Homeಮುಖಪುಟಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

- Advertisement -
- Advertisement -

ಫಾದರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನೆಲ್ಲಡೆಯ ಮಾನವ ಹಕ್ಕುಗಳ ಹೋರಾಟಗಾರಿಂದ ಖಂಡನೆ ವ್ಯಕ್ತವಾಗಿದೆ. ದೇಶ ವಿದೇಶಗಳ ಸಂಘಟನೆಗಳಿಂದ ಕೇಂದ್ರ ಸರ್ಕಾರ ದಮನಕಾರಿ ಧೋರಣೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಇಂದು ಸ್ಟ್ಯಾನ್ ಸ್ವಾಮಿ ಸಾವಿಗೆ ತಾನು ಕಾರಣವಲ್ಲವೆಂದು ಹೇಳಿಕೊಂಡಿದೆ. ಸ್ವಾವಿ ಬಂಧನದ ಸಂದರ್ಭದಲ್ಲಿ ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಕಯಗೊಳ್ಳಲಾಗಿದೆ. ಯಾವ ಲೋಪವೂ ಆಗಿಲ್ಲ ಎಂದು ತನ್ನ ನಡೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿನ್ನೆ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಭೀಮಾ ಕೋರೆಂಗಾವ್ ಪ್ರಕರಣಕ್ಕೆ ಸಂಚುರೂಪಿಸಿದ ಅರೋಪದಲ್ಲಿ ಸ್ಟ್ಯಾನ್ ಸ್ವಾಮಿ, ವರವವರದ ರಾವ್, ಸುಧಾ ಭಾರದ್ವಾಜ್, ಆನಂದ ತೇಲ್ತಂಬ್ಡೆ ಸೇರಿದಂತೆ ಹೋರಾಟಗಾರರು, ಕವಿಗಳು ಮತ್ತು ಚಿಂತಕರನ್ನು UAPA  ಕಾನೂನಿನಡಿ ಬಂಧಿಸಲಾಗಿತ್ತು. ಬಂಧಿತ ಬಹುತೇಕರು 60-90 ವಯಸ್ಸಿನವರಾಗಿದ್ದು ನ್ಯಾಯಾಲಯಗಳು ಜಾಮೀನು ನೀಡಲು ನಿರಾಕರಿಸಿದ್ದವು.

90 ವರ್ಷ ವಯಸ್ಸಿನ ಸಾಹಿತಿ, ಫ್ರೊಪೆಸರ್ ವರವರದ ರಾವ್ ಅವರಿಗೆ ಇತ್ತೀಚೆಗಷ್ಟೆ ನ್ಯಾಯಾಲಯ ಜಾಮೀನು ನೀಡಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಟ್ಯಾನ್ ಸ್ವಾಮಿ ಅವರಿಗೆ ಜಾಮೀನು ನೀಡುವುದಿರಲಿ ಸೂಕ್ತ ಚಿಕಿತ್ಸೆಯನ್ನೂ ನೀಡಲಾಗಿರಲಿಲ್ಲ. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಭಾರತದ ರಾಜಕೀಯರು, ಚಿಂತಕರು ಎಲ್ಲರೂ ವಯೋವೃದ್ಧರಾಗಿದ್ದು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಬಿಡುಗಡೆ ಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಯಾರ ಮನವಿಗೂ, ಪತ್ರಕ್ಕೂ ಸ್ಪಂದಿಸದ ಕೇಂದ್ರ ಸರ್ಕಾರ ಸ್ಟ್ಯಾನ್ ಸ್ವಾಮಿ ಸಾವಿಗೆ ತಾನು ಕಾರಣವಲ್ಲ ಎಂದು ಇಂದು ಹೇಳಿದೆ. ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಈ ಸಂಬಂಧ ಟ್ವಿಟ್ಟರ್ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 ಭಾರತ ಸರ್ಕಾರದ ಸಂವಿಧಾನಿಕ ಮತ್ತು ಪ್ರಜಾಪ್ರಭುತ್ವವಾದಿ ನಿಲುವುಗಳು ದೇಶದ ಸ್ವತಂತ್ರ ನ್ಯಾಯಾಂಗದಿಂದ ಅನೇಕ ಬಾರಿ ಪ್ರಶಂಸೆಗೊಳಗಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಮಾನವ ಹಕ್ಕುಗಳ ಆಯೋಗಗಳು ಉಲ್ಲಂಘನೆಯನ್ನು ಗಮನಿಸುತ್ತಲೇ ಇರುತ್ತವೆ. ಸ್ವತಂತ್ರ ಮಾಧ್ಯಮ ಮತ್ತು ಜಾಗೃತ ಸಮಾಜಕೂಡ ಸರ್ಕಾರದ ಪ್ರಜಾಪ್ರಭುತ್ವವಾದಿ ನಿಲುವುಗಳನ್ನು ಒಪ್ಪಿದೆ. ಮುಂದೆ ಕೂಡ ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಬದ್ಧತೆಯನ್ನು ಮುಂದುವೆರೆಸಿಕೊಂಡು ಹೋಗುತ್ತದೆ ಎಂದು ಸರ್ಕಾರ ಇಂದು ತನ್ನ ಪ್ರಕಟಣೆಯಲ್ಲಿ ತಿಳಿಸದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ, ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸೀತಾರಮ್ ಯೆಚೂರಿ ಸೇರಿದಂತೆ ವಿರೋಧಪಕ್ಷಗಳ 10 ಕ್ಕು ಹೆಚ್ಚು ನ್ಯಾಯಕರು ಇಂದು ರಾಷ್ಟ್ರಪತಿಗಳಿಗೆ ಪತ್ರ ಬರೆದು ಸ್ಟ್ಯಾನ್‌ ಸ್ವಾಮಿ ಸಾವಿಗೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ. UAPA ಕಾಯ್ದೆಯಡಿ ಬಂಧನಕ್ಕೆ ಒಳಗಾಗಿರುವ ಎಲ್ಲಾ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಲ್ಲಿ ಮನವಿ ಮಾಡಿದ್ದಾರೆ.

ಝಾರ್ಕಂಡದಲ್ಲಿ ಆದಿವಾಸಿಗಳಿಗಾಗಿ ಹೋರಾಟ ನಡೆಸಿದ ಸ್ಟ್ಯಾನ್‌ ಸ್ವಾಮಿ ಶ್ರೇಷ್ಠ ಮಾನವ ಹಕ್ಕುಗಳ ಹೋರಾಟಗಾರರಾಗಿದ್ದರು. UAPA ನಂತಹ ಭಯೋತ್ಪಾದನೆ ತಡೆ ಕಾಯ್ದೆಯಡಿ ಸುಳ್ಳು ಆರೋಪಗಳಡಿ ಅವರನ್ನು ಸರ್ಕಾರ ಜೈಲಿಗೆ ಹಾಕಿದೆ ಎಂದು ವಿರೋಧ ಪಕ್ಷಗಳ ನಾಯಕರು ತಮ್ಮ ಪತ್ರದಲ್ಲಿ ನರೇಂದ್ರ ಮೋದಿ ಸರ್ಕಾದ ವಿರುದ್ಧ ನೇರ ಆರೋಪಗಳನ್ನು ಮಾಡಿದ್ದಾರೆ.

ಸ್ಟ್ಯಾನ್ ಸ್ವಾಮಿ ಕುಟುಂಬಸ್ಥರು ಮತ್ತು ಎಲ್ಗರ್‌ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಇತರ ಹೋರಾಟಗಾರರು ಸ್ಟ್ಯಾನ್‌ ಸ್ವಾಮಿಯವರದು ಸಾಮಾನ್ಯ ಸಾವಲ್ಲ ಇದೊಂದು ವ್ಯವಸ್ಥೆಯೇ ನಡೆಸಿದ ಕಗ್ಗೊಲೆ ಎಂದು ಆಕ್ರೋಶವನ್ನು ಹೊರಹಾಕಿದ್ದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...