Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...