Homeಮುಖಪುಟಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

ಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

- Advertisement -
- Advertisement -

ತಮಿಳು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ನಟಿಸಿದ ಇಂಡೋ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರ  ಮೇಲೆ ಅತ್ಯಾಚಾರ ಮತ್ತು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ತಮಿಳುನಾಡಿದ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್ ಅವರಿಗೆ ಮದ್ರಾಸ್ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ನೀಡಿದೆ.

ನ್ಯಾಯಮೂರ್ತಿ ಎಂ. ನಿರ್ಮಲ್ ಕುಮಾರ್ ಜಾಮೀನು ಮಂಜೂರು ಮಾಡಿದ್ದು, ಪಾಸ್‌ಪೋರ್ಟ್‌ ಮತ್ತು ತಲಾ  10,000 ಸಾವಿರ ರೂಪಾಯಿಗಳಂತೆ ಇಬ್ಬರು ಶ್ಯೂರಿಟಿ ಹಾಕಿದ ನಂತರ ಜಾಮೀನು ನೀಡಲಾಗಿದೆ. ಜೊತೆಗೆ  ಎರಡು ವಾರಗಳವರೆಗೆ ಪ್ರತಿದಿನ ತನಿಖಾ ಅಧಿಕಾರಿಯ ಮುಂದೆ ಹಾಜರಾಗಬೇಕು. ತನಿಖಾಧಿಕಾರಿ ಕರೆ ಮಾಡಿದಾಗಲೆಲ್ಲಾ ಬಂದು ಹೋಗಬೇಕು ಎಂದು ತಿಳಿಸಲಾಗಿದೆ.

ಮಾಜಿ ಸಚಿವ ಮಣಿಕಂಠನ್ ಮದುವೆಯಾಗಿದ್ದರು ಕೂಡ ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯ ಜೊತೆಗೆ ವಾಸಿಸುತ್ತಿದ್ದರು. “ಮಣಿಕಂಠನ್ ಕಳೆದ ನಾಲ್ಕು ವರ್ಷಗಳಿಂದ ತಮ್ಮ ಜೊತೆ ಲಿವ್‌ ಇನ್ ಸಂಬಂಧದಲ್ಲಿ ಇದ್ದಾರೆ. 3 ಸಾರಿ ಬಲವಂತದಿಂದ ಗರ್ಭಪಾತವನ್ನು ಮಾಡಿಸಿದ್ದಾರೆ. ತಮ್ಮ ಹೆಂಡತಿಗೆ ವಿಚ್ಛೇದನ ನೀಡಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

“ತನಿಖೆಯೂ ಈಗಾಗಲೇ ಭಾಗಶಃ ಮುಗಿದಿದೆ. ಕಕ್ಷಿದಾರರು ನ್ಯಾಯಾಲಯದ ಎಲ್ಲಾ ಷರತ್ತುಗಳಿಗೆ ಬದ್ಧರಾಗಿರುತ್ತಾರೆ” ಎಂದು ಮಾಜಿ ಸಚಿವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಜೊತೆಗೆ ಅತ್ಯಾಚಾರ ಮತ್ತು ಒಮ್ಮತದ ಲೈಂಗಿಕತೆಯ ನಡುವೆ ಸ್ಪಷ್ಟ ವ್ಯತ್ಯಾಸವಿದೆ. ರಾಜಕೀಯ ಪ್ರೇರಿತವಾಗಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮದ್ರಾಸ್ ಹೈಕೋರ್ಟ್‌ನಲ್ಲಿ ತಮ್ಮ ಬಂಧನಕ್ಕೆ ತಡಕೋರಿ ಮಣಿಕಂಠನ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮದ್ರಾಸ್ ಹೈಕೋರ್ಟ್ ಮಣಿಕಂಠನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿ ಜೂನ್ 9 ರ ವರೆಗೆ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಜೂನ್ 9 ರ ನಂತರ ಮಣಿಕಂಠನ್ ತಮಿಳುನಾಡನ್ನು ತೊರೆದು ತಲೆಮರೆಸಿಕೊಂಡಿದ್ದರು. ನಂತರ ಜೂನ್ 20 ರಂದು ಬೆಂಗಳೂರಿನಲ್ಲಿ ಮಣಿಕಂಠನ್ ಅಡಗಿರುವ ನಿಖರ ಮಾಹಿತಿಯನ್ನು ಪಡೆದ ಪೊಲೀಸರು ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದೊಯ್ದಿದ್ದರು.

ಮಲೇಷಿಯಾ ಮೂಲದ ಮಹಿಳೆ ಆಡ್ಯಾರ್ ಆಲ್ ವಿಮೆನ್ ಪೊಲೀಸ್ ಠಾಣೆಯಲ್ಲಿ ಮಣಿಕಂಠನ್ ಅವರ ವಿರುದ್ಧ ಮೋಸ, ಅತ್ಯಾಚಾರ, ಗರ್ಭಪಾತದ ಆರೋಪದಲ್ಲಿ ದೂರು ದಾಖಲಿಸಿದ್ದರು.  ಆಡ್ಯಾರ್ ಪೊಲೀಸರು ಮಣಿಕಂಠನ್ ವಿರುದ್ಧ IPC ಸೆಕ್ಷನ್ 376 ( ಅತ್ಯಾಚಾರ) ,ಸೆಕ್ಷನ್ 313 (ಗರ್ಭಪಾತ), ಸೆಕ್ಷನ್ 323 ( ಸ್ವಯಂ ಪ್ರೇರಿತ ಹಲ್ಲೆ), ಸೆಕ್ಷನ್ 417(ಮೋಸ), ಸೆಕ್ಷನ್ 506(i)(ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) IT ಕಾಯ್ದೆ ಸೇರಿ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...