Homeಕರ್ನಾಟಕರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

- Advertisement -
- Advertisement -

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ಸಮರ್ಪಕವಾಗಿ ವಿಚಾರಣೆ ನಡೆಸದೇ ಪ್ರಕರಣವನ್ನು ವಜಾ ಗೊಳಿಸಿರುವುದು ಸರಿಯಲ್ಲ ಎಂದು ಆರೋಪ ದೇಶದೆಲ್ಲೆಡೆ ಕೇಳಿ ಬರುತ್ತಿದ್ದು ಪ್ರತಿಭಟನೆಗಳು ನಡೆದಿವೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಗುರುವಾರ ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗಯಿ ಅವರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಇತ್ತೀಚೆಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು.

‘ಸುಪ್ರೀಂ ಕೋರ್ಟ್‍ನ ವಿಶ್ವಾಸಾರ್ಹತೆಯ ಗಂಭೀರ ಬಿಕ್ಕಟ್ಟಿನಲ್ಲಿದೆ. ನ್ಯಾಯಾಲಯವು ದೂರುದಾರರ ದೂರನ್ನು ಸರಿಯಾದ ರೀತಿಯಲ್ಲಿ ಆಲಿಸುವಲ್ಲಿ ವಿಫಲವಾಗಿದೆ. ದೂರುದಾರಳ ಬೇಡಿಕೆಯಾದ ‘ವಿಶೇಷ ವಿಚಾರಣಾ ಸಮಿತಿ’ಯನ್ನು ಕಡೆಗಣಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕಿರಿಯರಾದ (ಜೂನಿಯರ್ಸ್) ನ್ಯಾಯಮೂರ್ತಿಗಳನ್ನು ಒಳಗೊಂಡ ಇನ್-ಹೌಸ್ ಸಮಿತಿಯನ್ನು ರಚಿಸಿತು. ಈ ಸಮಿತಿ 2019ರ ಮೇ 6 ರಂದು ‘ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎನ್ನುವ ತೀರ್ಮಾನ ನೀಡಿದ್ದಕ್ಕೆ ಆಶ್ಚರ್ಯ ಪಡಬೇಕಿಲ್ಲ.’ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ವಕೀಲರಾದ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಿನಯ್ ಶ್ರೀನಿವಾಸನ್

‘ನಾವೆಲ್ಲ ದೂರುದಾರ ಮಹಿಳೆಯೊಂದಿಗೆ ಐಕ್ಯಮತವಾಗಿ ನಿಂತುಕೊಳ್ಳುತ್ತೇವೆ. ಒಂದು ಸ್ವತಂತ್ರ ಮತ್ತು ನ್ಯಾಯಸಮ್ಮತ ವಿಚಾರಣೆಯ ನೀತಿನಿಯಮಗಳನ್ನು ಪಾಲಿಸದೇ ಸಮಿತಿ ನೀಡಿದ ತೀರ್ಮಾನವನ್ನು ತಿರಸ್ಕರಿಸುತ್ತೇವೆ. ಈ ಪ್ರಕರಣದಲ್ಲಿ ಪಾಲಿಸಲಾದ ಪ್ರಕ್ರಿಯೆಯಲ್ಲಿ ಬರೀ ಸ್ವಾಭಾವಿಕ ನ್ಯಾಯದ ತತ್ವಗಳನ್ನು ಮಾತ್ರ ಉಲ್ಲಂಘನೆಯಾಗದೇ ವಿಶಾಖ ತೀರ್ಪಿನ ಚೈತನ್ಯ ಮತ್ತು ಅದರಿಂದ ರೂಪಿಸಲಾದ ನೀತಿಗಳ ಉಲ್ಲಂಘನೆಯೂ ಆಗಿದೆ. ಇಷ್ಟೇ ಅಲ್ಲದೇ ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಧಿಕಾರದ ಅಸಮತೋಲನಗಳನ್ನು ಗುರುತಿಸಿ ಅದನ್ನು ಸರಿಪಡಿಸಲು ಇರುವ ಸೆಕ್ಷುವಲ್ ಹ್ಯಾರ್ಯಾಸ್‍ಮೆಂಟ್ ಆಫ್ ವಿಮೆನ್ ಎಟ್ ವಕ್‍ಪ್ಲೇಸ್ ಆ್ಯಕ್ಟ್ 2013 (POSH ACT) ನ ಉಲ್ಲಂಘನೆಯೂ ಆಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ಇದನ್ನು ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನಾವೆಲ್ಲರೂ ನ್ಯಾಯಾಂಗದ ಸ್ವಾತಂತ್ರ ಮತ್ತು ಸ್ವಾಯತ್ತತೆಯ ಪರವಾಗಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ನಾವು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ತೋರಿಸುವುದರಲ್ಲಿಯೂ ನಂಬಿಕೆ ಇಡುತ್ತೇವೆ, ಅದರಿಂದ ಲೋಪದೋಷಗಳನ್ನು ತಿದ್ದುಕೊಳ್ಳಲು ಸಹಾಯ ಆಗಿ ನ್ಯಾಯಾಂಗದ ಸ್ವಾತಂತ್ರದ ರಕ್ಷಣೆ ಆಗುತ್ತದೆಯೇ ಹೊರತು ಅದರ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುವುದಿಲ್ಲ. ನಮ್ಮ ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಸುಪ್ರೀಮ್ ಕೋರ್ಟಿನಿಂದ ಆದ ಅಧಿಕಾರದ ಈ ಸ್ಪಷ್ಟ ದುರ್ಬಳಕೆಯಿಂದ ನಮಗೆ ಹತಾಶೆ ಆಘಾತವಾಗಿದೆ ಎನ್ನುತ್ತಾರೆ ಪ್ರತಿಭಟನಾಕಾರರು.

ಸುಪ್ರೀಂ ಕೋರ್ಟ್ ತಾನು ಮಾಡಿದ ತಪ್ಪನ್ನು ತಿದ್ದಬೇಕು ಎಂದು ನಾವು ಆಗ್ರಹಿಸುತ್ತೇವೆ ಹಾಗೂ ದೂರುದಾರರ ಮೇಲೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸ್ಪಷ್ಟವಾದ ಕಾರ್ಯವಿಧಾನಗಳ ಅನುಪಸ್ಥಿತಿಯಲ್ಲಿ, ಸಹಜ ನ್ಯಾಯದ ತತ್ವಗಳನ್ನು ಪಾಲಿಸದೇ ಹಾಗೂ ದೂರುದಾರರ ಪರಿಣಾಮಕಾರಿಯಾದ ಪ್ರಾತಿನಿಧ್ಯ ಇಲ್ಲದೇ ಆಗಿರುವ ಈ ವರದಿ (ಇದನ್ನು ಸಾರ್ವಜನಿಕಗೊಳಿಸದೇ ಇದ್ದರೂ) ಯನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಇದೇ ಕೊನೆಯ ಮತ್ತು ಅಂತಿಮ ತೀರ್ಪು ಎಂದು ಒಪ್ಪಿಕೊಳ್ಳಲಾಗದು ಎಂದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟಿನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಕೆಳಗಿನಂತಿವೆ.

1. ದೂರುದಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋಟ್‍ನ ಪೂರ್ಣ ಪೀಠ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನರ್‍ಗಳಿಸಬೇಕು.
2. ವಿಶಾಖ ಗೈಡ್‍ಲೈನ್ಸ್, POSH ACT ಬದ್ಧವಾಗಿರುವಂತಹ ಹೊಸ ಸಮಿತಿಯನ್ನು ಸೂಕ್ತ ಪ್ರಕ್ರಿಯೆಯ ಮೂಲಕ ರಚಿಸಿ ದೂರುದಾರರ ಹಿತಾಸಕ್ತಿಯನ್ನು ಕಾಪಾಡಬೇಕು.
3. ಜಸ್ಟೀಸ್ ಬಾಬ್ಡೆ ಪ್ಯಾನಲ್ ವರದಿಯ ಪ್ರತಿಯೊಂದನ್ನು ದೂರುದಾರರಿಗೆ ನೀಡಬೇಕು
4. ದೂರುದಾರರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು
5. ರಚಿಸಬೇಕಿರುವ ಹೊಸ ಸಮಿತಿಗೆ ದಲಿತ ಸಮುದಾಯಕ್ಕೆ ಸೇರಿದ ಒಬ್ಬರಾದರೂ ನ್ಯಾಯಾಂಗ (ವಕೀಲರು/ನ್ಯಾಯಾಧೀಶರು/ನಿವೃತ್ತ ನ್ಯಾಯಾಧೀಶರು) ವ್ಯಕ್ತಿಯನ್ನು ನೇಮಿಸಬೇಕು.
6. ಎಸ್‍ಸಿ/ಎಸ್‍ಟಿ/ಒಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನ್ಯಾಯಾಂಗದ ಉನ್ನತ ಸ್ಥಾನಗಳಲ್ಲಿ ಮೀಸಲಾತಿಯನ್ನು ಒದಗಿಸಬೇಕು
ಈ ಮೊಕದ್ದಮೆಗೆ ಸಂಬಂಧಿಸಿ ನ್ಯಾ.ಚಂದ್ರಚೂಡ್ ಅವರ ಸಲಹೆಗಳನ್ನು ನಾವು ಅನುಮೋದಿಸುತ್ತೇವೆ.
7. ಹೊಸ ಸಮಿತಿಗೆ ನಿವೃತ್ತ ಮಹಿಳಾ ನ್ಯಾಯಾಧೀಶರನ್ನು ಬಾಹ್ಯ ಸದಸ್ಯರಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು
8. ಬಾರ್ ಕೌನ್ಸಿಲ್‍ನ ಗೌರವಾನ್ವಿತ ಮಹಿಳಾ ಸದಸ್ಯರನ್ನು ಅಮಿಕಸ್ ಕ್ಯೂರಿ (ಕೋರ್ಟ್‍ನ ಸ್ನೇಹಿತರು) ಎಂದು ಪರಿಗಣಿಸಬೇಕು
9. ದೂರುದಾರರು ಮುಂದಿಟ್ಟಿರುವ ಕುಂದುಕೊರತೆಗಳನ್ನು, ಅದರಲ್ಲೂ ವಕೀಲರೊಬ್ಬರ ನೆರವನ್ನು ಪಡೆಯುವಂತಹವನ್ನು ಪರಿಗಣಿಸಿ ಪರಿಹಾರ ಕಲ್ಪಿಸಬೇಕು.

ಪ್ರತಿಭಟನೆಗೆ ಭಾಗವಹಿಸಿದ, ಬೆಂಬಲಿಸಿದ ಸಂಘಟನೆಗಳು

ಸಿಐಇಡಿಎಸ್ ಕಲೆಕ್ಟಿವ್, ಬೆಂಗಳೂರು
2. ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು
3. ನ್ಯಾಷನಲ್ ನೆಟ್‍ವರ್ಕ್ ಆಫ್ ಸೆಕ್ಸ್ ವರ್ಕರ್ಸ್
4. ಕರ್ನಾಟಕ ಜನಾರೋಗ್ಯ ಚಳವಳಿ
5. ವಂಪ್
6. ಮುಸ್ಕಾನ್
7. ಕರ್ನಾಟಕ ಸೆಕ್ಸ್ ವರ್ಕ್‍ರ್ಸ್ ಯೂನಿಯನ್
8. ಸ್ತ್ರೀ ಜಾಗೃತಿ ಸಮಿತಿ
9. ಡೊಮೆಸ್ಟಿಕ್ ವರ್ಕ್‍ರ್ಸ್ ರೈಟ್ಸ್ ಯೂನಿಯನ್
10. ಮಹಿಳಾ ಮುನ್ನಡೆ
11. ಕರ್ನಾಟಕ ಜನಶಕ್ತಿ
12. ಸಂವಿಧಾನ ಉಳಿವಿಗಾಗಿ ಕರ್ನಾಟಕ
13. ಸೌಥ್ ಇಂಡಿಯಾ ಸೆಲ್ ಫಾರ್ ಹ್ಯುಮನ್ ರೈಟ್ಸ್, ಎಡುಕೇಷನ್ ಅಂಡ್ ಮಾನಿಟರಿಂಗ್ (ಎಸ್‍ಐಸಿಎಚ್‍ಆರ್‍ಇಎಂ)
14. ರಾಮದಾಸ್ ರಾವ್
15. ತಾರಾ ಕೃಷ್ಣಮೂರ್ತಿ, ಕೋ ಫೌಂಡರ್, ಶಕ್ತಿ – ಪೊಲಿಟಿಕಲ್ ಪವರ್ ಟು ವುಮೆನ್
16. ಗಮನ ವರ್ಕರ್ಸ್ ಕಲೆಕ್ಟಿವ್, ಬೆಂಗಳೂರು
17. ಸಾಧನ ಮಹಿಳೆಯರ ಸಂಘ, ಬೆಂಗಳೂರು
18. ಲೈಂಗಿಕ ಹಿಂಸೆಯ ವಿರೋಧಿ ಜನಚಳವಳಿ
19. ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ (ಏಔಔಉU)
20. ಸೌತ್ ಇಂಡಿಯಾ ಫೆಡೆರೇಷನ್ ಆಫ್ ಟ್ರೇಡ್ ಯೂನಿಯನ್ಸ್ (SIಈಖಿU)
21. ಂIಏಙಂಖಿಂ (ಸೀನಿಯರ್ ಸಿಟಿಜನ್ಸ್ ಗ್ರೂಪ್)
22. ಮನೆಗೆಲಸ ಕಾರ್ಮಿಕರ ಯೂನಿಯನ್ (ಒಂಏಂಂಙU)
23. ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಯೂನಿಯನ್ (ಂಏಏಏU)
24. ಫೆಡಿನಾ
25. ರಾಜೇಶ್, ಉಮಾದೇವಿ, ಶ್ರೀನಿವಾಸ್

‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...