Homeಕರ್ನಾಟಕಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

- Advertisement -
- Advertisement -

ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಅಮೃತಮತಿ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಕಿಶೋರ್‌

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.

ಸ್ಯಾಂಡಲ್‌ವುಡ್‌ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್​ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್​ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.


ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...