Homeಕರ್ನಾಟಕಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

- Advertisement -
- Advertisement -

ರಾಜ್ಯದ ಹಳೇ ಮೈಸೂರು ಭಾಗದ ವಿವಿದೆಡೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

’ಕೆಆರ್‌ಎಸ್‌ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‌ಎಸ್‌ ನೀರುಣಿಸುತ್ತಿದೆ. ಕೆಆರ್‌ಎಸ್‌ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು’ ಎಂದು ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಕ್ರೋಶ ಹೊರ ಹಾಕಿದ್ದಾರೆ.

‘ಕೆಆರ್‌ಎಸ್‌ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್‌ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತವಾಗಿವೆ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

’ಅಕ್ರಮ ಕಲ್ಲು ಗಣಿಗಾರಿಕೆ ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ’ ಎಂದು ಜಗದೀಶ್ ವಿ.ಸದಂ ಆರೋಪಿಸಿದ್ದಾರೆ.

’ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ’ ಎಂದು ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ಹೇಳಿದ್ದಾರೆ.

’ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್‌ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...