Homeಕರ್ನಾಟಕಉತ್ತರ ಕನ್ನಡ ಡಿಸಿಸಿ ಅಧ್ಯಕ್ಷ ಪಟ್ಟವೇರಲು ಮಾಜಿ ಶಾಸಕ ಸೈಲ್ ಸರ್ಕಸ್!

ಉತ್ತರ ಕನ್ನಡ ಡಿಸಿಸಿ ಅಧ್ಯಕ್ಷ ಪಟ್ಟವೇರಲು ಮಾಜಿ ಶಾಸಕ ಸೈಲ್ ಸರ್ಕಸ್!

- Advertisement -
- Advertisement -

ಉತ್ತರ ಕನ್ನಡ ಬಿಜೆಪಿಯ ಆಯಕಟ್ಟಿನ ಸ್ಥಾನದಲ್ಲೆಲ್ಲ ಮೇಲ್ವರ್ಗದ ಮಹಾಮಹಿಮರೇ ತುಂಬಿಕೊಂಡು ಅಧಿಕಾರ ಸುಖ ಅನುಭವಿಸುತ್ತಿದ್ದಾರೆ. ಶೂದ್ರರನ್ನ ಬಿಜೆಪಿ ಸೂತ್ರಧಾರರು ಕೇವಲ ಕಾಲಾಳುಗಳಂತೆ ದುಡಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಹಿಂದುಳಿದ ಸಮುದಾಯದ ಮಾಜಿ ಶಾಸಕ ಸತೀಶ್ ಸೈಲ್ ಅವರಿಗೆ ಡಿಸಿಸಿ (ಜಿಲ್ಲಾ ಕಾಂಗ್ರೆಸ್ ಕಮಿಟಿ) ಅಧ್ಯಕ್ಷ ಪಟ್ಟಕಟ್ಟಲು ಪ್ರಯತ್ನ ತುಂಬಾ ನಾಜೂಕಾಗಿ ನಡೆಯುತ್ತಿದೆ. ಕಾಂಗ್ರೆಸ್ ಒಳರಾಜಕಾರಣದ ಸದ್ದಿನ ಹಿಂದಿನ ಈ ಸುದ್ದಿ ಜಿಲ್ಲೆಯಲ್ಲಿ ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ. ತಮಾಷೆಯೆಂದರೆ ಬಿಜೆಪಿ ಸೇರಲು ಕಳೆದೆರಡು ವರ್ಷದಿಂದ ರಹಸ್ಯ ಕಾರ್ಯಾಚರಣೆ ನಡೆಸುತ್ತಲೇ ಬಂದ ಸೈಲ್‌ಗೆ ಸಲೀಸಾಗಿ ಜಿಲ್ಲಾ ಕಾಂಗ್ರೆಸ್‌ನ ಅತ್ಯುಚ್ ಪೀಠ ಪ್ರಾಪ್ತಿಯಾಗುತ್ತಿದೆ.

ಸರಿಸುಮಾರು ಹನ್ನೆರಡು ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಕುರ್ಚಿಯಲ್ಲಿ ಭದ್ರವಾಗಿ ಕೂತಿದ್ದ ಉದ್ಯಮಿ ಭೀಮಣ್ಣನಾಯ್ಕ್ ಅವರಿಂದ ಪಾರ್ಟಿಗೇನೂ ಪ್ರಯೋಜನವಾಗಿಲ್ಲ ಎಂಬ ಕೂಗು ಬಹಳ ದಿನದಿಂದ ಕೇಳಿಬರುತ್ತಲೇ ಇತ್ತು. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಭಾಮೈದರಾದ ಭೀಮಣ್ಣ ತಮ್ಮ ವ್ಯವಹಾರ ಲಾಭದಿಂದ ಪಕ್ಷಕ್ಕಾಗಿ ಹಣ ಹರಿಸುತ್ತಿದ್ದರೇ ಹೊರತು ಸಂಘಟನೆ ಮಾಡುವ ಚಾಕಚಕ್ಯತೆ ಹೊಂದಿರಲಿಲ್ಲ ಎಂಬುದು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಅಂಬೋಣ. ಜಿಲ್ಲೆಯ ಬಹುಸಂಖ್ಯಾತ ದೀವರ ಸಮುದಾಯದ ಭೀಮಣ್ಣ ರಾಜಕೀಯ ಅಸ್ತಿತ್ವವಿರುವುದೇ ಭಾವ ಬಂಗಾರಪ್ಪನವರ ನಾಮಬಲದಲ್ಲಿ.

ಹಲವು ಬಾರಿ ಜಿಲ್ಲೆಯಿಂದ ಎಂಪಿಗಿರಿಗೆ ಸ್ಪರ್ಧಿಸಿ ಒಮ್ಮೆ ಮಾತ್ರ ಗೆದ್ದಿದ್ದ ವಲಸೆಗಾರ್ತಿ ಮಾರ್ಗರೆಟ್ ಆಳ್ವ ವಿರೋಧಿ, ಜಿಲ್ಲೆಯ ಪುರಾತನ ರಾಜಕಾರಣಿ ಆರ್.ವಿ ದೇಶಪಾಂಡೆ ಬಣದಲ್ಲಿ ಗುರುತಿಸಿಕೊಂಡಿದ್ದ ಭೀಮಣ್ಣ ದೊಡ್ಡವರ ಕೃಪಾಶಿರ್ವಾದದಿಂದಲೇ ನಿರಂತರ ಒಂದೂ ಕಾಲು ದಶಕ ಡಿಸಿಸಿ ಅಧ್ಯಕ್ಷತೆ ಹಿಡಿದಿಟ್ಟುಕೊಂಡಿದ್ದರು. ಬಂಗಾರಪ್ಪ ಮತ್ತು ಮಾರ್ಗರೆಟ್ ಆಳ್ವ ನಡುವಿನ ವೈಮನಸ್ಸು ನಾಜೂಕಾಗಿ ಬಳಸಿಕೊಂಡ ದೇಶಪಾಂಡೆಯವರು, ಜಿಲ್ಲೆಯಲ್ಲಿ ಭೀಮಣ್ಣನವರನ್ನು ಮುಂದಿಟ್ಟುಕೊಂಡೇ ಎದುರಾಳಿಗಳ ಹೆಡೆಮುರಿ ಕಟ್ಟುತ್ತ ಸಾಗಿದ್ದರು. ಜನಸಾಮಾನ್ಯರೊಂದಿಗೆ ಅಷ್ಟೇ ಏಕೆ ಸ್ವಜಾತಿ ದೀವರ ನಡುವೆಯೂ ಸರಳವಾಗಿ ಬೆರೆಯಲಾಗದ ಭೀಮಣ್ಣ ಹಲವು ಬಾರಿ ಎಂಪಿ, ಎಮ್ಮೆಲ್ಲೆಗಿರಿಗೆ ಸ್ಪರ್ಧಿಸಿದರೂ ಗೆಲ್ಲಲಾಗಲಿಲ್ಲ. ಈ ದೌರ್ಬಲ್ಯದಿಂದಾಗಿ ಭೀಮಣ್ಣ ನಾಯಕನಾಗಲೇ ಇಲ್ಲವೆಂಬುದು ಅವರ ಹತ್ತಿರದವರ ಬೇಸರ.

ಮಾಜಿ ಸಂಸದೆ ಮಾರ್ಗರೆಟ್ ಆಳ್ವ ಭೀಮಣ್ಣನವರನ್ನು ಡಿಸಿಸಿ ಅಧ್ಯಕ್ಷತೆಯಿಂದ ಇಳಿಸಲೇಬೇಕೆಂದು ಒಂದಲ್ಲ ಒಂದು ತಂತ್ರ ಮಾಡುತ್ತಲೇ ಇದ್ದರು. ಆದರೆ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದ್ದ ಅವರ ಹಿಡಿತದಿಂದ ಡಿಸಿಸಿ ಕುರ್ಚಿ ಕಸಿಯಲು ಆಳ್ವರಿಗೆ ಆಗಲಿಲ್ಲ. ಆಳ್ವರವರು ಹಲವು ಸಲ ಭೀಮಣ್ಣನವರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಅವರು ಅಸಮರ್ಥನೆಂದು ಬಿಂಬಿಸಿದ್ದರು. ಆಗೆಲ್ಲ ದೇಶಪಾಂಡೆ ಕತ್ತಿ ಝಳಪಿಸಿ ಶಿಷ್ಯನನ್ನು ಸಂರಕ್ಷಿಸಿದ್ದರು. ಆದರೆ ಈಗ ಅದ್ಯಾಕೋ ಭೀಮಣ್ಣನವರ ಪರ ವಹಿಸಲು ದೇಶಪಾಂಡೆಯವರಿಗೆ ಸಾಧ್ಯವಾಗುತ್ತಿಲ್ಲ. ಭೀಮಣ್ಣನವರ 12 ವರ್ಷದ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮಾತಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎದುರು ತನ್ನ ಹಿಂಬಾಲಕನ ತಾರೀಫು ಮಾಡಲಾಗುತ್ತಿಲ್ಲ ದೇಶಪಾಂಡೆ ಸಾಹೇಬರಿಗೆ!

ಡಿಸಿಸಿ ಅಧ್ಯಕ್ಷರ ಬದಲಾವಣೆ ಪಕ್ಕ ಎಂಬ ಸಂದೇಶ ಬರುತ್ತಿದ್ದಂತೆಯೇ ಮಾರ್ಗರೆಟ್ ಆಳ್ವ ಮತ್ತು ದೇಶಪಾಂಡೆ ತಮ್ಮ ಅನುಯಾಯಿಗಳಿಗೆ ಪೀಠ ಕೊಡಿಸಲು ಕರಾಮತ್ತು ಶುರು ಹಚ್ಚಿಕೊಂಡುಬಿಟ್ಟಿದ್ದರು. ಮಾಜಿ ಡಿವೈಸಿಸಿ ಅಧ್ಯಕ್ಷ ರವೀಂದ್ರನಾಥ ನಾಯ್ಕ್, ಮಾಜಿ ಶಾಸಕ ಹಾಲಕ್ಕಿ ಬುಡಕಟ್ಟಿನ ಕೆ.ಎಚ್.ಗೌಡ, ಆಳ್ವ ಅವರ ಮಗ ನಿವೇದಿತ್ ಆಳ್ವ ಹೀಗೆ ಹಲವು ಹೆಸರುಗಳು ತೇಲಾಡಿದವು. ಆದರೆ ಇದ್ದಕ್ಕಿದಂತೆ ಬಿಜೆಪಿಯತ್ತ ತೇಲುಗಣ್ಣು ಬಿಡುತ್ತಿದ್ದ ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಹೆಸರು ಮುನ್ನಲೆಗೆ ಬಂದುಬಿಟ್ಟಿತು. ಅದಿರೋದ್ಯಮಿಯಾಗಿರುವ ಸೈಲ್ ಬಿಜೆಪಿಯಲ್ಲಿ ಪ್ರಭಾವಿಗಳಾಗಿರುವ ತನ್ನ ಉದ್ಯಮ ಮಿತ್ರರ ಸಹಕಾರದಿಂದ ಬಿಜೆಪಿ ಸೇರಲು ಸರ್ಕಸ್ ಮಾಡುತ್ತಿದ್ದರು. ಆದರೆ ಸಿಎಂ ಯಡಿಯೂರಪ್ಪರಿಗೆ ಆಪ್ತರಾಗಿರುವ ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅಡಿಗಡಿಗೆ ಸೈಲ್‌ಗೆ ಅಡ್ಡಿಪಡಿಸಿ ಯಶಸ್ವಿಯೂ ಆಗಿದ್ದರು.

ಕಾರವಾರದ ಲೋಕಲ್ ರಾಜಕೀಯ ಮತ್ತು ಹಣ ಖರ್ಚು ಮಾಡುವ ಸೈಲ್ ಅವರ ತಾಕತ್ತು ಡಿಸಿಸಿ ಹೊಸ ಅಧ್ಯಕ್ಷರ ನೇಮಕಾತಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಮೊಟ್ಟಮೊದಲ ಆಪರೇಷನ್ ಕಮಲದ ಸ್ಯಾಂಪಲ್ ಎಂದೇ ಹೆಸರಾಗಿರುವ ಮಾಜಿ ಸಚಿವ ಆನಂದ ಅಸ್ನೋಟಿಕರ್ ಬಿಜೆಪಿಯಲ್ಲಿ ಮೂಲೆಗುಂಪಾಗಿ ಸೇರಿದರೂ ಭರ್ಕತ್ ಆಗದೇ ಅತಂತ್ರವಾಗಿ ತೊಳಲಾಡುತ್ತಿದ್ದಾರೆ. ಈಗ ಆನಂದ ಕಾಂಗ್ರೆಸ್ ಸೇರಲು ಶತಾಯಗತಾಯ ಹಾರಾಡುತ್ತಿದ್ದರೂ ಸಾಧ್ಯವಾಗುತ್ತಿಲ್ಲ. ಆಳ್ವ ಮತ್ತು ದೇಶಪಾಂಡೆ ಇಬ್ಬರನ್ನೂ ಎದುರು ಹಾಕಿಕೊಂಡಿರುವ ಅಸ್ನೋಟಿಕರ್ ಅವರಿಗೆ ಕಾಂಗ್ರೆಸ್ ಕದ ತೆರೆಯುತ್ತಲೇ ಇಲ್ಲ. ಈಗ ಮತ್ತೊಂದು ಸುತ್ತಿನ ಪ್ರಯತ್ನ ಶುರುಮಾಡಿರುವ ಅಸ್ನೋಟಿಕರ್ ಇತ್ತೀಚೆಗಷ್ಟೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಮಧು ಬಂಗಾರಪ್ಪರ ಬೆನ್ನಿಗೆ ಬಿದ್ದು ಕಾಂಗ್ರೆಸ್ ಸೇರಿಸುವಂತೆ ಗೋಳಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಆನಂದ್ ಅಸ್ನೋಟಿಕರ್ ಅವರ ಅಂಥದೊಂದು ಪ್ರಯತ್ನ ಕ್ಲಿಕ್ ಆಗಿಬಿಟ್ಟರೆ ತಾನು ಕಾಂಗ್ರೆಸ್‌ನಲ್ಲಿ ನೆಲೆ-ಬೆಲೆ ಕಳೆದುಕೊಳ್ಳಬೇಕಾಗುತ್ತದೆಂದು ಲೆಕ್ಕಾಹಾಕಿದ ಸತೀಶ್ ಸೈಲ್ ಡಿಸಿಸಿ ಅಧ್ಯಕ್ಷತೆ ಬೇಡಿಕೆ ಇಟ್ಟುಬಿಟ್ಟರು. ಬಿಜೆಪಿ ಸೇರುವುದು ಸಾಧ್ಯವಾಗದೆಂಬುದು ಖಾತ್ರಿಯಾಗುತ್ತಿದ್ದಂತೆ ಕಾಂಗ್ರೆಸಲ್ಲೇ ಬೇರು ವಿಸ್ತರಿಸುವ ತಂತ್ರವನ್ನು ಸೈಲ್ ಹಾಕಿಕೊಂಡಿದ್ದರು. ಇದಕ್ಕವರಿಗೆ ಸುಪ್ರೀಮ್ ಕೋರ್ಟ್ ನ್ಯಾಯವಾದಿಯಾಗಿರುವ ಮತ್ತು ರಾಹುಲ್ ಗಾಂಧಿ ಜತೆ ಒಡನಾಟವೂ ಹೊಂದಿರುವ ಕಾರವಾರ ಮೂಲದ ದೇವದತ್ ಕಾಮತ್ ಅವರ ಸಹಕಾರವು ಸಿಕ್ಕಿದೆ. ಹಲವು ವರ್ಷದಿಂದ ಉತ್ತರ ಕನ್ನಡದ ಕಾಂಗ್ರೆಸ್ ಸಂಸದನಾಗುವ ಕನಸು ಕಾಣುತ್ತಿರುವ ಈ ವಕೀಲ ದಿಲ್ಲಿಯಲ್ಲಿ ಸೈಲ್ ಪರ ಲಾಬಿ ನಡೆಸಿದ್ದರು ಎನ್ನಲಾಗಿದೆ. ನೇರ ಹೈಕಮಾಂಡ್‌ನಿಂದಲೇ ಸೈಲ್ ಹೆಸರು ಶಿಫಾರಸ್ಸಾಗಿರುವುದರಿಂದ ಡಿಕೆಶಿ ಜಿಲ್ಲಾ ಕಾಂಗ್ರೆಸ್‌ನ ಎರಡೂ ಬಣಗಳಿಗೆ ಆತ ಸಖ್ಯವಾಗುವಂತೆ ನೋಡಿಕೊಳ್ಳುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ದುರ್ಬಲವಾಗಿರುವ ಜಿಲ್ಲಾ ಕಾಂಗ್ರೆಸ್ ಕಟ್ಟಲು ಬೇಕಾದ ಹಣಕಾಸು ಬಲ ಸೈಲ್ ಅವರಿಗೆ ಇರುವುದರಿಂದ ಎಲ್ಲರೂ ದುಸರಾ ಮಾತಾಡದೆ ಒಪ್ಪಿಕೊಂಡಿದ್ದಾರೆ!

ಸೈಲ್‌ರಿಂದ ಉತ್ತರಕನ್ನಡದಲ್ಲಿ ಕಾಂಗ್ರೆಸ್‌ಗೆ ಮರುಹುಟ್ಟು ಕೊಡಲು ಸಾಧ್ಯವೋ? ಇಲ್ಲವೋ? ಎಂಬುದು ದೇಶಪಾಂಡೆ, ಆಳ್ವಾ ಮತ್ತು ಸ್ವತಃ ಸೈಲ್ ಅವರಿಗೂ ಗೊತ್ತಿಲ್ಲ. ಆದರೆ ಸೈಲ್ ಅಧ್ಯಕ್ಷತೆ ವಹಿಸಿಕೊಂಡರೆ ಇವರೆಲ್ಲರ ವೈಯಕ್ತಿಕ ಅಜೆಂಡಾ ಈಡೇರಿಕೆಗೆ ಒಂದಿಷ್ಟು ಸಹಾಯವಾಗುತ್ತದೆ. ಮಗನನ್ನು ಶಿರಸಿಯಿಂದ ಶಾಸಕನಾಗಿಸುವ ಆಸೆ ಆಳ್ವಾ ಅವರದ್ದಾದರೆ, ಮುಂಬರುವ ಪಾರ್ಲಿಮೆಂಟ್ ಇಲೆಕ್ಷನ್‌ನಲ್ಲಿ ತಮ್ಮ ಮಗನನ್ನು ಸಂಸದನಾಗಿ ಮಾಡಬೇಕೆಂಬ ಯೋಜನೆಯಲ್ಲಿ ದೇಶಪಾಂಡೆಯಿದ್ದಾರೆ. ತಾನು ಡಿಸಿಸಿ ಅಧ್ಯಕ್ಷನಾದರೆ ಕಾರವಾರದಲ್ಲಿ ತನಗೆ ಎದುರಾಳಿಯಾಗಿರುವ ಅಸ್ನೋಟಿಕರ್ ಕಾಂಗ್ರೆಸ್ ಒಳಬರದಂತೆ ಶಾಶ್ವತವಾಗಿ ಕದ ಹಾಕಬಹುದೆಂಬ ಲೆಕ್ಕಾಚಾರ ಸೈಲ್‌ರದು. ಈ ಮೇಲಾಟದ ಮಧ್ಯದಲ್ಲಿ ನಿಂತ ನೀರಾಗಿರುವ ಜಿಲ್ಲಾ ಕಾಂಗ್ರೆಸ್ ರಾಜಕಾರಣ ಭೀಮಣ್ಣನಾಯ್ಕ್ ನಿರ್ಗಮನದಿಂದ ಹರಿಯಲು ಶುರುವಾಗಬಹುದೆಂಬ ಭಾವನೆ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರದಾಗಿದೆ.


ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...