Homeಅಂಕಣಗಳುಬೆಂಗಾವಲೂರು ಎಂಬೋ ದಂಡು ಪ್ರದೇಶದ ಪಾಳೇಗಾರರಲ್ಲಿ ಬಡಪಾಯಿ ಕನ್ನಡಿಗರ ಬಿನ್ನವತ್ತಲೆ

ಬೆಂಗಾವಲೂರು ಎಂಬೋ ದಂಡು ಪ್ರದೇಶದ ಪಾಳೇಗಾರರಲ್ಲಿ ಬಡಪಾಯಿ ಕನ್ನಡಿಗರ ಬಿನ್ನವತ್ತಲೆ

- Advertisement -
- Advertisement -

ಮಾನ್ಯರೇ,

ತಾವು ನಮ್ಮ ವೋಟು ಪಡೆದು ಟಾಟಾ ಬೈ ಬೈ ಹೇಳಿ ನಮ್ಮ ಸುಂಕದ ಹಣದಿಂದ ಖರೀದಿ ಮಾಡಿದ ಪುಷ್ಪಕ ವಿಮಾನ ಹತ್ತಿ ಬೆಂಗಾವಲು ಊರಿಗೆ ಹೋದಮೇಲೆ ನಮ್ಮ ನಿಮ್ಮ ಭೇಟಿ ಇಲ್ಲ. ಒಂದು ಪತ್ರ ಇಲ್ಲ, ಈಮೇಲೂ ಇಲ್ಲ, ಎಸ್‌ಎಂಎಸ್‌ಗೆ ಉತ್ತರ ಇಲ್ಲ. ವಾಟ್ಸ್‌ಅಪ್ ಸಂದೇಶಕ್ಕೆ ಬ್ಲೂ ಟಿಕ್‌ನ ಪರತ್ ಪಾವತಿ ಸಹಿತ ಸಿಗಲಿಲ್ಲ. ವೋಟು ಕೇಳುವ ಮುನ್ನ ನೀವೇ ನಮ್ಮನ್ನು ಹುಡುಕಿಕೊಂಡು ಬಂದಿರಿ. ಆದರೆ ವೋಟು ಎಣಿಕೆ ನಂತರ ನೀವು ಅಂತರ್ದಾನವಾಗಿಬಿಟ್ಟಿರಿ. ನಮ್ಮ ಓಣಿಯಲ್ಲಿ ಪಿಕ್‌ಪಾಕೆಟ್ ಮಾಡಿ ಜೈಲಿಗೆ ಹೋಗಿದ್ದ, ನಿಮ್ಮ ಆಶೀರ್ವಾದದಿಂದ ಹೊರಗೆಬಂದಿದ್ದ ಕಳ್ಳ ಕಿಟ್ಯಾ ಈಗ ಕೆ. ಕೃಷ್ಣ ಕುಮಾರ್ ಆಗಿ ಬಿಟ್ಟಿದ್ದಾನೆ. ಅವನು ಈಗ ತಮ್ಮ ಪಿಎ ಆಗಿದ್ದೇನೆ ಎಂದೂ, ತಮ್ಮ ಸ್ವಯಂ ಘೋಷಿತ ಸಲಹೆಗಾರನಾಗಿಬಿಟ್ಟಿದ್ದಾನೆ ಎಂದೂ ಹೇಳಿಕೊಂಡಿದ್ದಾನೆ. ನನ್ನಂಥ ಬಡಪಾಯಿಗಳ ಪಾಲಿಗೆ ಅವನೇ ಮುಖ್ಯಮಂತ್ರಿಯಾಗಿ ಬಿಟ್ಟಿದ್ದಾನೆ.

ನಮಗೆ ಅವನ ಭೇಟಿಯೇ ದೇವ ದುರ್ಲಭವಾಗಿಬಿಟ್ಟಿದೆ. ಇನ್ನು ನಿಮ್ಮಂಥವರ ಮಾತು ಕೇವಲ ಆಕಾಶವಾಣಿಯಲ್ಲಿ ಕೇಳುತ್ತಿದೆ. ನೀವು ನಮ್ಮನ್ನು ಬಂದು ಭೇಟಿ ಆಗುವುದು ಇನ್ನು ಐದು ವರ್ಷದ ನಂತರ ಇದ್ದೇ ಇದೆ ಅಂತ ನಾವು ಸುಮ್ಮನೆ ಇದ್ದು ಬಿಡುತ್ತೇವೆ. ನೀವು ನಮ್ಮ ಊರನ್ನು ಉದ್ಧಾರ ಮಾಡ್ತೀರಿ ಅಂತ ಆಶ್ವಾಸನೆ ನೀಡಿದ್ದರೂ ಸಹಿತ ಮಾಡಿಲ್ಲ. ನಿಮ್ಮ ಊರಿನ ಮೇಲೆ ನಿಮಗೆ ಎಷ್ಟು ಪ್ರೀತಿ ಎಂದರೆ ನಿಮ್ಮ ಬಾಲ್ಯದಾಗ ನೀವು ಬಿಟ್ಟು ಹೋದಾಗ ಅದು ಹೆಂಗ ಇತ್ತೋ ಹಾಂಗೆ ಇರಬೇಕು ಅಂತ ನೀವು ಏನೂ ಬದಲಾವಣೆ ಮಾಡಿಲ್ಲ ಅಂತ ಜನ ಮಾತಾಡಿಕೊಳ್ಳುತ್ತಿದ್ದಾರೆ. ಇರಲಿ.

ಇದು ಎಲ್ಲಾ ಹೆಂಗ ಐತಿ ಅಂದರ, ಜಗಜಿತ್ ಸಿಂಗ್ ಅವರ ಗಜಲ್‌ನ ಸಾಲಿನ ಹಂಗ ಐತಿ.

“ಈ ವರ್ಷ ಬಹಳ ಮಳೆ ಆಗ್ತದ, ಬೆಳೆ ಬರ್ತದ, ಎಲ್ಲಾ ಛಲೋ ಆಗ್ತೆತಿ,

ಹಿಂಗ ಆಗ್ತದೋ, ಇಲ್ಲೋ, ಗೊತ್ತಿಲ್ಲ,

ಆದರ ಹಿಂಗ ಆಗ್ತದ ಅನ್ನುವ ಕನಸು ಮಾತ್ರ ಭಾರಿ ಛಲೋ ಐತಿ”.

ಇದೆಲ್ಲಾ ಐತಿ. ಇರಲಿ, ಆದರೂ ಉಭಯ ಕುಶಲೋಪರಿ ಸಾಂಪ್ರತ. ಇನ್ನು ನಮ್ಮ ಊರಿನವರ ಕಡೆಯಿಂದ ನಿಮಗೆ ಒಂದು ಮೂಕ ಅರ್ಜಿ.

ಮೆಹರ್‌ಬಾನ್ ಸಾಹೇಬರೇ,

ರಾಜ್ಯ ಸರಕಾರ ನೇಮಿಸಿದ ವಿಜಯ ಭಾಸ್ಕರ ಸಮಿತಿ ಆಡಳಿತ ಸುಧಾರಣೆ ಬಗ್ಗೆ ಕೆಲವು ಶಿಫಾರಸುಗಳನ್ನು ಮಾಡಿದೆ. ಮೊದಲ ಹಂತದಲ್ಲಿ ಕಂದಾಯ, ಆಹಾರ ಹಾಗೂ ರಸ್ತೆ ಸಾರಿಗೆ ಇಲಾಖೆಗಳ ಬಗ್ಗೆ ಸಲಹೆಗಳನ್ನು ನೀಡಿದೆ. ಇವುಗಳಲ್ಲಿ ಕೆಲವು ಜನಪರ ಸಲಹೆಗಳಾಗಿದ್ದು ಅವುಗಳನ್ನು ನಾವು ಸ್ವಾಗತ ಮಾಡುತ್ತೇವೆ. ಇನ್ನು ಕೆಲವು ವಿಷಯಗಳನ್ನು ನಾವು ಸಕಾರಣವಾಗಿ ವಿರೋಧಿಸುತ್ತೇವೆ.

ಅವುಗಳು ಇಂತಿವೆ:

ಸರಕಾರದ 800ಕ್ಕೂ ಹೆಚ್ಚು ಸೇವೆಗಳನ್ನು ಸೇವಾಸಿಂಧು ಎನ್ನುವ ಒಂದೇ ಜಾಲತಾಣ ಹಾಗೂ ತಂತ್ರಾಂಶದ ಮೂಲಕ ನೀಡುವುದು ಸ್ವಾಗತಾರ್ಹ. ಈ ಸೇವೆಗಳನ್ನು ಜನರಿಗೆ ದೊರಕಿಸಲು ನಗರಗಳಲ್ಲಿ ಕರ್ನಾಟಕ-ಒನ್ ಹಾಗೂ ಅಟಲ್‌ಜಿ ಜನಸ್ನೇಹಿ ಕೇಂದ್ರ ಹಾಗೂ ಹಳ್ಳಿಗಳಲ್ಲಿ ಗ್ರಾಮ ಪಂಚಾಯತ್ ಬಾಪೂಜಿ ಸೇವಾ ಕೇಂದ್ರಗಳನ್ನು ಏಕ ಗವಾಕ್ಷಿಗಳಾಗಿ ಬಳಸುವ ಯೋಜನೆ ಸಹಿತ ಸ್ವಾಗತಾರ್ಹ. ಇದರಿಂದ ಜನ ಅನೇಕ ಕಚೇರಿಗಳಿಗೆ ಅನಗತ್ಯವಾಗಿ ಎಡತಾಕುವುದು ತಪ್ಪುತ್ತದೆ.

PC : mandya.nic.in

ಆಹಾರ ಧಾನ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಸಹಿತ ಬಹಳ ಅನುಕೂಲಕರವಾದದು. ಆದರೆ ಇದಕ್ಕಾಗಿ ಜನರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದು ಒಳ್ಳೆಯದಲ್ಲ. ಇದರಿಂದ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಆಗುತ್ತದೆ. ಇದರ ಇನ್ನೊಂದು ಅಪಾಯಕಾರಿ ಸಾಧ್ಯತೆ ಏನು ಎಂದರೆ, ಈ ರೀತಿಯ ನಿಯಮ ಜಾರಿಗೆ ಬಂದರೆ, ಹಳ್ಳಿಗಳಲ್ಲಿ ಮನೆಗೆ ಆಹಾರ ಧಾನ್ಯ ತಂದು ಕೊಡುವ ಏಜೆಂಟ್‌ಗಳು ಹುಟ್ಟಿಕೊಳ್ಳಬಹುದು. ಆಹಾರ ಧಾನ್ಯಗಳನ್ನು ಮನೆಗೆ ಉಚಿತವಾಗಿ ತಲುಪಿಸುವ ವ್ಯವಸ್ಥೆ ಆರಂಭವಾದರೆ ಸರಕಾರಕ್ಕೆ ವಿವಿಧ ಮಟ್ಟದ ಮಧ್ಯವರ್ತಿಗಳ ಲಾಭ ಹಾಗೂ ಅವರ ಕಮಿಷನ್ ಹಣದ ಹಣ ಉಳಿತಾಯವಾಗುತ್ತದೆ. ಇದೆ ಹಣವನ್ನು ಮನೆ ಬಾಗಿಲಿಗೆ ತಲುಪಿಸುವ ಖರ್ಚಿಗೆ ಬಳಸಬಹುದು.

ಜನಸಂಖ್ಯೆ, ರಹವಾಸ, ಬೆಲೆ ಹಾಗೂ ರೈತಾಪಿ ಕುಟುಂಬದ ಪ್ರಮಾಣಪತ್ರಗಳು ಅನವಶ್ಯಕ ಎಂದು ಹೇಳಿ ಅವುಗಳನ್ನು ರದ್ದುಮಾಡಬೇಕು ಎನ್ನುವ ಶಿಫಾರಸು ಮಾಡಲಾಗಿದೆ. ಇದನ್ನು ಇನ್ನೊಮ್ಮೆ ಪರಿಶೀಲಿಸಬೇಕು. ಇದನ್ನು ಕೇವಲ ಆಡಳಿತಾತ್ಮಕ ಅನುಕೂಲಕತೆ ದೃಷ್ಟಿಯಿಂದ ನೋಡದೆ, ನಾಳೆ ಜನರಿಗೆ ಈ ಪ್ರಮಾಣ ಪತ್ರಗಳನ್ನು ನ್ಯಾಯಾಲಯಗಳ ಮುಂದೆ ಹಾಜರು ಪಡಿಸಲಿಕ್ಕೆ ಬರಬೇಕಾಗುವುದೋ ಬೇಡವೋ ಅನ್ನುವುದನ್ನು ನೋಡಿ ನಿರ್ಧಾರ ಮಾಡಬೇಕು. ಹಾಗೆ ರದ್ದುಮಾಡುವುದೇ ಆದಲ್ಲಿ, ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡ ಬಳಿಕವಷ್ಟೇ ರದ್ದುಮಾಡಬೇಕು.

ರಸ್ತೆ ಸಾರಿಗೆ ಅಧಿಕಾರಿಗಳು ಜಫ್ತಿ ಮಾಡಿದ ವಾಹನಗಳನ್ನು ಮಾರಾಟ ಮಾಡಲು ನ್ಯಾಯಾಲಯದ ಅನುಮತಿಗೆ ಕಾಯುವುದು ಬೇಡ ಎನ್ನುವ ಶಿಫಾರಸು ಇದರಲ್ಲಿ ಇದೆ.

ಇದನ್ನು ಜಾರಿಮಾಡುವ ಮುನ್ನ, ರಸ್ತೆ ಸಾರಿಗೆ ಇಲಾಖೆಯ ವಿವಿಧ ವಿಷಯಗಳಿಗೆ ಅನ್ವಯವಾಗುವಂತೆ, ವಿದ್ಯುತ್ ಪ್ರಾಧಿಕಾರ, ವಿಮೆ ಪ್ರಾಧಿಕಾರ, ಆಹಾರ ಪದಾರ್ಥ ಗುಣಮಟ್ಟ ನಿಯಂತ್ರಣ ಪ್ರಾಧಿಕಾರದ
ಮಾದರಿಯಲ್ಲಿ ಸಾರಿಗೆ ಪ್ರಾಧಿಕಾರ ಸ್ಥಾಪಿಸಬೇಕು.

ಈ ಸಮಿತಿಯ ಅತಿ ಮುಖ್ಯ ಶಿಫಾರಸು ಎಂದರೆ ಪ್ರಾದೇಶಿಕ ಆಯುಕ್ತರ ಕಚೆರಿಗಳನ್ನು ರದ್ದು ಮಾಡುವುದು. ಇದನ್ನು ನಾವು ವಿರೋಧಿಸುತ್ತೇವೆ. ಇದು ಅತ್ಯಂತ ಅಪಾಯಕಾರಿ. ಇದು ಭಾರತದ ಸಂವಿಧಾನದ ಮೂಲ ತತ್ವವಾದ ವಿಕೇಂದ್ರೀಕರಣ ವಿರೋಧಿ ಬೆಳವಣಿಗೆ. ಇದು ರಾಜ್ಯದ ಜನರಿಗಾಗಲಿ, ಅಭಿವೃದ್ಧಿ-ಸುಶಾಸನಕ್ಕಾಗಲಿ ಅನುಕೂಲಕರವಾದದ್ದಲ್ಲ. ಕೆಲವು ಜನ ಹಿರಿಯ ಐಎಎಸ್ ಅಧಿಕಾರಿಗಳು ಬೆಂಗಳೂರು ಬಿಟ್ಟುಹೋಗಲು ಮನಸು ಮಾಡುವುದಿಲ್ಲ ಎನ್ನುವ ಕಾರಣಕ್ಕೆ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದು ಮಾಡುವುದು ಸಾಧುವಲ್ಲ.

ರಾಜ್ಯದ 350 ಐಎಎಸ್ ಅಧಿಕಾರಿಗಳಲ್ಲಿ 60 ಜನ ಮಾತ್ರ ಬೆಂಗಾವಲು ಊರು ಬಿಟ್ಟು ಹೊರಗೆ ಇದ್ದಾರೆ. ಅವರಲ್ಲಿ ಮೂರು ಜನ ಪ್ರಾದೇಶಿಕ ಆಯುಕ್ತರು ಮಾತ್ರ ವಿಭಾಗ ಮಟ್ಟದಲ್ಲಿ ಇದ್ದಾರೆ. ಆ ಮೂರು ಹುದ್ದೆಗಳ ಸಲುವಾಗಿ ನೀವು ಆರು ಕೋಟಿ ಕನ್ನಡಿಗರ ಎದುರು ಕಣ್ಕಟ್ಟು ಆಡಬಾರದು ಎಂದು ನಮ್ಮ ಅಂಬೋಣ.

ನಿಜವಾಗಿ ಬೇಕಾಗಿರುವುದು ಏನು ಎಂದರೆ,

ಅ) ರಾಜ್ಯದಲ್ಲಿ ಈಗ ಇರುವ ನಾಲ್ಕು ಕಂದಾಯ ವಿಭಾಗಗಳನ್ನು ಎಂಟು ವಿಭಾಗಗಳನ್ನಾಗಿ ಮಾಡಬೇಕು. ಪ್ರತಿ ವಿಭಾಗಕ್ಕೆ ಈಗ 7-8 ಜಿಲ್ಲೆಗಳು ಬರುತ್ತವೆ. ಪ್ರತಿ ವಿಭಾಗಕ್ಕೆ 3-4 ಜಿಲ್ಲೆಗಳು ಬರುವಂತೆ ಮಾಡಿ ಮರುಹಂಚಿಕೆ ಮಾಡಬೇಕು.

ಆ) ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಹಿಂದಿನಂತೆ ವಿಭಾಗೀಯ ಅಧಿಕಾರಿಗಳ ಕಚೇರಿಗಳಾಗಿ ಉನ್ನತೀಕರಣ ಮಾಡಬೇಕು. ಅವರಿಗೆ ಜಿಲ್ಲಾಧಿಕಾರಿಗಳ ಮೇಲೆ ಮೇಲು ಉಸ್ತುವಾರಿ ಹಾಗೂ ಜಿಲ್ಲೆ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರ ಹಾಗೂ ಜವಾಬುದಾರಿ ನೀಡಬೇಕು.

ಇ) ಪ್ರಾದೇಶಿಕ ಆಯುಕ್ತರಿಗೆ ಅಭಿವೃದ್ಧಿಯ ಜವಾಬುದಾರಿಯನ್ನು ಸಹಿತ ಕೊಡಬೇಕು. ಅವರಿಗೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ನಗರಪಾಲಿಕೆ-ನಗರಸಭೆಗಳು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳ ಮೇಲೆ ವಿಚಕ್ಷಣೆ ಹಾಗೂ ಮೇಲು ಉಸ್ತುವಾರಿ ನಡೆಸುವ ಅಧಿಕಾರ ನೀಡಬೇಕು.

ಈ) ವಿಭಾಗಾಧಿಕಾರಿ ಮಟ್ಟದಲ್ಲಿ ಕಂದಾಯ ನ್ಯಾಯಾಲಯ ಸ್ಥಾಪಿಸಬೇಕು. ಇದರಿಂದ ಜನ ತಮ್ಮ ಕಂದಾಯ ಪ್ರಕರಣಗಳ ಸಲುವಾಗಿ ಬೆಂಗಳೂರಿಗೆ ಹೋಗುವುದು ತಪ್ಪುತ್ತದೆ.

ಉ) ವಿಭಾಗಾಧಿಕಾರಿಗಳಿಗೆ ಸಾರ್ವಜನಿಕ ಕುಂದುಕೊರತೆಗಳನ್ನು ಸ್ವೀಕರಿಸುವ ಹಾಗೂ ಅವುಗಳನ್ನು ಪರಿಹರಿಸುವ ಅಧಿಕಾರ ಹಾಗೂ ಜವಾಬುದಾರಿ ಕೊಡಬೇಕು. ಜನಸಾಮಾನ್ಯರು ಜಿಲ್ಲಾ ಮಟ್ಟದ ಯಾವುದೇ ಅಧಿಕಾರಿಗಳ ವಿರುದ್ಧ ದೂರು ಕೊಟ್ಟರೆ ಅವುಗಳ ವಿಚಾರಣೆ ವಿಭಾಗ ಮಟ್ಟದಲ್ಲಿ ನಡೆಯಬೇಕು.

ಊ) ವಿಭಾಗಾಧಿಕಾರಿಗಳನ್ನು ಸಕಾಲ ಯೋಜನೆಯ ನಿಯಂತ್ರಣ ಪ್ರಾಧಿಕಾರಿಯನ್ನಾಗಿ ಮಾಡಬೇಕು. ಸಕಾಲ ಯೋಜನೆಯಲ್ಲಿನ ಕೆಲಸಗಳು ಸರಿಯಾದ ಸಮಯಕ್ಕೆ ಆಗದೆ ಹೋದರೆ, ಆ ಕಾಲಹರಣದ ಬಗ್ಗೆ ತನಿಖೆ ನಡೆಸುವ ಅಧಿಕಾರ ಕೊಡಬೇಕು.

ಎ) ಈ ಎಲ್ಲಾ ಜವಾಬುದಾರಿಗಳನ್ನು ಸರಿಯಾಗಿ ನಿರ್ವಹಿಸಲು ವಿಭಾಗಾಧಿಕಾರಿಗಳಿಗೆ ಸೂಕ್ತ ಸಿಬ್ಬಂದಿಗಳನ್ನು ನೀಡಬೇಕು. ಅವರ ಕಚೇರಿಗೆ ಪ್ರಮುಖ ಇಲಾಖೆಗಳ ಜಂಟಿ ನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ಜಿಲ್ಲೆ ಹಾಗೂ ಪ್ರದೇಶ ಮಟ್ಟದ ಯಾವುದೇ ಕೆಲಸಗಳು ಆಯಾ ಜಿಲ್ಲೆ ಹಾಗೂ ಪ್ರದೇಶ ಮಟ್ಟದಲ್ಲಿ ಆಗಬೇಕು. ಇಂತಹ ಎಲ್ಲಾ ಕೆಲಸಗಳಿಗೆ ಜನರು ಬೆಂಗಳೂರಿಗೆ ಅಲೆದಾಡುವ ಅನಿವಾರ್ಯತೆಯನ್ನು ತಪ್ಪಿಸಬೇಕು.

ನಮ್ಮ ಸಲಹೆಗಳನ್ನು ಪರಿಗಣಿಸಬೇಕು, ನೀವು ಮುಂದಿನ ಬಾರಿ ಬರುವಾಗ ಇದನ್ನು ಮರೆಯಬಾರದು ಎಂದು ನಮ್ಮ ಎಲ್ಲಾ ಬಡಪಾಯಿಗಳ ಕೋರಿಕೆ.


ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...