Homeಮುಖಪುಟಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಈ ಮೊದಲು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಾಗಿದೆ.

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಕೊನೆಗೂ ಮುಗಿದಿದೆ. ಹಾಲಿ ಸಚಿವರಾಗಿದ್ದ 11 ಮಂದಿ ರಾಜೀನಾಮೆ ನೀಡಿದ್ದು, ಹೊಸದಾಗಿ ಒಟ್ಟು 43 ಜನರಿಗೆ ಸ್ಥಾನ ಕಲ್ಪಿಸಲಾಗಿದೆ. ಅದರಲ್ಲಿ ಕರ್ನಾಟಕದ ನಾಲ್ವರು ಸೇರಿದ್ದಾರೆ.

ಕರ್ನಾಟವನ್ನು ಪ್ರತಿನಿಧಿಸಿ ಈ ಮೊದಲು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗದ ಎ.ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ ಮತ್ತು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ಕರ್ನಾಟಕದ ವತಿಯಿಂದ ಮೋದಿ ಸಂಪುಟ ಸೇರಿದವರಾಗಿದ್ದಾರೆ. ಇವರ ಸಣ್ಣ ಪರಿಚಯ ಹೀಗಿದೆ.

ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರು, ಕರ್ನಾಟಕ ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ರಾಜ್ಯದಲ್ಲಿ ಬಿಜೆಪಿಯಿಂದ ಆಯ್ಕೆಯಾದ ಏಕೈಕ ಮಹಿಳಾ ಸಂಸದರು. ಎಬಿವಿಪಿ ಹಿನ್ನೆಲೆಯ ಇವರು ಯಡಿಯೂರಪ್ಪನವರ ಆಪ್ತರು. 2004ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಇವರು 2008ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ, ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕರಾವಳಿ ಕರ್ನಾಟಕ, ಒಕ್ಕಲಿಗ ಸಮುದಾಯ ಮತ್ತು ಮಹಿಳೆ ಈ ಎಲ್ಲಾ ಮಾನದಂಡಗಳಿಂದ ಇವರು ಸಚಿವ ಸಂಪುಟ ಸೇರಿದ್ದಾರೆ ಎನ್ನಲಾಗುತ್ತಿದೆ.

ಎ.ನಾರಾಯಣಸ್ವಾಮಿ

ಚಿತ್ರದುರ್ಗ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದ ಎ.ನಾರಾಯಣಸ್ವಾಮಿಯವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿದೆ. ಎಡಗೈ ದಲಿತ ಸಮುದಾಯವನ್ನು ಪ್ರತಿನಿಧಿಸುವ ಕಾರಣದಿಂದ ಇವರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ.

ಎ ನಾರಾಯಣಸ್ವಾಮಿಯವರು ಬೆಂಗಳೂರಿನ ಆನೇಕಲ್‌ನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದರು. ಈಗ ಕೇಂದ್ರ ಸಚಿವರಾಗಿದ್ದಾರೆ.

ಭಗವಂತ ಖೂಬಾ

ಎರಡು ಬಾರಿ ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖೂಬಾರವರು ಲೋಕಸಭೆ ಸದಸ್ಯರಿಗೆ ಗಣಕ ವಿತರಿಸುವ ಸಮಿತಿ ಮತ್ತು ಸದಸ್ಯರಾಗಿದ್ದಾರೆ. ಈ ಬಾರಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜೀವ್‌ ಚಂದ್ರಶೇಖರ್

ಮೂಲತಃ ಗುಜರಾತ್‌ನವರಾದ ರಾಜೀವ್ ಚಂದ್ರಶೇಖರ್ 2006ರಿಂದ ಸ್ವತಂತ್ರ ರಾಜ್ಯಸಭಾ ಸದಸ್ಯರಾಗಿದ್ದು, 2018ರಲ್ಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಇವರು ಬಿಜೆಪಿ ರಾಷ್ಟ್ರೀಯ ವಕ್ತಾರರು ಹೌದು.

ಏಷ್ಯಾ ನೆಟ್ ಮಾಧ್ಯಮ ಸಂಸ್ಥೆಯ ಮಾಲೀಕರದು ಇವರು ಇತ್ತೀಚೆಗೆ ಪುದುಚೇರಿಯಲ್ಲಿ ಎನ್‌ಡಿಎ ಗೆಲುವಿಗೆ ಕಾರ್ಯತಂತ್ರ ರೂಪಿಸಿದವರು ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮೋದಿ ಸಂಪುಟ ಸೇರಿದ 43 ಜನರ ಪಟ್ಟಿ ಈ ಕೆಳಗಿನಂತಿದೆ.


ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ಪುನರ್ರಚನೆ: ಡಾ. ಹರ್ಷವರ್ಧನ್‌ ಸೇರಿ 9 ಸಚಿವರ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...