Homeಚಳವಳಿಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

- Advertisement -
- Advertisement -

“ಏನ್ಸಾರ್.. ಶಾಲೆಗೆ ಬರ್ತೀರಿ, ಹೋಗ್ತೀರಿ, ಅದು ಯಾರಿಗೋ ವಾಟ್ಸಪ್ ಇದ್ದವರಿಗೆ ಅದೇನೋ ಆನ್ಲೈನ್ ಪಾಠ  ಕಳಿಸ್ತಾರಂತೆ. ದುಡ್ಡಿದ್ದೋರ ಮಕ್ಕಳು ಹೆಂಗೋ ಓತ್ತಾರೆ. ನನ್ ಮಕ್ಕಳಿಗೆ ಹೆಂಗೆ ಸರಾ…?  ನನಗೆ ವಾಟ್ಸಾಪ್ ಪಾಟ್ಸಾಪು…. ಆನ್ಲೈನ್ ಗೀನ್ಲೈನ್ ಎಲ್ಲಾ ಗೊತ್ತಿಲ್ಲ ಸರಾ… ನನ್ನ ಮಕ್ಕಳು ನೀವು ಕಲಿಸಿದ್ದೆಲ್ಲ ಮರುತು ಹಾಳಾಗಿ ಹೋಗ್ಯಾವೆ. ಲಾಕ್ ಡೌನ್ ಅದೂ ಇದೂ ಅಂತ ನಮ್ಮ ಬದುಕು ಹಾಳಾತು. ಈ ಕಡೆ ಮಕ್ಕಳು ಶಾಲೆ ಗೀಲೆ ಇಲ್ಲದೆ ಬದುಕು ಹಾಳಾಗುತ್ತಿದೆ. ಪ್ಯಾಟೆ, ಪಟ್ನ, ರಾಜಕೀಯ ಎಲ್ಲಾ ನಡಿತಾ ಇದೆ. ಶಾಲೆ ಯಾಕಿಲ್ಲ ಸರಾ…? ಒಂದು ಕ್ಲಾಸ್ ಆದರೂ ದೂರ ದೂರ ಕೂರಿಸಿಕೊಂಡು ಮಕ್ಕಳೇ ಪಾಠ ಮಾಡಿದರೆ ಏನಾಗುತ್ತೆ ಸಾರ್…. ಏನಾದರೂ ಮಾಡಿ ಸಾರ್…” ಇದು ಹಲವು ಮಕ್ಕಳ ಪಾಲಕರ ಮಾತು.

ಎರಡನೇ ವರ್ಷಕ್ಕೂ ಕಾಲಿಟ್ಟ ಕೊರೋನಾ ವಿಪತ್ತಿನಿಂದ ಬೇರೆಬೇರೆ ವಲಯಗಳಿಗೆ ಆದ ನಷ್ಟ ಅಂದಾಜು ಮಾಡಲಾಗುತ್ತಿದೆ. ಪೂರಕ ಪರಿಹಾರ ಪ್ಯಾಕೇಜುಗಳನ್ನು ಘೋಷಿಸಲಾಗುತ್ತಿದೆ. ಆದರೆ ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿ ಯಾವುದೇ ರೀತಿಯಾದ ತೀವ್ರತರವಾದ ಯೋಜನೆಗಳತ್ತ ಇನ್ನೂ ಗಮನಹರಿಸಿಲ್ಲ. ಭಾರತದ ಭವಿಷ್ಯವಿರುವುದು ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳಲ್ಲಿ. ದೀರ್ಘಕಾಲ ಅವರು ಶಿಕ್ಷಣದಿಂದ ವಂಚಿತರಾದರೆ ಬಹು ಆಯಾಮದಲ್ಲಿ ನಷ್ಟವಾಗುವುದು ಖಚಿತ. ಈಗಾಗಲೇ ನಿರಂತರ ಎರಡನೇ ವರ್ಷದತ್ತ ಮನೆಯಲ್ಲಿಯೇ ಮಕ್ಕಳು ಉಳಿದಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಂದ ದೂರ ಉಳಿದಿದ್ದು, ಈವರೆಗೆ ಕಲಿತದ್ದನ್ನೆಲ್ಲಾ ಮರೆತಿದ್ದೂ ಅಲ್ಲದೆ, ಹಲವು ದುಶ್ಚಟಗಳಿಗೆ ಬಲಿಯಾಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕುಟುಂಬದ ಸದಸ್ಯರೊಡನೆ ವ್ಯತಿರಿಕ್ತವಾಗಿ ವರ್ತಿಸುತ್ತಿರುವುದನ್ನು ಸಹ ನೀವು ಸಹ ಗಮನಿಸಿರುತ್ತೀರಿ. ಇಂತಹ ಸಂದಿಗ್ಧ ಸಮಯದಲ್ಲಿ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದು ಸರ್ಕಾರದ ಮತ್ತು ಪಾಲಕರ ಆದ್ಯ ಕರ್ತವ್ಯವಾಗಬೇಕಿತ್ತು.

ಸರ್ಕಾರಗಳು ಗ್ರಾಮೀಣ ಸಮುದಾಯದ ಮಕ್ಕಳ ಆರೋಗ್ಯಕ್ಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಹಕ್ಕು ರಕ್ಷಿಸಲು ಪರಿಣಾಮಕಾರಿ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಬೇಕಿದೆ. ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಸಹ ಆಗಿದೆ. ಮನೆಮನೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಗುವಂತೆ ಮಾಡಲು ಹಲವು ಯೋಜನೆಗಳನ್ನು ಹಾಕಿಕೊಳ್ಳಬಹುದಿತ್ತು. ಆದರೆ ಈವರೆಗೂ ಸೂಕ್ತ ನಿರ್ಧಾರ ಕೈಗೊಂಡಿಲ್ಲ.

ಬೆಂಗಳೂರಿನಂತಹ ಮಹಾ ನಗರದಲ್ಲಿ ಶೈಕ್ಷಣಿಕ ಚಟುವಟಿಕೆಗೆ ಇರುವ ಅಡೆತಡೆಗಳು ನಮ್ಮ ಹಳ್ಳಿಯ ಹತ್ತಿಪ್ಪತ್ತು ಮಕ್ಕಳಿರುವ ಶಾಲೆಗಳಲ್ಲಿ ಇಲ್ಲ. ಹಾಗಾಗಿ ಹಳ್ಳಿಗಳಲ್ಲಿ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಕೆಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೊಂದರೆಯಿಲ್ಲದೆ ನಡೆಸಬಹುದು. ರಾಜ್ಯದಲ್ಲಿ ಇರುವ 45 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಅರ್ಧದಷ್ಟು ಶಾಲೆಗಳು ಸಣ್ಣ ಸಣ್ಣ ಹಳ್ಳಿಗಳಲ್ಲಿದ್ದು ಸರಾಸರಿ 50 ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳಾಗಿವೆ. ಇಂತಹ ಶಾಲೆಗಳಲ್ಲಿ ದಿನಕ್ಕೆ 10-15 ಮಕ್ಕಳಂತೆ ತರಗತಿಗಳನ್ನು ನಡೆಸಲು ಸಾಕಷ್ಟು ಅವಕಾಶಗಳು ಇವೆ. ಈ ಬಗ್ಗೆ  ಸಾಧ್ಯತೆ – ಸವಾಲುಗಳ ಪರಿಶೀಲನೆ ಅಗತ್ಯವಿದೆ. ಆನ್ಲೈನ್ ವ್ಯವಸ್ಥೆ ಇಲ್ಲದ ಮಕ್ಕಳಿಗೆ ಇದು ಸಂಜೀವಿನಿ ಆಗಲಿದೆ. ಇದಕ್ಕಾಗಿ ಆಯಾ ಊರಿನ ಸ್ಥಳೀಯ-ಶಿಕ್ಷಿತ ಯುವಕರನ್ನು ಸಹ ಸ್ವಯಂಸೇವಕರಾಗಿ ನೇಮಿಸಿಕೊಂಡು ಬಳಸಿಕೊಳ್ಳಬಹುದು. ಇದಕ್ಕೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲೇಬೇಕು ಎಂಬ ಬದ್ದತೆ, ದೂರದೃಷ್ಟಿಯ ಯೋಜನೆ ಅಗತ್ಯವಷ್ಟೇ ಇದೆ.

ನಗರ ಪ್ರದೇಶದ ಬಹುತೇಕ ಮಕ್ಕಳು ಆನ್ ಲೈನ್ ನಿಂದ ಶಿಕ್ಷಣ ಅಷ್ಟಿಷ್ಟು ಪಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಆನ್ಲೈನ್ ವ್ಯವಸ್ಥೆಯೇ ಇಲ್ಲದ, ಡಿಜಿಟಲ್ ಶಿಕ್ಷಣವನ್ನು ತಿಳಿಯದ ಪಾಲಕರ ಮಕ್ಕಳ ನಡುವೆ ಗುಣಮಟ್ಟದ ಕಲಿಯುವಿಕೆಯ, ಶೈಕ್ಷಣಿಕ ಚಟುವಟಿಕೆಯ ಅಂತರ ಹೆಚ್ಚಾಗುತ್ತಿದೆ. ಇದರಿಂದ ಶಿಕ್ಷಣ ವಂಚಿತರು ಮತ್ತು ಶಿಕ್ಷಣ ಪಡೆದವರ ನಡುವಿನ ಅಂತರ ಮತ್ತಷ್ಟು ವಿಸ್ತರಿಸಿಕೊಳ್ಳುವ ಅಪಾಯವೂ ಇದೆ. ಎಲ್ಲ ಉದ್ಯೋಗಗಳಿಗೂ ಇಂದಿನ ಸ್ಪರ್ಧಾ ಶಿಕ್ಷಣ ವ್ಯವಸ್ಥೆಯಲ್ಲಿ ಗ್ರಾಮೀಣ ಭಾಗದ ಮಕ್ಕಳು ಮತ್ತಷ್ಟು ಹಿಂದಕ್ಕೆ ತಳ್ಳಲ್ಪಡುವ  ಅಪಾಯಗಳಿವೆ. ಈಗಾಗಲೇ ಎಲ್ಲ ಕ್ಷೇತ್ರಕ್ಕೂ ವ್ಯಾಪಿಸಿರುವ ಡಿಜಿಟಲ್ ಯುಗದಲ್ಲಿ ಡಿಜಿಟಲ್ ಸಾಕ್ಷರರು, ಡಿಜಿಟಲ್ ಸೌಲಭ್ಯ ವಂಚಿತರ ನಡುವೆ ಅಂತರ ಮುಂದುವರಿಯುತ್ತಲೇ ಇದೆ. ಹೀಗೆ ಮುಂದುವರೆದರೆ  ಈ ಹಿಂದಿನ ಶತಮಾನಗಳಲ್ಲಿ ಇದ್ದ ಬೇರೆ ಬೇರೆ ರೂಪದ ಅಸಮಾನತೆಗಳಂತೆ ನವರೂಪದ ಬೃಹತ್ ಅಸಮಾನತೆಗಳ ಅಂತರವೂ ಹೆಚ್ಚಾಗುತ್ತದೆ.

ಒಂದು ದೇಶ ಸುಭಿಕ್ಷವಾಗಿ ಪ್ರಗತಿಯತ್ತ ಮುಂದುವರೆಯಲು ಆಯಾ ದೇಶದ ಎಲ್ಲ ಹಂತದ ಪ್ರಜೆಗಳ ಸರ್ವೋದಯ ಅತಿ ಮುಖ್ಯವಾಗುತ್ತದೆ. ಹಾಗಾಗಿ ಬೃಹತ್ ಭಾರತದ ಭವಿಷ್ಯದ ಪ್ರಜೆಗಳಾದ ಗ್ರಾಮೀಣ ಸಮುದಾಯದ ಮಕ್ಕಳು ಈ ಕೊರೋನಾ ಕಾಲಘಟ್ಟದಲ್ಲಿ ನಿರಂತರ ಶಿಕ್ಷಣ ಪಡೆಯಲು ವಿಶೇಷ ಯೋಜನೆಗಳನ್ನು ರೂಪಿಸಬೇಕಾಗಿದೆ. ಈ ಕುರಿತಾಗಿ ಸರ್ಕಾರಗಳು ಹೆಚ್ಚಾಗಿ ಗಮನ ಹರಿಸದಿದ್ದರಿಂದ ಹಳ್ಳಿಹಳ್ಳಿಯಲ್ಲಿ ಪಾಲಕರು ಸಾಕಷ್ಟು ಆಕ್ರೋಶಿತರಾಗಿದ್ದಾರೆ. “ಏನಾದರೂ ಮಾಡಿ ಶಾಲೆ ಓಪನ್ ಮಾಡಿ ಸರ್, ನನ್ಮಕ್ಳು ಎಲ್ಲ ಮರೆತು ಹಾಳಾಗಿ ಹೋಗಿವೆ.” ಅನ್ನುವ ಪಾಲಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳಿಗೆ ಶಿಕ್ಷಣ ಹಕ್ಕು ರಕ್ಷಿಸುವುದು  ಹೇಗೆ ಎನ್ನುವ ಬಗ್ಗೆ  ಕನಿಷ್ಠ ಪಕ್ಷ ಆಯಾ ಗ್ರಾಮದ ಶಿಕ್ಷಕರನ್ನು ಮತ್ತು ಸ್ಥಳೀಯ ಸ್ವಯಂ ಸೇವಕರನ್ನು ನೇಮಿಸಿಕೊಂಡು ಪೂರಕ ಬೋಧನಾ ಕ್ರಮ ಅನುಸರಿಸಬಹುದಾಗಿತ್ತು. ಆಯಾ ವಠಾರದಲ್ಲಿನ ಯುವ ಶಿಕ್ಷಿತರನ್ನು ಆಯಾ ಕೇರಿಯ ಮಕ್ಕಳಿಗೆ ಕಲಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಬಹುದಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ  ಮನೆಮನೆಗೆ ಬಿಸಿಊಟದ ಪಡಿತರ ಹಂಚಿದ ಇಲಾಖೆ ಜ್ಞಾನವನ್ನು ಸಹ ಹಂಚಲು ಕ್ರಮಕೈಗೊಳ್ಳಬೇಕು ಎನ್ನುವುದು ಪಾಲಕರ ಬಯಕೆಯಾಗಿದೆ.

ಸದ್ಯ ಈಗ ಸಂಭವಿಸಿರುವ ಕೋರೋನ ವಿಪತ್ತಿನಿಂದ ಪಾರಾಗಲು ಉದ್ಯಮ ವಲಯ ಬೇರೆ ಬೇರೆ ಮಾರ್ಗಗಳನ್ನು ಕಂಡುಕೊಂಡು ಚೇತರಿಸಿಕೊಳ್ಳುತ್ತಿದೆ. ಮೆಡಿಕಲ್ ಉದ್ಯಮ ವಲಯ ಬೃಹತ್ ಲಾಭದಿಂದ ಕೇಕೆ ಹಾಕುತ್ತಿದೆ. ಆದರೂ ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆ ಆಗಿರುವುದರಿಂದ
ಎಲ್ಲ ವಸ್ತುಗಳ ಬೆಲೆಗಳು ಗಗನಕ್ಕೆ ಏರಿದ್ದು ಸಾಮಾನ್ಯರ ಜನಜೀವನ ದುಸ್ತರವಾಗಿದೆ. ಇಂತಹ ಕಷ್ಟಕಾಲದಲ್ಲಿ ಜನಸಾಮಾನ್ಯರು ಸ್ಮಾರ್ಟ್‌ಫೋನ್‌ಗಳಿಗೆ, ಇಂಟರ್‌ನೆಟ್‌ಗೆ ಮತ್ತಷ್ಟು ದುಡ್ಡು ಹಾಕುವ ಪರಿಸ್ತಿತಿಯಲ್ಲಿಲ್ಲ. ಇದೆಲ್ಲದಕ್ಕೂ ಮಿಗಿಲಾಗಿ ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳು ಎರಡು ವರ್ಷಗಳಿಂದ ಶಿಕ್ಷಣದಿಂದ ತುಂಬಲಾಗದ ನಷ್ಟವಾಗಿದೆ. ಭವಿಷ್ಯದ ಭಾರತದ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮಕ್ಕಳ ಶೈಕ್ಷಣಿಕ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಲಕ್ಷ ಲಕ್ಷ ಕೋಟಿಗಳ ಬಜೆಟ್ ಮಂಡಿಸುವ ಇಂದಿನ ಕಾಲದಲ್ಲಿ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸಲು ಹೆಚ್ಚುವರಿ ಹಣ ಮಕ್ಕಳ ಮನೆಮನೆ ತಲುಪುವಂತೆ ವಿನಿಯೋಗಿಸಬೇಕು. ಪ್ರಜೆಗಳು ಕೇಳದ ಯಾವುದೋ ಯೋಜನೆಗಳನ್ನು, ಪ್ರತಿಮೆಗಳನ್ನು ಕಟ್ಟಲು ಕೋಟಿಕೋಟಿ ವ್ಯಯಿಸುವ ಮೊದಲು  ಪ್ರಜೆಗಳ ತುರ್ತು ಅವಶ್ಯಕತೆಗಳನ್ನು, ಮಕ್ಕಳ  ಆರೋಗ್ಯ, ಶೈಕ್ಷಣಿಕ ಹಕ್ಕನ್ನು ಕಾಪಾಡಲು ಆಳುವ ಸರ್ಕಾರಗಳು ಜವಾಬ್ದಾರಿ ವಹಿಸಬೇಕು ಎನ್ನುವುದು ಹಳ್ಳಿಯ ಬೀದಿ ಬೀದಿಯಲ್ಲಿ ಕೇಳಿಬರುವ ಮಾತಾಗಿದೆ.

ರವಿರಾಜ್ ಸಾಗರ್, ಮಂಡಗಳಲೆ.

(ಸಾಗರ ತಾಲ್ಲೂಕಿನ ಮಂಡಗಳಲೆ ಗ್ರಾಮದ ರವಿರಾಜ್ ಸದ್ಯ ಮಾನ್ವಿ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳ ರಂಗಭೂಮಿ ಇವರ ಆಸಕ್ತಿಯ ಕ್ಷೇತ್ರ)


ಇದನ್ನೂ ಓದಿ: ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...