Homeಮುಖಪುಟಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

- Advertisement -
- Advertisement -

ಸಂಪುಟ ಪುನರ್‌‌ರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್‌ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯೆ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು. ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು. ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು.

ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು. ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು ” ಎಂದು ಅವರು ಆಗ್ರಹಿಸಿದ್ದಾರೆ.

“ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

“ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್‌ಬ್ಯಾನ್, ಜಿಎಸ್‌ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ” ಎಂದು ಅವರು ತಿಳಿಸಿದ್ದಾರೆ.

“ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿರುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

“ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...