Homeಕರ್ನಾಟಕಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರಿನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಟಾಟಾ ಏಸ್ ಗಾಡಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದ ಘಟನೆ ಜೂನ್ 29ಕ್ಕೆ ನಡೆದಿತ್ತು.‌ ಪೊಲೀಸರ ಬೇಜವಾಬ್ದಾರಿಯಿಂದ ದುರ್ಘಟನೆ ನಡೆದಿದೆ ಎಂದು ಆರೋಪಿಸಿ, ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದರು.

ರಾಮಕುಂಜ ಕ್ರಾಸ್ ಬಳಿ ತಾತ್ಕಾಲಿಕವಾಗಿ ನಿರ್ಮಿಸಿದ ಪೊಲೀಸ್‌ ಚೌಕಿಯನ್ನು ಕೆಡವಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದಾದ ಬಳಿಕ ಕಡಬ ಪೊಲೀಸರು 39 ಕ್ಕೂ ಅಧಿಕ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡು ಸುಲಿಗೆಗೆ ಇಳಿದಿದ್ದಾರೆ, ಅಮಾಯಕರ ಮನೆಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜೂನ್ 29 ರಂದು ಆತೂರು ಬೈಲು ನಿವಾಸಿ ಹಾರಿಸ್ (33), ತನ್ನ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಡೆದಿದ್ದರು. ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದರು. ಇದರಿಂದಾಗಿ ಮೃತನ ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ವಾಹನ ಹೀಗೆ ಏಕಾಏಕಿ ಬರಲು ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ದಿಕ್ಕಿನಲ್ಲಿ ಸನ್ನೆ ಮಾಡಿದ್ದು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಘಟನೆ ಕುರಿತು, ಪೊಲೀಸ್ ಚೆಕ್‌ಪೋಸ್ಟ್‌ ಧ್ವಂಸ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಚಿನ್ನಪ್ಪ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಸ್ಥಳೀಯರ ಮೇಲೆ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೆಸರು ಹೇಳಲು ಇಚ್ಛಿಸದ ಸ್ಥಳೀಯರೊಬ್ಬರು,  “ಅದು ತಾತ್ಕಾಲಿಕ ಚೆಕ್ ಪೋಸ್ಟ್ ಆಗಿತ್ತು. ಪೊಲೀಸರು ಅಲ್ಲಿ ಕುಳಿತು ಕೆಲಸ ಕಾರ್ಯಗಳಿಗೆ ಹೋಗುವ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದರು. ಹ್ಯಾರಿಸ್ ಘಟನೆಯಿಂದ ಜನರ ಕೋಪ ಹೆಚ್ಚಾಗಿ ಚೆಕ್ ಪೋಸ್ಟ್ ಧ್ವಂಸ ಮಾಡಿದ್ದಾರೆ. ಆದರೆ, ಇದನ್ನೇ ನೆಪವಾಗಿಸಿ ಪೊಲೀಸರು ಅನೇಕ ಹೋರಾಟಗಾರರು, ಸಂಘಟನೆಯ ಸದಸ್ಯರು, ಗ್ರಾಮಪಂಚಾಯಿತಿ ಸದಸ್ಯರು ಮತ್ತು ಅಮಾಯಕ ಯುವಕರನ್ನು ಗುರಿಯಾಗಿಸಿ 39 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಗಳಿಗೆ ನುಗ್ಗಿ ಯುವಕರನ್ನು ಎಳೆದೊಯ್ಯುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ನಿನ್ನ ಹೆಸರಿದೆ ಎಂದು ಬೆದರಿಸಿ ಹಣ ನೀಡುವಂತೆ ಬೆದರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಅಮಾಯಕ ಯುವಕರ ಮೇಲೆ ಪ್ರಕರಣ ದಾಖಲಿಸಿದ್ದು, ನಿನ್ನೆ ಮಧ್ಯರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವೆಸಗಿದ ಘಟನೆ  ನಡೆದಿದೆ. ಮನೆಗೆ ನುಗ್ಗಿದ 7 ರಿಂದ 9 ಮಂದಿ ಇದ್ದ ಪೋಲೀಸ್ ತಂಡ ಮನೆಯ ವಸ್ತುಗಳನ್ನು ನಾಶ ಪಡಿಸಿ, ಮಹಿಳೆಯರಿಗೆ ಗನ್ ತೋರಿಸಿ, ನಿಮ್ಮ ಮಾನ ಹರಾಜು ಮಾಡುತ್ತೇವೆ ಎಂದು ಬೆದರಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಜುಲೈ 6 ರಂದು ತಡರಾತ್ರಿ ಕಡಬ ಪೊಲೀಸರು ಮಾನಸಿಕ ಅಸ್ವಸ್ಥ ಇರುವ ಮನೆಗೂ ನುಗ್ಗಿ ತಪಾಸಣೆ ನಡೆಸುವ ಉದ್ದೇಶವಾದರೂ ಏನು..? ಕೋವಿಡ್ ಪರಿಸ್ಥಿತಿಯಲ್ಲೂ ಇಂತಹ ಕ್ರೌರ್ಯ ನಡೆಸಲು ಪೊಲೀಸರಿಗೆ ಮನಸ್ಸಾದರೂ ಹೇಗೆ ಬಂತು..?  ಕಾನೂನು ನೀತಿ ನಿಯಮ ಎಂಬುದು ಜನಸಾಮಾನ್ಯರಿಗೆ ಮಾತ್ರವೇ..? ಇದು ಕಡಬ ಪೊಲೀಸರಿಗೆ ಅನ್ವಯ ಆಗುವುದಿಲ್ಲವೇ..?  ಮಕ್ಕಳು, ವೃದ್ಧರು, ಮಹಿಳೆಯರು ಇರುವ ಮನೆಗೆ ಬಾಗಿಲು ಮುರಿದು ನುಗ್ಗುವಾಗ ಇವರಿಗೆ ತಮ್ಮ ತಮ್ಮ ಮನೆಯವರ ನೆನಪಾಗುವುದಿಲ್ಲವೇ?  ಕೊರೊನಾವು ಜಗತ್ತಿಗೆ ಮನುಷ್ಯತ್ವದ ಪಾಠ ಕಲಿಸಿಬಿಟ್ಟಿದೆ. ಆದರೆ ಕಡಬ ಪೊಲೀಸರು ಇನ್ನೂ ಪಾಠ ಕಲಿತಿಲ್ಲ. ಮಹಿಳೆಯರ ಕಣ್ಣೀರಶಾಪ ಒಂದಲ್ಲ ಒಂದು ದಿನ ತಟ್ಟೇ ತಟ್ಟುತ್ತದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರ ಗೂಂಡಾ ವರ್ತನೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದು, ಇದರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...