Homeಮುಖಪುಟಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

- Advertisement -
- Advertisement -

ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಕಳ್ಳನೊಬ್ಬ ಕಳ್ಳತನ ಮಾಡಿ, ಕ್ಷಮಿಸು ಎಂದು ಕ್ಷಮಾಪಣಾ ಪತ್ರ ಬರೆದಿಟ್ಟು ಹೋಗಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ.

ಛತ್ತೀಸ್‌ಗಢದ ಕೊತ್ವಾಲಿ ಪೊಲೀಸ್ ಸ್ಟೇಷನ್‌ನಲ್ಲಿ ಅಸಿಸ್ಟೆಂಟ್‌ ಸಬ್ ಇನ್ಸ್‌ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಮಲೇಶ್ ಕಠಾರೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಕಮಲೇಶ್ ಕಠಾರೆ ಅವರ ಕುಟುಂಬವು ಭಿಂದ್‌ನಲ್ಲಿ ನೆಲೆಸಿದೆ.

ತನಿಖೆ ನಡೆಸಿರುವ ಪೊಲೀಸರಿಗೆ, ಮನೆಯಲ್ಲಿ ಕಳ್ಳ ಬರೆದಿರುವ ಪತ್ರ ದೊರೆತಿದೆ. “ಕ್ಷಮಿಸು ಗೆಳೆಯ..  ಅನಿವಾರ್ಯ ಕಾರಣಗಳಿಂದ ಮತ್ತು ಅಸಹಾಯಕತೆಯಿಂದ ನಾನು ನಿಮ್ಮ ಮನೆ ಕಳ್ಳತನ ಮಾಡಿದ್ದೇನೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

“ಇಂತಹ ಕೃತ್ಯವನ್ನು ನಾನು ಎಂದೂ ಮಾಡಿಲ್ಲ. ಆದರೆ, ನನ್ನ ಸ್ನೇಹಿತನ ಜೀವವನ್ನು ಉಳಿಸಲು ನಾನು ಈ ಕೆಲಸ ಮಾಡಬೇಕಾಗಿದೆ. ಕಳ್ಳತನ ಮಾಡಿದಂತಹ ಬೆಲೆಬಾಳುವ ಆಭರಣಗಳು ಮತ್ತು ದುಡ್ಡನ್ನು ಅತಿ ಬೇಗನೆ ಹಿಂದಿರುಗಿಸುತ್ತೇನೆ. ನಾನು ಕಳ್ಳತನ ಮಾಡದೆ ಇದ್ದರೆ ನನ್ನ ಸ್ನೇಹಿತನ ಪ್ರಾಣ ಉಳಿಸುವುದು ಕಷ್ಟ” ಎಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಮನೆಯಲ್ಲಿದ್ದ ಕಮಲೇಶ್ ಕಠಾರೆ ಪತ್ನಿ ಮತ್ತು ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಜೂನ್ 30ಕ್ಕೆ ತೆರಳಿದ್ದರು. ಸೋಮವಾರ ರಾತ್ರಿ ಮನೆಗೆ ಹಿಂದಿರುಗಿದಾಗ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿದ್ದಾರೆ. ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಮತ್ತು ಹಣವನ್ನು ಕಳ್ಳತನ ಮಾಡಿರುವುದು ಕಂಡು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಇನ್ನು ಕ್ಷಮಾಪಣೆ ಪತ್ರವನ್ನು ನೋಡಿದ ಪೊಲೀಸರು ಈ ಕೃತ್ಯದಲ್ಲಿ ದೂರದ ಸಂಬಂಧಿಕರ ಕೈವಾಡ ಇರಬಹುದೆಂದು ಶಂಕಿಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಹರಿಯಾಣದ ಜಿಂದ್‌ನಲ್ಲಿ 1,700 ಡೋಸ್‌ಗಳಷ್ಟು ಕೊರೊನಾ ಲಸಿಕೆಗಳು ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಕಳ್ಳ, ವಾಪಸ್ ತಂದು ಇಟ್ಟು ಕ್ಷಮೆ ಕೇಳಿರುವ ಘಟನೆ ನಡೆದಿತ್ತು. “ಕ್ಷಮಿಸಿ, ಇದು ಕೊರೊನಾಗೆ ಇರುವ ಔಷಧಿಗಳೆಂದು ನನಗೆ ತಿಳಿದಿರಲಿಲ್ಲ” ಎಂದು ಹಿಂದಿ ಭಾಷೆಯಲ್ಲಿ ಪತ್ರ ಬರೆದು ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳಿಂದ ತುಂಬಿದ ಬ್ಯಾಗ್‌ ಪೊಲೀಸ್ ಠಾಣೆ ಬಳಿ ಅಂಗಡಿಯಲ್ಲಿದ್ದ ವ್ಯಕ್ತಿಗೆ ಕೊಟ್ಟು ಹೋಗಿದ್ದ ಘಟನೆ ನಡೆದಿತ್ತು.


ಇದನ್ನೂ ಓದಿ: ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...