Homeಮುಖಪುಟಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನ ಮಾನವಹಕ್ಕುಗಳ ಹೋರಾಟಗಾರರು ಮತ್ತು ಸಂಘಟನೆಗಳು ಕಂಬನಿ ಮಿಡಿದಿವೆ. ಸ್ವಾಮಿ ಸಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಹಿಡಿದ ಕನ್ನಡಿಯೆಂದು ವಿಷಾದ ವ್ಯಕ್ತಪಡಿಸಿದ್ದಾರೆ. ದೇಶ ವಿದೇಶದ ಸಾವಿರಾರು ಜನರ ಶೋಕ ತಪ್ತ ಸಂದೇಶಗಳಿಂದ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳು ತುಂಬಿ ಹೋಗಿವೆ. ಸ್ಟಾನ್ ಸ್ಟಾಮಿ ಸಾವು ಜಾಗತಿಕ ಮಾನವ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯೆಂದು ವ್ಯವಸ್ಥೆಯ ವಿರುದ್ಧ ಜಾಗತಿಕ ಚಿಂತಕರು ಮತ್ತು ವಿಚಾರವಂತರು ಆಕ್ರೋಶ ಹೊರಹಾಕಿದ್ದಾರೆ.

ಯುರೋಪಿಯನ್ ಯೂನಿಯನ್ ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ಎಮೋನ್ ಗ್ಲಿಮೋರ್, ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೋರಾಟದ ವರದಿಗಾರ್ತಿ ಮೇರಿ ಲಾವ್ಲರ್ ಫಾಧರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ವ್ಯಕ್ತಪಡಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆಯಲ್ಲಿ ವಿಷಯವನ್ನು ಪ್ರಸ್ತಾಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

“ಸ್ಟ್ಯಾನ್ ಸ್ವಾಮಿ ಸಾವಿನ ಸುದ್ದಿ ಅತ್ಯಂತ ವಿನಾಶಕಾರಿಯಂತೆ ಬಡಿದಪ್ಪಳಿಸಿದೆ. ಫಾಧರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಅವರನ್ನು 9 ತಿಂಗಳು ಕಾಲ ಸುಳ್ಳು ಆರೋಪಗಳಡಿ ಜೈಲಿನಲ್ಲಿರಿಸಲಾಗಿದೆ. ಮಾನವ ಹಕ್ಕುಗಳ ಹೋರಾಟಗಾರರನ್ನು ಜೈಲಿಗೆ ಕಳಿಸುವ ಪ್ರಭುತ್ವದ ದಮನಕಾರಿ ನೀತಿಗಳನ್ನು ಸಹಿಸಲು ಸಾಧ್ಯವಿಲ್ಲವೆಂದು” ಮೇರಿ ಲಾವ್ಲರ್ ಟ್ವೀಟ್ ಮಾಡಿದ್ದಾರೆ.

ಯುರೋಪಿಯನ್ ಯೂನಿಯನ್‌ನ ಎಮೋನ್ ಗ್ಲಿಮೋರ್‌ ಟ್ವೀಟ್ ಮಾಡಿ “ಭಾರತದಿಂದ ಬಂದಿರುವ ಸುದ್ದಿ ನನಗೆ ಆಘಾತವನ್ನುಂಟುಮಾಡಿದೆ. ಫಾಧರ್ ಸ್ಟ್ಯಾನ್ ಸ್ವಾಮಿ ನಮ್ಮನ್ನಗಲಿದ್ದಾರೆ. ಯುರೋಪಿಯನ್ ಯೂನಿಯನ್ ಸತತವಾಗಿ ಸ್ವಾಮಿ ಅವರ ಬಂಧನದ ವಿರುದ್ಧ ಭಾರತದ ಅಧಿಕಾರಗಳೊಂದಿಗೆ ಮಾತುಕತೆ ನಡೆಸುತ್ತಲೇ ಬಂದಿದೆ” ಎಂದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸ್ಟ್ಯಾನ್‌ ಸ್ವಾಮಿ ಆರೋಗ್ಯದ ಕುರಿತಾಗಿ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ವಿಶ್ವಸಂಸ್ಥೆ ಸ್ಟ್ಯಾನ್‌ ಸ್ವಾಮಿ ಅಥವಾ ಇತರರನ್ನು ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳೆಂದು ಪರಿಗಣಿಸಿಲ್ಲ. ಭಾರತದಲ್ಲಿ ಬಂಧನಕ್ಕೆ ಒಳಗಾದ ಹೋರಾಟಗಾರರು ವಯಸ್ಸು ಮತ್ತು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಬಂಧನದಿಂದ ಬಿಡುಗಡೆ ಗೊಳಿಸಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಂತರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕೂಡ ಹೇಳಿತ್ತು. ಈ ಸಂಬಂಧ ಕಳೆದ ಮಾರ್ಚ್‌ನಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗವು ಭಾರತ ಸರ್ಕಾರಕ್ಕೆ ಈ ಸಂಬಂಧ ಪತ್ರವನ್ನು ಸಹ ಬರೆದಿತ್ತು.

ಅಂತರಾಷ್ಟ್ರೀಯ ಸಮುದಾಯದ ಜೊತೆ ಭಾರತದ ವಿವಿಧ ಗಣ್ಯರು ರಾಜಕಾರಣಿಗಳು ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ಸೂಚಿಸಿ ಸರ್ಕಾರದ ದಮನಕಾರಿ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌,  ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಇನ್ನೂ ಅನೇಕ ನಾಯಕರು ಸ್ಟ್ಯಾನ್ ಸ್ವಾಮಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

 

ಹೇಮಂತ್‌ ಸೊರೇನ್ ಅವರು “ಝಾರ್ಖಂಡ್‌ ರಾಜ್ಯದಲ್ಲಿ ಫಾದರ್ ಸ್ವಾಮಿ ದಶಕಗಳ ಕಾಲ ಬುಡಕಟ್ಟು ಜನರ ಹಕ್ಕಿಗಾಗಿ ಹೋರಾಟ ನಡೆಸಿದ್ದರು. ಸೊರೇನ್ ಸ್ವಾಮಿ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...