Homeಕವನಅನುಷಾ ಚಂದ್ರುರವರ ಕವಿತೆ ಸುಮ್ಮನಿದ್ದೇನೆ ನಾನು…..

ಅನುಷಾ ಚಂದ್ರುರವರ ಕವಿತೆ ಸುಮ್ಮನಿದ್ದೇನೆ ನಾನು…..

- Advertisement -
- Advertisement -

ಹಾ….
ಸುಮ್ಮನಿದ್ದೇನೆ ನಾನು
ಹೇಳಲು ಬಹಳಷ್ಟಿದ್ದರು
ಅನುಭವಿಸಿದ್ದೇನೊ ಕೆಲವು
ಕಂಡದ್ದು ಹಲವು
ಆದರೆ ಎಲ್ಲವೂ ಸ್ವಂತದ್ದು
ಆದರದೇಕೊ ನಕ್ಕೊಮ್ಮೆ ಸುಮ್ಮನಾಗುವೆ ನಾನು
ಹೇಳಲು ಬಹಳಷ್ಟಿದ್ದರು

ಚಿಮಣಿ ಮೇಲಿನ ದೀಪದುರಿಯ ಕಪ್ಪಿನಲಿ
ಹೂತ ಕನಸುಗಳ ಚಿತ್ರವ ಕಂಡು……
ನನ್ನಮ್ಮ ಅಪ್ಪನಿಗೆ ಭರವಸೆಯೊಂದೆ
ಹೊಟ್ಟೆ ತುಂಬಿಸಿದ
ಖಾಲಿ ನೀರವ ರಾತ್ರಿಗಳ ನೆನೆದು

ನೀವು ನಾನಾಗದೆ ನಾನೇ ನೀವಾಗಲೊರಟು
ವಿಳಾಸವಿರದ ಊರಿನಲಿ
ದಾರಿ ತಪ್ಪಿ
ಕೊಳವಾದ ಕಂಗಳಲಿ
ಮಾಡಿದೊಂಟಿ ಯುದ್ಧವ ನೆನೆದು…..
ಸುಮ್ಮನಾದೆ ನಾನು

ಇದ್ದ ಬದುಕಿಗಿಡಿದ ಕನ್ನಡಿಯೆದುರು
ಹೊಸಕಿ‌ – ಕೊಂದ ಕನಸುಗಳ ಬಿಂಬ ಕಂಡು
ಹೆದರಿ ಮುದುರಿ ಮೌನಿಯಾದ ಕ್ಷಣವ ನೆನೆದು
ಸುಮ್ಮನಾಗಿ ಬಿಟ್ಟೆ ನಾನು
ಮಾತು ಬರುವ ಮೂಕಿಯಂತೆ
ಹೇಳಲು ಎಷ್ಟೊ ಅದೆಷ್ಟೋ ಇದ್ದರು

ಶಾಶ್ವತವಲ್ಲದೀ ದುಡ್ಡು
ಮೂಡಿಸಿದ ಶಾಶ್ವತ ಗುರುತುಗಳ
ಲೆಕ್ಕ ಪಟ್ಟಿಯ ಲೆಕ್ಕಗಳಲಿ
ಒದ್ದೆಯಾದ ಕಂಗಳನು
ಹುದುಗಿಸಿಡುತ
ಸುಮ್ಮನಾಗುವೆ ನಾನು
ನಿಮ್ಮಗಳೆದುರು
ನಾಲಿಗೆಯ ತುದಿಯಲ್ಲಿ
ಜಾರಲು ಅವೆಷ್ಟೋ ಮಾತುಗಳು ತವಕಿಸುತ್ತಿದ್ದರು

ಚೆಂದದ ನೋಟ ನಮ್ಮನ್ನಳೆವ ಮಾನದಂಡ
ಬೆಂಗಳೂರಿನಲ್ಲಿಇದೇ ನಾ ಕಲಿತ ಮೊದಲ ಪಾಠ
ಕಲಿಕೆಗೇನು ಕೊನೆಮೊದಲಿಲ್ಲವಲ್ಲ
ಪ್ರದರ್ಶನಕ್ಕೆ ಅಡ್ಡಿ ಮಾಡಿತ್ತು
ಧೂಳು ಹಿಡಿದು ತೂತು ಬಿದ್ದ ಆ ಖಾಲಿ ಪರ್ಸ್‌
ಅದನ್ನೇ ನೆನೆವೆ………ಅದನ್ನೇ ನೆನೆದು
ಸುಮ್ಮನಾಗಿ ಬಿಡುವೆ ನಾನು
ನಿಮ್ಮೆಲ್ಲರ ಇಂದಿನ ಗೇಲಿಗಳಿಗೆ
ಭರ್ತಿ ಪರ್ಸ್‌ ಕಿಸೆಯೊಳಗಿದ್ದರು

ಬೊಗಸೆ ತುಂಬ ಸಂಬಳವೆಣಿಸುತ್ತ
ಖರ್ಚಿಗೊಂದು ಬಾರಿ ಸಂಕಲನ ವ್ಯವಕಲನಕ್ಕೆ
ಓರೇ ಹಚ್ಚುವ ನಾನು
ಕೊಂದ ಕನಸುಗಳ, ಮರೆತ ನೋವುಗಳ
ಪಟ್ಟಿ ಇಟ್ಟು ವಾದ ಮಾಡದ ನಾನು
ಜಿಪುಣತನಕ್ಕೊಂದು ಆದರ್ಶ ಉದಾಹರಣೆ
ನಿಮ್ಮಗಳ ಮುಂದೆ
ಆದರು ಅದೇಕೊ
ನಕ್ಕು ಸುಮ್ಮನಾಗುವೆ ನಾನು
ಇಂದಿನಂತಯೇ ……..ಮುಂದೆಯೂ ಕೂಡ

ಉತ್ತರಿಸಲಾರೆ ಎಂದಲ್ಲ
ನಾ ನಡೆದ ಬದುಕಿನ ದಾರಿಯಲಿ
ಹೆಜ್ಜೆ ಕೂಡ ಇಡದ ನಿಮಗೆ
ಪಯಣದ ವರದಿಯ ನೀಡಿ ಸಾಧಿಸುವುದಾದರು ಏನು ? ನಾನು.

ಹಾ….ಸುಮ್ಮನಿದ್ದೇನೆ ನಾನು
ಹೇಳಲು ಬಹಳಷ್ಟಿದ್ದರು.

ಅನುಷಾ ಚಂದ್ರು

(ಮೂಲತಾ ಚಿಕ್ಕಮಗಳೂರಿನ ಸಖರಾಯಪಟ್ಟಣದವರು. ಕನ್ನಡದಲ್ಲಿ ಎಂ ಎ ಪದವಿಯನ್ನು ಪಡೆದಿದ್ದು, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.)


ಇದನ್ನೂ ಓದಿ: ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...