Homeಕವನಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

- Advertisement -
- Advertisement -

ಮೊಳಗುತ್ತಿದೆ ಸೈರನ್!

ನಾನು
ಅಂದೇ ಹೇಳಿದ್ದೆ!
ಕಿರೀಟ ತೊಟ್ಟವರ ನಂಬದಿರಿ ಎಂದು!
ಜೀವ ಹಿಂಡುವ ರಕ್ತ ಹೀರುವ ಮಂದಿ
ನಮ್ಮ ನಿಮ್ಮಂತೆ ಬರುವುದಿಲ್ಲ!
ಕಿರೀಟ ತೊಟ್ಟಿಯೇ ಬರುತ್ತಾರೆ!
ಥೇಟ್ ಈಗ ಬಂದಿರುವ
ಅರೆಜೀವಿಯಂತೆ!
ಪೀಠವಿಲ್ಲದ ಅರಮನೆಯಲ್ಲಿ
ಕಿರೀಟಿ ರಾಜನದ್ದೆ ಆರ್ಭಟ
ನಿರ್ಗತಿಕ ವಲಸೆಗಾರರ ಬಡವರ
ಕೂಳಿಗೂ ಗತಿ ಇಲ್ಲ!
ಮಂದಗತಿಯ ಮೂರ್ಖ ರಾಜನಿಗೆ
ಕೇಳುವವರು ಯಾರು?
ಅಯ್ಯೋ ಹೇಳುವವರು ಯಾರು?
ಎಂದು ಗೊರವಂಕ ಕೂಗುತ್ತಿರುವಾಗ
ಗಲ್ಲಿಗಲ್ಲಿಗಳ ರಸ್ತೆಗಳಲ್ಲಿ
ಒಣಗಿ ಉದುರಿದ ಎಲೆಗಳ ತಳಗಳಲ್ಲಿ
ಹುಳದಂತೆ ಜನರು ಸಾಯುತ್ತಿರುವ ದೃಶ್ಯವನ್ನು
ತದೇಕ ಚಿತ್ತದಿಂದ ಕಂಬಳಿ ಹುಳುವೊಂದು
ಬರೆದು ದಾಖಲು ಮಾಡುತ್ತಿತ್ತು
“ಯಕಶ್ಚಿತ್ ಕಣ್ಣಿಗೆ ಕಾಣದ
ಅರೆಜೀವಿಯೊಂದರಿಂದ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ ಅಯ್ಯೋ
ಮನುಷ್ಯರು ಉಸಿರುಗಟ್ಟಿ
ಸಾಯುತ್ತಿದ್ದಾರೆ”

ಮರದ ಮೇಲೆ ಕೂತ ಹಕ್ಕಿ
ಅಯ್ಯೋ ಅಯ್ಯೋ ಈ ಮನುಷ್ಯರಿಗೆ ಏನಾಗಿದೆ?
ಯಾಕ್ಹೀಗೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದಾರೆ!
ಕಲ್ಲು ಹೊಡೆಯುತ್ತಿದ್ದ ಕೈಗಳೇ ಕಾಣುತ್ತಿಲ್ಲವಲ್ಲ!
ಎಂದು ವ್ಯಂಗ್ಯವಾಗಿ ಚರಮಗೀತೆಯ ಹಾಡುತ್ತಿತ್ತು!
ಬೆಕ್ಕು, ನಾಯಿ, ಇರುವೆ ಮತ್ತು ಕೋಳಿ ಮಾತನಾಡಿಕೊಳ್ಳುತ್ತಿದ್ದವು!
ನೋಡಿದೆಯ ಬೆಕ್ಕಣ್ಣ
‘ನಮ್ಮ ಕುತ್ತಿಗೆಗೆ ಹಗ್ಗ ಜಡಿದು ಮೂಲೆಗೆ ಕಟ್ಟುತ್ತಿದ್ದ
ಈ ಮನುಷ್ಯರ ಪಾಡು ಇಂದು ಈಗ ಏನಾಗಿದೆಯೆಂದು?
ಕಾಲಕ್ಕೆ ಬೆಲೆ ಕಟ್ಟುವರುಂಟೆ?
ಕೆಲಸವಿಲ್ಲದ ಯುವಕರ ಗೋಣು
ನೇಣು ಕುಣಿಕೆಗೆ ಅಯ್ಯೋ ನೋಡಲಾಗುತ್ತಿಲ್ಲ!
ಕೆಲಸವೇ ಸಿಗುತ್ತಿಲ್ಲ!
ಗುಳೆ ಬಂದವರ ಪಾಡು
ಅವರ ಹಸಿವು ಯಾರಿಗೂ ಬೇಡ!’
ಎಂದು ಬೊಗಳಿತು ನಾಯಿ!
ಹೌದಣ್ಣ ಹೌದು
‘ತೋಳಕ್ಕೆ ಸಿಂಹದ ಬಣ್ಣ
ನಾಯಕನ ಬಣ್ಣ ಬಳಿದರೆ
ಎಷ್ಟು ದಿನ ತಾನೇ ಉಳಿದೀತು?
ಮಳೆ ಬಂದಾಗ ಕರಗಿ
ಬಿಸಿಲು ಹೆಚ್ಚಾದಾಗ ಒಣಗಿ
ಹೋಗಲೇಬೇಕಲ್ಲ!
ರಾಜನ ಸತ್ಯದ ಮಿಥ್ಯವು ಜನರಿಗೆ ತಿಳಿಯಲೆ ಬೇಕಲ್ಲ!
ಕ್ಕೊ ಕ್ಕೊ ಕ್ಕೊ ಎಂದು ಕೂಗಿತು ಕೋಳಿ!

ನಂಟು ಗಂಟಿನ ಹಂಗಿನೊಳಗೆ ಯಾವ
ಸಾಂಕ್ರಾಮಿಕ ರೋಗ ಬಂದರೇನು?
ಮನುಷ್ಯ ಬದಲಾಗುವನೇ?
ಇಲ್ಲ ಅವನು ಬದಲಾಗುವುದೇ ಇಲ್ಲ!
ಜಿಡ್ಡುಗಟ್ಟಿದೆ ಮೆದುಳು
ಮದ ಮತ್ಸರ ಮೋಹ ಸ್ವಾರ್ಥದಿಂದ!
ಹಸಿದ ಹೊಟ್ಟೆಗೆ ಅನ್ನ ಇಕ್ಕುವವರಿಲ್ಲ!
ತಿನ್ನುವವರು ರೋಗದ ಹೆಸರಿನಲ್ಲಿ
ಮತ್ತಷ್ಟು ಮಗದಷ್ಟು ತಿನ್ನುತ್ತಲೆ ಇದ್ದಾರೆ!
ಸಾಯುವವರು ಮಾತ್ರ ಸಾಯುತ್ತಲೆ ಇದ್ದಾರೆ!
ಇದಕ್ಕೆ ಕೊನೆ ಎಲ್ಲಿದೆ ಇಲ್ಲಿ?
ಎಂದು ಬುಸುಗುಟ್ಟಿತು ಹಾವು ಪೊಟರೆಯಲಿ!

ಕಾಲದ ಮೃಗ ಓಡುತ್ತಿದೆ ಓಡುತ್ತಿದೆ
ತನ್ನ ಬೆನ್ನ ತಾನೇ ಕಾಣದಂತೆ!
ಮೃಗ ಖಗಗಳು ವ್ಯಂಗ್ಯವಾಡುತ್ತಿವೆ!
ಅಪರೂಪಕ್ಕೆ ಕೇಳುತ್ತಿದ್ದ
ಆ್ಯಂಬುಲೆನ್ಸಿನ ಸೈರನ್ ಸದ್ದು
ಈಗ ನಿತ್ಯದ ಮಂತ್ರವಾಗಿದೆ!
ರಾಮ ಮಂದಿರದ ಭಜನೆಯಂತೆ
ಭಗವದ್ಗೀತೆಯ ಶ್ಲೋಕದಂತೆ!
ಅಲ್ಲಾವುವಿನ ಆದೇಶದಂತೆ
ಕುರಾನಿನ ವಚನದಂತೆ!
ಶಿಲುಬೆ ಮೇಲಿನ ಅಹಿಂಸಾ ಮೂರ್ತಿಯಂತೆ
ಬೈಬಲ್ಲಿನ ವಾಣಿಯಂತೆ!
ಬುದ್ಧನ ಉಪದೇಶದಂತೆ
ಹೊರಗೆ ಹೆಜ್ಜೆ ಇಟ್ಟರೆ ಸಾಕು ಸೈರನ್ ‌ಮೊಳಗುತ್ತಿದೆ
‘ಎಚ್ಚರ‌ ಮನುಷ್ಯ ಎಚ್ಚರ
ನಿನಗಿನ್ನೂ ಬಹಳ ಸಮಯವಿದೆ ಬದಲಾಗು’ ಎಂದು!

ಶಂಕರ್ ಸಿಹಿಮೊಗೆ

(ಮೂಲತಃ ಶಿವಮೊಗ್ಗದವರಾದ ಶಂಕರ್ ಸಿಹಿಮೊಗೆಯವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ: ಕವನ | ಅಂತಿಮ ವಲಸೆಯ ಮುನ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...