Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...