Homeಕವನಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

- Advertisement -
- Advertisement -

ಮೊಳಗುತ್ತಿದೆ ಸೈರನ್!

ನಾನು
ಅಂದೇ ಹೇಳಿದ್ದೆ!
ಕಿರೀಟ ತೊಟ್ಟವರ ನಂಬದಿರಿ ಎಂದು!
ಜೀವ ಹಿಂಡುವ ರಕ್ತ ಹೀರುವ ಮಂದಿ
ನಮ್ಮ ನಿಮ್ಮಂತೆ ಬರುವುದಿಲ್ಲ!
ಕಿರೀಟ ತೊಟ್ಟಿಯೇ ಬರುತ್ತಾರೆ!
ಥೇಟ್ ಈಗ ಬಂದಿರುವ
ಅರೆಜೀವಿಯಂತೆ!
ಪೀಠವಿಲ್ಲದ ಅರಮನೆಯಲ್ಲಿ
ಕಿರೀಟಿ ರಾಜನದ್ದೆ ಆರ್ಭಟ
ನಿರ್ಗತಿಕ ವಲಸೆಗಾರರ ಬಡವರ
ಕೂಳಿಗೂ ಗತಿ ಇಲ್ಲ!
ಮಂದಗತಿಯ ಮೂರ್ಖ ರಾಜನಿಗೆ
ಕೇಳುವವರು ಯಾರು?
ಅಯ್ಯೋ ಹೇಳುವವರು ಯಾರು?
ಎಂದು ಗೊರವಂಕ ಕೂಗುತ್ತಿರುವಾಗ
ಗಲ್ಲಿಗಲ್ಲಿಗಳ ರಸ್ತೆಗಳಲ್ಲಿ
ಒಣಗಿ ಉದುರಿದ ಎಲೆಗಳ ತಳಗಳಲ್ಲಿ
ಹುಳದಂತೆ ಜನರು ಸಾಯುತ್ತಿರುವ ದೃಶ್ಯವನ್ನು
ತದೇಕ ಚಿತ್ತದಿಂದ ಕಂಬಳಿ ಹುಳುವೊಂದು
ಬರೆದು ದಾಖಲು ಮಾಡುತ್ತಿತ್ತು
“ಯಕಶ್ಚಿತ್ ಕಣ್ಣಿಗೆ ಕಾಣದ
ಅರೆಜೀವಿಯೊಂದರಿಂದ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ ಅಯ್ಯೋ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ”

ಮರದ ಮೇಲೆ ಕೂತ ಹಕ್ಕಿ
ಅಯ್ಯೋ ಅಯ್ಯೋ ಈ ಮನುಷ್ಯರಿಗೆ ಏನಾಗಿದೆ?
ಯಾಕ್ಹೀಗೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದಾರೆ!
ಕಲ್ಲು ಹೊಡೆಯುತ್ತಿದ್ದ ಕೈಗಳೇ ಕಾಣುತ್ತಿಲ್ಲವಲ್ಲ!
ಎಂದು ವ್ಯಂಗ್ಯವಾಗಿ ಚರಮಗೀತೆಯ ಹಾಡುತ್ತಿತ್ತು!
ಬೆಕ್ಕು, ನಾಯಿ, ಇರುವೆ ಮತ್ತು ಕೋಳಿ ಮಾತನಾಡಿಕೊಳ್ಳುತ್ತಿದ್ದವು!
ನೋಡಿದೆಯ ಬೆಕ್ಕಣ್ಣ
‘ನಮ್ಮ ಕುತ್ತಿಗೆಗೆ ಹಗ್ಗ ಜಡಿದು ಮೂಲೆಗೆ ಕಟ್ಟುತ್ತಿದ್ದ
ಈ ಮನುಷ್ಯರ ಪಾಡು ಇಂದು ಈಗ ಏನಾಗಿದೆಯೆಂದು?
ಕಾಲಕ್ಕೆ ಬೆಲೆ ಕಟ್ಟುವರುಂಟೆ?
ಕೆಲಸವಿಲ್ಲದ ಯುವಕರ ಗೋಣು
ನೇಣು ಕುಣಿಕೆಗೆ ಅಯ್ಯೋ ನೋಡಲಾಗುತ್ತಿಲ್ಲ!
ಕೆಲಸವೇ ಸಿಗುತ್ತಿಲ್ಲ!
ಗುಳೆ ಬಂದವರ ಪಾಡು
ಅವರ ಹಸಿವು ಯಾರಿಗೂ ಬೇಡ!’
ಎಂದು ಬೊಗಳಿತು ನಾಯಿ!
ಹೌದಣ್ಣ ಹೌದು
‘ತೋಳಕ್ಕೆ ಸಿಂಹದ ಬಣ್ಣ
ನಾಯಕನ ಬಣ್ಣ ಬಳಿದರೆ
ಎಷ್ಟು ದಿನ ತಾನೇ ಉಳಿದೀತು?
ಮಳೆ ಬಂದಾಗ ಕರಗಿ
ಬಿಸಿಲು ಹೆಚ್ಚಾದಾಗ ಒಣಗಿ
ಹೋಗಲೇಬೇಕಲ್ಲ!
ರಾಜನ ಸತ್ಯದ ಮಿಥ್ಯವು ಜನರಿಗೆ ತಿಳಿಯಲೆ ಬೇಕಲ್ಲ!
ಕ್ಕೊ ಕ್ಕೊ ಕ್ಕೊ ಎಂದು ಕೂಗಿತು ಕೋಳಿ!

ನಂಟು ಗಂಟಿನ ಹಂಗಿನೊಳಗೆ ಯಾವ
ಸಾಂಕ್ರಾಮಿಕ ರೋಗ ಬಂದರೇನು?
ಮನುಷ್ಯ ಬದಲಾಗುವನೇ?
ಇಲ್ಲ ಅವನು ಬದಲಾಗುವುದೇ ಇಲ್ಲ!
ಜಿಡ್ಡುಗಟ್ಟಿದೆ ಮೆದುಳು
ಮದ ಮತ್ಸರ ಮೋಹ ಸ್ವಾರ್ಥದಿಂದ!
ಹಸಿದ ಹೊಟ್ಟೆಗೆ ಅನ್ನ ಇಕ್ಕುವವರಿಲ್ಲ!
ತಿನ್ನುವವರು ರೋಗದ ಹೆಸರಿನಲ್ಲಿ
ಮತ್ತಷ್ಟು ಮಗದಷ್ಟು ತಿನ್ನುತ್ತಲೆ ಇದ್ದಾರೆ!
ಸಾಯುವವರು ಮಾತ್ರ ಸಾಯುತ್ತಲೆ ಇದ್ದಾರೆ!
ಇದಕ್ಕೆ ಕೊನೆ ಎಲ್ಲಿದೆ ಇಲ್ಲಿ?
ಎಂದು ಬುಸುಗುಟ್ಟಿತು ಹಾವು ಪೊಟರೆಯಲಿ!

ಕಾಲದ ಮೃಗ ಓಡುತ್ತಿದೆ ಓಡುತ್ತಿದೆ
ತನ್ನ ಬೆನ್ನ ತಾನೇ ಕಾಣದಂತೆ!
ಮೃಗ ಖಗಗಳು ವ್ಯಂಗ್ಯವಾಡುತ್ತಿವೆ!
ಅಪರೂಪಕ್ಕೆ ಕೇಳುತ್ತಿದ್ದ
ಆ್ಯಂಬುಲೆನ್ಸಿನ ಸೈರನ್ ಸದ್ದು
ಈಗ ನಿತ್ಯದ ಮಂತ್ರವಾಗಿದೆ!
ರಾಮ ಮಂದಿರದ ಭಜನೆಯಂತೆ
ಭಗವದ್ಗೀತೆಯ ಶ್ಲೋಕದಂತೆ!
ಅಲ್ಲಾವುವಿನ ಆದೇಶದಂತೆ
ಕುರಾನಿನ ವಚನದಂತೆ!
ಶಿಲುಬೆ ಮೇಲಿನ ಅಹಿಂಸಾ ಮೂರ್ತಿಯಂತೆ
ಬೈಬಲ್ಲಿನ ವಾಣಿಯಂತೆ!
ಬುದ್ಧನ ಉಪದೇಶದಂತೆ
ಹೊರಗೆ ಹೆಜ್ಜೆ ಇಟ್ಟರೆ ಸಾಕು ಸೈರನ್ ‌ಮೊಳಗುತ್ತಿದೆ
‘ಎಚ್ಚರ‌ ಮನುಷ್ಯ ಎಚ್ಚರ
ನಿನಗಿನ್ನೂ ಬಹಳ ಸಮಯವಿದೆ ಬದಲಾಗು’ ಎಂದು!

ಶಂಕರ್ ಸಿಹಿಮೊಗೆ

(ಮೂಲತಃ ಶಿವಮೊಗ್ಗದವರಾದ ಶಂಕರ್ ಸಿಹಿಮೊಗೆಯವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ: ಕವನ | ಅಂತಿಮ ವಲಸೆಯ ಮುನ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...