Homeಮುಖಪುಟತಾಯ್ತನ ಮತ್ತು ಅನಾಥತೆಯ ಭಾವಗಳನ್ನು ಅನನ್ಯವಾಗಿ ಕಟ್ಟಿಕೊಡುವ 'ಟ್ರೂ ಮದರ್ಸ್'

ತಾಯ್ತನ ಮತ್ತು ಅನಾಥತೆಯ ಭಾವಗಳನ್ನು ಅನನ್ಯವಾಗಿ ಕಟ್ಟಿಕೊಡುವ ‘ಟ್ರೂ ಮದರ್ಸ್’

- Advertisement -
- Advertisement -

ನವೋಮಿ ಕವಾಸೆ (Naomi Kawase) ಅವರ ಹೆಸರು ಜಾಗತಿಕ ಸಿನಿಮಾವಲಯದಲ್ಲಿ ಬಹಳ ಚಿರಪರಿಚಿತ. ಬಹುಶಃ ಕಳೆದ ಮೂರು ದಶಕಗಳಿಂದ ಜಪಾನಿನ ಹಿರೊಕಝು ಕೊರೀಡನ (hirokazu koreeda) ಸಿನಿಮಾಗಳನ್ನು ಬಿಟ್ಟರೆ ಕಾನ್, ಬರ್ಲಿನ್, ಟೊರೊಂಟೊ ಮುಂತಾದ ಪ್ರಸಿದ್ಧ ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರವೇಶ ಪಡೆಯುವುದಷ್ಟೇ ಅಲ್ಲ ಪ್ರಶಸ್ತಿಗಳನ್ನು ಪಡೆದ ಮತ್ತೊಬ್ಬ ಸಿನಿಮಾತೃ ಎಂದರೆ ಅದು ನವೋಮಿ ಕವಾಸೆ.

90ರ ದಶಕದ ಪ್ರಾರಂಭದಿಂದಲೂ, ತನ್ನ ಇಪ್ಪತ್ತನೇ ವಯಸ್ಸಿನಿಂದಲೇ ಸಿನಿಮಾ ನಿರ್ದೇಶನದಲ್ಲಿ ತೊಡಗಿಸಿಕೊಂಡಿರುವ ನವೋಮಿ, ಜಾಗತಿಕ ಸಿನಿಮಾ ವಲಯಕ್ಕೆ ಪರಿಚಿತವಾಗಿದ್ದು ಮಾತ್ರ 1997ರ ತಮ್ಮ ’ಸುಝಕು’ (Suzaku) ಸಿನಿಮಾದ ಮುಖಾಂತರ. ಈ ಸಿನಿಮಾ 1997ರ ಕಾನ್ ಸಿನಿಮೋತ್ಸವದಲ್ಲಿ ಪ್ರತಿಷ್ಠಿತ Camera d’or ಪ್ರಶಸ್ತಿ ಪಡೆಯಿತು. ಅತ್ಯಂತ ಕಿರಿಯ ವಯಸ್ಸಿನಲ್ಲೆ ಈ ಪ್ರಶಸ್ತಿ ಪಡೆದ ಹೆಗ್ಗಳಿಕೆ ನವೋಮಿಯವರದ್ದು. 2007ರ ’ದ ಮೌರ್‍ನಿಂಗ್ ಫಾರೆಸ್ಟ್’ (The Mourning Forest), 2011ರ ’ಹನೆಝು’ (Hanezu), 2014ರ ’ಸ್ಟಿಲ್ ದ ವಾಟರ್’ (Still The water) ಮತ್ತು 2015ರ ’ಸ್ವೀಟ್ ಬೀನ್’ (Sweet Bean) ಇವೆ ಮುಂತಾದ ಸಿನಿಮಾಗಳು ನವೋಮಿಯವರಿಗೆ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿಕೊಟ್ಟವು.

’ಟ್ರೂ ಮದರ್ಸ್’- (True Mothers)

ಸಟೊಕೊ ಮತ್ತು ಕಿಯೊಕಝುರ 11 ವರ್ಷದ ಮಗ ಆಸಟೊನ ಮೇಲೆ, ಅವನು ಕಲಿಯುವ ಶಾಲೆಯಲ್ಲಿ, ಆಟವಾಡುವಾಗ ತನ್ನ ಸಹಪಾಠಿಯನ್ನು ಕೆಳಗೆ ಬೀಳಿಸಿದ ಎಂಬ ಅರೋಪ ಬರುತ್ತದೆ. ಈ ಅರೋಪವನ್ನ ತಾಯಿ ಸಟೊಕೊಳ ಮನಸ್ಸು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಈ ಆರೋಪ ಅವಳನ್ನು 11 ವರ್ಷದ ಹಿಂದಿನ ನೆನಪಿಗೆ ಕೊಂಡೊಯ್ಯುತ್ತದೆ. ಸಟೊಕೊ ಮತ್ತು ಕಿಯೊಕಝು ಬಹಳ ಅನ್ಸೋನ್ಯವಾದ ಜೋಡಿಗಳು. ಸಟೊಕೊಳಿಗೆ ತಾಯಿಯಾಗುವ ಬಯಕೆ, ಕಿಯೊಕಝು ಕೂಡ ಇದಕ್ಕೆ ಒಪ್ಪುತ್ತಾನೆ. ಆದರೆ
ಕಿಯೊಕಝುವಿನಲ್ಲಿರುವ ಸಮಸ್ಯೆಯಿಂದ ಮಗು ಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಸಂಗತಿ ವೈದ್ಯರಿಂದ ತಿಳಿಯುತ್ತದೆ. ಇದು ಇಬ್ಬರನ್ನೂ ಬಾಧಿಸುತ್ತದೆ. ಆನಂತರ ಅವರು ಮಗುವನ್ನು ದತ್ತು ಪಡೆಯಲು ನಿಶ್ಚಯಿಸುತ್ತಾರೆ. ಇದಿಷ್ಟು ಸಿನಿಮಾ ಪ್ರಾರಂಭದ ಮೂವತ್ತು ನಿಮಿಷಗಳ ಕಥೆ/ದೃಶ್ಯಗಳು. ಇದಿಷ್ಟನ್ನು ನೋಡುವಾಗ ನನಗೆ ಈ ಸಿನಿಮಾ ಯಾವ ಆಲೋಚನೆಯನ್ನ ಪ್ರಸ್ತುತಪಡಿಸುತ್ತದೆ ಎಂಬ ಗೊಂದಲ ಶುರುವಾಯಿತು. ಅದರಲ್ಲೂ ಸಟೊಕೊ ಪಾತ್ರ ತಾನು ತಾಯಿಯಾಗಬೇಕು ಎಂದು ಹಂಬಲಿಸುವುದು, ಅದಕ್ಕಾಗಿ ಪರಿತಪಿಸುವುದು, ಈ ಎಲ್ಲಾ ಸಂಗತಿಗಳು ಸುಲಭಕ್ಕೆ ಒಪ್ಪಿಗೆ ಆಗುತ್ತಿರಲಿಲ್ಲ.

ಅನ್ಯ ಕ್ಷೇತ್ರಗಳಂತೆ ಸಿನಿಮಾ ಕೂಡ ಪುರುಷರ ಪ್ರಾಬಲ್ಯವಿರುವ ಕ್ಷೇತ್ರ. ಇದಕ್ಕೆ ಜಪಾನ್ ಕೂಡ ಹೊರತಲ್ಲ. ಇಂತಹ ಪರಿಸರದಲ್ಲಿ ತನ್ನ ಸ್ವಂತ ಸಾಮರ್ಥ್ಯದಿಂದ ಜಾಗತಿಕ ಮನ್ನಣೆ ಪಡೆದ ನವೋಮಿ, ಈ ಸಿನಿಮಾದಲ್ಲಿ ಅದೇ ಪುರುಷ ಪ್ರಧಾನ ಸಮಾಜದ ಆಲೋಚನೆಯ ಪ್ರಭಾವದಿಂದ ಹುಟ್ಟಿದ, ಹೆಣ್ಣು ತಾಯ್ತನಕ್ಕೆ ಹಂಬಲಿಸುವ ಅದು ಸಾಧ್ಯವಿಲ್ಲದಾಗ ಅಪರಾಧಿ ಭಾವನೆಯಿಂದ ನರಳುವ, ಈ ತರಹದ ಆಲೋಚನೆಯನ್ನ ಈ ಸಿನಿಮಾ ಮುಖಾಂತರ ಪ್ರಸ್ತುತ ಪಡಿಸುತ್ತಿದ್ದಾರಾ ಎಂದು ಪ್ರಾರಂಭದಲ್ಲಿ ಗೊಂದಲವಾಯಿತು. ಆದರೆ ಅರ್ಧ ಗಂಟೆಯ ನಂತರ ತೆರೆದುಕೊಳ್ಳುವ ಚಿತ್ರಕಥೆಯಲ್ಲಿ, ಸಟೊಕೊಳ ಕಥೆಯ ಸಮಾನಾಂತರವಾಗೆ ಬರುವ ಹಿಕಾರಿಳ ಪಾತ್ರದ ಚಿತ್ರಣ ಈ ಎಲ್ಲಾ ಗೊಂದಲಗಳಿಂದ ಆಚೆ ಬರುವಂತೆ ಮಾಡಿತು. ನವೋಮಿ ಏನು ಹೇಳುತ್ತಿದ್ದಾರೋ ಅಷ್ಟು ಮಾತ್ರ ಕೇಳುವ ಮತ್ತು ಅನುಭವಿಸುವ ಹಂತಕ್ಕೆ ಅದು ನನ್ನನ್ನು ಕೊಂಡೊಯ್ದಿತು.

ಸಟೊಕೊ ದಂಪತಿಗಳಿಗೆ ದತ್ತುವಾಗಿ ಸಿಗುವ ಮಗು ಹಿಕಾರಿಯಳದು. ಹಿಕಾರಿ ತನ್ನ 14ನೇ ವಯಸ್ಸಿಗೆ ತನ್ನ ಸಹಪಾಠಿಯೊಂದಿಗಿನ ಪ್ರೀತಿಯ ಕಾರಣವಾಗಿ ಆ ಮಗುವನ್ನು ಪಡೆಯುತ್ತಾಳೆ. ಹಿಕಾರಿಗೆ ತನ್ನ ಮಗುವಿಂದ ದೂರವಾಗಲೂ ಇಷ್ಟ ಇಲ್ಲ. ಆದರೆ ತನ್ನ ತಂದೆ ತಾಯಿಯರ ಒತ್ತಾಯಕ್ಕೆ ಮಣಿದು ಅವಳು ತನ್ನಮಗುವನ್ನು ದೂರಮಾಡಿಕೊಳ್ಳಬೇಕಾಗುತ್ತದೆ. ಸಟೊಕೊ ತಾಯ್ತತನದ ಹಂಬಲ ಮತ್ತು ತಾಯ್ತನದ ಅನುಭವ ಮತ್ತು ಹಿಕಾರಿಯ ಪ್ರೇಮ ಮತ್ತು ಮಗು ಕಳೆದುಕೊಂಡ ಅನಾಥತೆಯನ್ನ ನವೋಮಿ ಕವಾಸೆ ತನ್ನ ಅದ್ಭುತ ದೃಶ್ಯಕಟ್ಟುಗಳಲ್ಲಿ ಕಟ್ಟಿಕೊಡುತ್ತಾಳೆ. ಈ ಅದ್ಬುತ ದೃಶ್ಯಗಳು ಮೊದಲರ್ಧ ಗಂಟೆ ನನ್ನಲ್ಲಿ ಉಂಟಾದ ವೈಚಾರಿಕ ಗೊಂದಲಗಳಿಗೆ ಉತ್ತರ ಸಿಕ್ಕಿತು ಅಂತ ಖಂಡಿತ ಹೇಳಲಾರೆ. ಆದರೆ ನವೋಮಿ ಕವಾಸೆಯ ಕಲಾತ್ಮಕ ದೃಷ್ಟಿ ಸಮ್ಮೋಹನಗೊಳಿಸಿಬಿಟ್ಟಿತು.

ಯಾವುದೇ ಒಂದು ಐಡಿಯಾ (ಆಲೋಚನೆ), ಸಿನಿಮಾದಲ್ಲಿ ಹೆಚ್ಚು ಭಾವುಕವಾಗಿ ಅಥವಾ ಮೆಲೋಡ್ರಮ್ಯಾಟಿಕ್ ಆಗಿ ಬಂದುಬಿಟ್ಟರೆ ಅದು ಆ ಕ್ಷಣಕ್ಕೆ ಪ್ರೇಕ್ಷಕನನ್ನ ಆರ್ದ್ರಗೊಳಿಸಿ ಅಲುಗಿಸಿಬಿಡುತ್ತದೆ ನಿಜ. ಆದರೆ ಆ ಸಿನಿಮಾ ತನ್ನ ಪ್ರೇಕ್ಷಕನನ್ನು ಅದರಾಚೆ ಆಲೋಚಿಸಲು ಪ್ರೇರೇಪಿಸಬೇಕೆಲ್ಲ! ಕವಾಸೆಯ ’ಟ್ರೂ ಮದರ್ಸ್’ ಸಿನಿಮಾ ಹೆಚ್ಚು ಮೆಲೋಡ್ರಮ್ಯಾಟಿಕ್ ಆಗಿ ಭಾವುಕವಾಗಿ ಪ್ರಸ್ತುತವಾಗಿದ್ದರೂ ಕೂಡ ಈ ಮೇಲಿನ ಅಭಿಪ್ರಾಯವನ್ನ ಇದಕ್ಕೂ ಅನ್ವಯಿಸಲಾಗುವುದಿಲ್ಲ. ಕವಾಸೆಯ 2015ರ ’ಸ್ವೀಟ್ ಬೀನ್’ (Sweet Bean) ಸಿನಿಮಾದಲ್ಲೂ ಇದು ಅನಿಸಿತ್ತು.

’ಟ್ರೂ ಮದರ್ಸ್’ ಯಾಕೆ ಪ್ರೇಕ್ಷಕನನ್ನ ಸಮ್ಮೋಹನಗೊಳಿಸುತ್ತದೆ? ಪ್ರತಿ ಪಾತ್ರಗಳ ಪ್ರತಿ ಭಾವಗಳನ್ನ ತುಂಬಾ ಕ್ಲೋಸಪ್ ಷಾಟ್‌ಗಳಲ್ಲಿ ಚಿತ್ರಿಸಲಾಗಿದೆ. ಅದರಲ್ಲೂ ಸಿನಿಮಾದ ಎರಡು ಪ್ರಧಾನ ಪಾತ್ರಗಳಾದ ಸಟೊಕೊ ಮತ್ತು
ಹಿಕಾರಿಯರು ಇರುವ ದೃಶ್ಯಗಳನ್ನು. ಈ ಎರಡು ಪಾತ್ರಗಳಲ್ಲಿ ಕ್ರಮವಾಗಿ ಹಿರೋಮಿ ನಾಗಸಕು (Hiromi Nagasaku) ಮತ್ತು ಅಜು ಮಕಿಟ (Aju Makita) ಬಹಳ ಅದ್ಭುತವಾಗಿ ನಟಿಸಿದ್ದಾರೆ. ಕಥೆ, ಪಾತ್ರಗಳಲ್ಲಿ ಉಂಟಾಗುವ ಭಾವನೆ, ಅದರ ಅಭಿವ್ಯಕ್ತಿ, ಅದನ್ನು ಸೆರೆ ಹಿಡಿಯುವ ಕ್ಯಾಮರಾದ ಸ್ಥಿತಿ ಮತ್ತು ಚಲನೆ, ಅದರ ನಡುವೆ ಬರುವ ಆ ಪುಟ್ಟ ನಗರದ ಪರಿಸರದ ದೃಶ್ಯಗಳು, ಈ ಎಲ್ಲಾ ಸಂಗತಿಗಳು ಸಾವಯವಾಗಿ ಒಂದಕ್ಕೊಂದು ಲಯ ಕಂಡುಕೊಂಡಿವೆ.

ಈ ಸಿನಿಮಾಕ್ಕೆ ಮೂಲ ಪ್ರೇರಣೆ ಮಿಝುಕಿ ಸುಜಿಮುರ ಅವರ ಕಾದಂಬರಿ ‘Morning Comes’. ನವೋಮಿ ಕವಾಸೆ ಸಮಕಾಲೀನ ಜಪಾನ್ ಸಮಾಜ ಮತ್ತು ಕುಟುಂಬದ ಸಂಘರ್ಷಗಳನ್ನ ವೈಯಕ್ತಿಕ ನೆಲೆಯಲ್ಲಿ ತನ್ನ ಸಿನಿಮಾಗಳ ಮುಖಾಂತರ ಪ್ರಸ್ತುತಪಡಿಸುತ್ತಾರೆ ಎಂಬ ಮಾತಿದೆ. ಕವಾಸೆಯ ಬಹುತೇಕ ಸಿನಿಮಾಗಳು ಅವರ ’ಅರೆ ಆತ್ಮಚರಿತ್ರೆಗಳು’ ಕೂಡ. ಕವಾಸೆ ಬಾಲ್ಯದಲ್ಲಿಯೇ ಅವರ ತಂದೆ-ತಾಯಿ ವಿಚ್ಚೇದನ ಪಡೆದ ಕಾರಣವಾಗಿ, ಅವರು ತಮ್ಮ ದೊಡ್ಡಮ್ಮನ ಹತ್ತಿರ ಬೆಳೆಯಬೇಕಾದ ಸಂದರ್ಭ ಬರುತ್ತದೆ. ಮಿಝುಕಿ ಸುಜಿಮುರರ ಕಾದಂಬರಿಯ ವಸ್ತು ಈ ಕಾರಣಕ್ಕೆ ನವೋಮಿಯವರಿಗೆ ಹತ್ತಿರವಾಗಿರಬಹುದು. ನವೋಮಿ ತನ್ನ ಪ್ರೇಕ್ಷಕನನ್ನ ಸಿನಿಮಾ ಪ್ರಾರಂಭದಿಂದಲೂ ಅಳಿಸಲು ಪ್ರಯತ್ನಿಸುತ್ತಾಳೆ. ಈ ಸಂಗತಿಗಳಿಗೆಲ್ಲಾ ಭಾವುಕವಾಗಬಾರದು ಅಂತ ಎಷ್ಟೇ ಕಠಿಣವಾಗಿರಲೂ ಪ್ರಯತ್ನಿಸಿದರೂ ಸಿನಿಮಾದ ಕಡೆಯ ಹಿಂದಿನ ಒಂದು ದೃಶ್ಯ ಮಾತ್ರ ಆರ್ದ್ರಗೊಳಿಸದೆ ಬಿಡದು.

ಯದುನಂದನ್ ಕೀಲಾರ

ಯದುನಂದನ್ ಕೀಲಾರ
ಜಗತ್ತಿನ ಸಿನಿಮಾಗಳ ವೀಕ್ಷಣೆ ಮತ್ತು ಅವುಗಳು ಬೀರುವ ಸಾಮಾಜಿಕ ಪ್ರಭಾವದ ಸಾಧ್ಯತೆಗಳ ಬಗ್ಗೆ ಅಪಾರ ಉತ್ಸಾಹ ಇರುವ ಯದುನಂದನ್ ಸಿನಿಮಾಗಳ ರಾಜಕೀಯ ನಿಲುವುಗಳನ್ನು ತೀಕ್ಷ್ಣವಾಗಿ ಶೋಧಿಸುತ್ತಾರೆ.


ಇದನ್ನೂ ಓದಿ: ಪಿಕೆ ಟಾಕೀಸ್; ಮುಂದುವರೆದ ದೇಶದ ಸಾಮಾಜಿಕ, ಆರ್ಥಿಕ, ಧಾರ್ಮಿಕ ಸಂಕೋಲೆಗಳಲ್ಲಿ ಸಿಕ್ಕಿಕೊಂಡವರ ಕಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...