ ಯಾವ
ಸಾಂಕ್ರಾಮಿಕ ರೋಗ ಬಂದರೇನು?
ಮನುಷ್ಯ ಬದಲಾಗುವನೇ?
ಇಲ್ಲ ಅವನು ಬದಲಾಗುವುದೇ ಇಲ್ಲ!
ಜಿಡ್ಡುಗಟ್ಟಿದೆ ಮೆದುಳು
ಮದ ಮತ್ಸರ ಮೋಹ ಸ್ವಾರ್ಥದಿಂದ!
ಹಸಿದ ಹೊಟ್ಟೆಗೆ ಅನ್ನ ಇಕ್ಕುವವರಿಲ್ಲ!
ತಿನ್ನುವವರು ರೋಗದ ಹೆಸರಿನಲ್ಲಿ
ಮತ್ತಷ್ಟು ಮಗದಷ್ಟು ತಿನ್ನುತ್ತಲೆ ಇದ್ದಾರೆ!
ಸಾಯುವವರು ಮಾತ್ರ ಸಾಯುತ್ತಲೆ ಇದ್ದಾರೆ!
ಇದಕ್ಕೆ ಕೊನೆ ಎಲ್ಲಿದೆ ಇಲ್ಲಿ?
ಎಂದು ಬುಸುಗುಟ್ಟಿತು ಹಾವು ಪೊಟರೆಯಲಿ!

ಕಾಲದ ಮೃಗ ಓಡುತ್ತಿದೆ ಓಡುತ್ತಿದೆ
ತನ್ನ ಬೆನ್ನ ತಾನೇ ಕಾಣದಂತೆ!
ಮೃಗ ಖಗಗಳು ವ್ಯಂಗ್ಯವಾಡುತ್ತಿವೆ!
ಅಪರೂಪಕ್ಕೆ ಕೇಳುತ್ತಿದ್ದ
ಆ್ಯಂಬುಲೆನ್ಸಿನ ಸೈರನ್ ಸದ್ದು
ಈಗ ನಿತ್ಯದ ಮಂತ್ರವಾಗಿದೆ!
ರಾಮ ಮಂದಿರದ ಭಜನೆಯಂತೆ
ಭಗವದ್ಗೀತೆಯ ಶ್ಲೋಕದಂತೆ!
ಅಲ್ಲಾವುವಿನ ಆದೇಶದಂತೆ
ಕುರಾನಿನ ವಚನದಂತೆ!
ಶಿಲುಬೆ ಮೇಲಿನ ಅಹಿಂಸಾ ಮೂರ್ತಿಯಂತೆ
ಬೈಬಲ್ಲಿನ ವಾಣಿಯಂತೆ!
ಬುದ್ಧನ ಉಪದೇಶದಂತೆ
ಹೊರಗೆ ಹೆಜ್ಜೆ ಇಟ್ಟರೆ ಸಾಕು ಸೈರನ್ ‌ಮೊಳಗುತ್ತಿದೆ
‘ಎಚ್ಚರ‌ ಮನುಷ್ಯ ಎಚ್ಚರ
ನಿನಗಿನ್ನೂ ಬಹಳ ಸಮಯವಿದೆ ಬದಲಾಗು’ ಎಂದು!

ಶಂಕರ್ ಸಿಹಿಮೊಗೆ

(ಮೂಲತಃ ಶಿವಮೊಗ್ಗದವರಾದ ಶಂಕರ್ ಸಿಹಿಮೊಗೆಯವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ: ಕವನ | ಅಂತಿಮ ವಲಸೆಯ ಮುನ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...