Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...