Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...