ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.
ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.
ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.
ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.
ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ
ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.
ಸ್ಯಾಂಡಲ್ವುಡ್ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್, ನಾಯಕಿಯಾಗಿ ಅಲಯ


